ಬೆಂಗಳೂರು: ಜೈಲಿನಿಂದ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ರೌಡಿಶೀಟರ್ ಬರ್ಬರ ಹತ್ಯೆ

ಜೈಲಿನಿಂದ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ರೌಡಿಶೀಟರ್​ ಒಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸಿದ್ದಾಪುರ ಮಹೇಶ್
ಸಿದ್ದಾಪುರ ಮಹೇಶ್
Updated on

ಬೆಂಗಳೂರು: ಜೈಲಿನಿಂದ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ರೌಡಿಶೀಟರ್​ ಒಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಇಂದು ಸಂಜೆ ಜೈಲಿನಿಂದ ಬಿಡುಗಡೆಯಾದ ರೌಡಿಶೀಟರ್​ ಸಿದ್ದಾಪುರ ಮಹೇಶ್​ ನನ್ನು ಹತ್ಯೆ ಮಾಡಿ, ದುಷ್ಕರ್ಮಿಗಳು ಪರಾರಿ ಆಗಿದ್ದಾರೆ.

ವಿಲ್ಸನ್‌ಗಾರ್ಡನ್ ನಾಗ, ಸಿದ್ದಾಪುರ ಮಹೇಶ್ ಮಧ್ಯೆ ದ್ವೇಷವಿತ್ತು. 2020ರಲ್ಲಿ  ಜಯನಗರದಲ್ಲಿ ನಡೆದಿದ್ದ ಮದನ್ ಕೊಲೆ ಕೇಸ್‌ನಲ್ಲಿ ಭಾಗಿಯಾಗಿ ಮಹೇಶ್​ ಜೈಲು ಸೇರಿದ್ದರು.

ಹೊಸ ರೋಡ್​ ಜಂಕ್ಷನ್​ ಬಳಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಮಹೇಶ್ ಮೇಲೆ ದಾಳಿ​ ಮಾಡಿದ ದುಷ್ಕರ್ಮಿಗಳು, ಮನಸೋಇಚ್ಛೆ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. 

ಸ್ಥಳಕ್ಕೆ ಭೇಟಿ ನೀಡಿದ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com