ಬೆಂಗಳೂರು: ಪತ್ನಿ, ಇಬ್ಬರು ಹೆಣ್ಣುಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಟೆಕ್ಕಿ

ಪತ್ನಿ ಮತ್ತು ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬುಧವಾರ ರಾತ್ರಿ ಶೀಗೆಹಳ್ಳಿಯ ಸಾಯಿ ಗಾರ್ಡನ್ ಅಪಾರ್ಟ್​ಮೆಂಟ್​ನಲ್ಲಿ ನಡೆದಿದೆ. 
ವೀರಾರ್ಜುನ ವಿಜಯ್ ಹಾಗೂ ಅವರ ಪತ್ನಿ
ವೀರಾರ್ಜುನ ವಿಜಯ್ ಹಾಗೂ ಅವರ ಪತ್ನಿ
Updated on

ಬೆಂಗಳೂರು: ಪತ್ನಿ ಮತ್ತು ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬುಧವಾರ ರಾತ್ರಿ ಶೀಗೆಹಳ್ಳಿಯ ಸಾಯಿ ಗಾರ್ಡನ್ ಅಪಾರ್ಟ್​ಮೆಂಟ್​ನಲ್ಲಿ ನಡೆದಿದೆ. 

ಆಂಧ್ರ ಪ್ರದೇಶ ಮೂಲದ ಟೆಕ್ಕಿ ವೀರಾರ್ಜುನ ವಿಜಯ್(31) ಅವರು ತಮ್ಮ ಪತ್ನಿ ಹೇಮಾವತಿ(29) ಮತ್ತು ಒಂದೂವರೆ ವರ್ಷ ಮತ್ತು 8 ತಿಂಗಳ ಎರಡು ಹೆಣ್ಣುಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಘಟನಾ ಸ್ಥಳಕ್ಕೆ ಎಫ್ಎಸ್ಎಲ್ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಈ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಖಾಸಗಿ ಕಂಪೆನಿಯಲ್ಲಿ ಟೆಕ್ಕಿಯಾಗಿದ್ದ ವೀರಾರ್ಜುನ ವಿಜಯ್​​, ಕಳೆದ 6 ವರ್ಷದಿಂದ ವೈಟ್ ಫೀಲ್ಡ್ ಸಮೀಪದ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಮೊದಲು ಪತ್ನಿ ಹಾಗೂ ಮಕ್ಕಳನ್ನ ಕೊಲೆಗೈದು ಬಳಿಕ ವೀರಾರ್ಜುನ ವಿಜಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com