ಕ್ಷುಲ್ಲಕ ವಿಚಾರಕ್ಕೆ ಜಗಳ: ಪತ್ನಿ ಕೊಂದು ಪತಿ ಆತ್ಮಹತ್ಯೆಗೆ ಶರಣು

ಕ್ಷುಲ್ಲಕ ವಿಚಾರಕ್ಕೆ ಪತಿ ಹಾಗೂ ಪತ್ನಿ ಜೊತೆಗೆ ನಡೆದ ಜಗಳವೊಂದು ಕೊಲೆಯಲ್ಲಿ ಅಂತ್ಯವಾದ ಘಟನೆ ನಗರದ ಹೊರವಲಯದ ಸರ್ಜಾಪುರದಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಕ್ಷುಲ್ಲಕ ವಿಚಾರಕ್ಕೆ ಪತಿ ಹಾಗೂ ಪತ್ನಿ ಜೊತೆಗೆ ನಡೆದ ಜಗಳವೊಂದು ಕೊಲೆಯಲ್ಲಿ ಅಂತ್ಯವಾದ ಘಟನೆ ನಗರದ ಹೊರವಲಯದ ಸರ್ಜಾಪುರದಲ್ಲಿ ನಡೆದಿದೆ.

ಆನೇಕಲ್ ತಾಲೂಕಿನ ಬಿಕ್ಕನಹಳ್ಳಿಯ ಜನತಾ ಕಾಲೋನಿ ನಿವಾಸಿ ಲಕ್ಷ್ಮಮ್ಮ (47) ಹತ್ಯೆಯಾದ ಮಹಿಳೆಯಾಗಿದ್ದಾರೆ. ಆರೋಪಿಯನ್ನು ವೆಂಕಟಸ್ವಾಮಿ (53) ಎಂದು ಗುರ್ತಿಸಲಾಗಿದೆ.

ಆರೋಪಿ ವೆಂಕಟಸ್ವಾಮಿ ಹಾಗೂ ಪತ್ನಿ ಲಕ್ಷ್ಮಮ್ಮ ದಿನಗೂಲಿ ಕಾರ್ಮಿಕರಾಗಿದ್ದರು. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಇಬ್ಬರಿಗೂ ಮದುವೆಯಾಗಿದೆ.

ಮಂಗಳವಾರ ತಡರಾತ್ರಿ ದಂಪತಿಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ಜಗಳವಾಗಿದ್ದು, ಈ ವೇಳೆ ಕೆಂಡಾಮಂಡಲಗೊಂಡಿರುವ ಪತಿ, ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ನಂತರ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಈ ಸಂಬಂಧ ಸರ್ಜಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮುಂದಿನ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com