ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಬೆಂಗಳೂರಿಗೆ ಆಗಮಿಸುತ್ತಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಭದ್ರತಾ ಕಾರಣಕ್ಕಾಗಿ ಹಲವು ಪ್ರದೇಶಗಳಲ್ಲಿ ರಸ್ತೆ ಸಂಚಾರಕ್ಕೆ ಪೊಲೀಸರು ನಿರ್ಬಂಧ ಹೇರಿದ್ದಾರೆ.
ನಗರದ ಮಾಗಡಿ ರಸ್ತೆಯ ನೈಸ್ ರೋಡ್ ಜಂಕ್ಷನ್ ನಿಂದ ಸುಮನಹಳ್ಳಿ ಜಂಕ್ಷನ್ ವರೆಗ (5.3 ಕಿ.ಮೀ) ಪ್ರಧಾನಮಂತ್ರಿಗಳು ಇಂದು ಸಂಜೆ ರೋಡ್ ಶೋ ಮೂಲಕ ಮತಯಾಚನೆ ಮಾಡಲಿದ್ದಾರೆ. ಈ ವೇಳೆ ರಸ್ತೆಯ ಎರಡೂ ಬದಿಯಲ್ಲಿ ಅಸಂಖ್ಯಾತ ಜನರನ್ನು ಒಗ್ಗೂಡಿಸಿ ಮೋದಿಯವರ ರೋಡ್ ಶೋ ಯಶಸ್ವಿಗೊಳಿಸಲು ಬಿಜೆಪಿ ನಿರ್ಧರಿಸಿದೆ.
ಈ ರೋಡ್ ಶೋ ಯಶವಂತಪುರ, ರಾಜರಾಜೇಶ್ವರಿನಗರ, ದಾಸರಹಳ್ಳಿ, ಮಹಾಲಕ್ಷ್ಮೀ ಲೇ ಔಟ್, ಗೋವಿಂದರಾಜ ನಗರ, ರಾಜಾಜಿನಗರ ಹಾಗೂ ವಿಜಯನಗರ ಕ್ಷೇತ್ರಗಳ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ ಪ್ರಧಾನಮಂತ್ರಿಗಳ ರೋಡ್ ಶೋಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸಿ ವಿರೋಧಿಗಳ ಎದೆಯಲ್ಲಿ ನಡುಕ ಹುಟ್ಟಿಸಲು ಆ ಕ್ಷೇತ್ರಗಳ ಹುರಿಯಾಳುಗಳು ಅಣಿಯಾಗಿದ್ದಾರೆ. ಅಲ್ಲದೆ, ಈ 7 ಕ್ಷೇತ್ರಗಳ ಪೈಕಿ 3 ಕ್ಷೇತ್ರಗಳನ್ನ ರಾಜ್ಯ ಸರ್ಕಾರದ ಹಾಲಿ ಮೂವರು ವಲಸೆ ಸಚಿವರು ಪ್ರತಿನಿಧಿಸುತ್ತಿದ್ದಾರೆ.
ಮೋದಿಯವರ ರೋಡ್ ಶೋ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಸುಮಾರು 3 ಸಾವಿರಕ್ಕೂ ಅಧಿಕ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ರೋಡ್ ಶೋ ಬಂದೋಬಸ್ತ್ ನಲ್ಲಿ ಇಬ್ಬರು ಹೆಚ್ಚುವರಿ ಆಯುಕ್ತರು, 6 ಡಿಸಿಪಿ, 18 ಎಸಿಪಿ, 120 ಇನ್ಸ್ ಪೆಕ್ಟರ್, 250 ಸಬ್ ಇನ್ಸ್ ಪೆಕ್ಟರ್, 2600 ಪೊಲೀಸರು ಹಾಗೂ ರಾಜ್ಯ ಮತ್ತು ಕೇಂದ್ರ ಭದ್ರತಾ ಪಡೆಗಳ ತುಕಡಿಗಳು ಪಾಲ್ಗೊಳ್ಳಲಿವೆ. ರಸ್ತೆಯ ಉದ್ದಗಲಕ್ಕೂ ಪ್ರತಿ 5 ಮೀಟರ್'ಗೆ ಒಬ್ಬರಂತೆ ಖಾಕಿಧಾರಿ ಇರಲಿದ್ದಾರೆ.
ಸಂಚಾರ ಬದಲಾವಣೆ
Advertisement