ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ 2 ದಿನಗಳ ಕಾಲ ಮಳೆ ಮುನ್ಸೂಚನೆ

ಮುಂದಿನ ಎರಡು ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಮುಂದಿನ ಎರಡು ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.

ನೈಋತ್ಯ ಮಾನ್ಸೂನ್ ಕರಾವಳಿ ಕರ್ನಾಟಕದಲ್ಲಿ ದುರ್ಬಲವಾಗಿದೆ. ಆದರೆ, ಒಳನಾಡಿನಲ್ಲಿ ಸಾಮಾನ್ಯವಾಗಿದೆ. ಆಗಸ್ಟ್ 27 ರಂದು ಬೆಳಿಗ್ಗೆ 8 ಗಂಟೆಯವರೆಗೆ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ 5 ಸೆಂ.ಮೀ, ತುಮಕೂರಿನ ಗುಬ್ಬಿ ಮತ್ತು ಚಿಕ್ಕನಹಳ್ಳಿಯಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಬೇವೂರು ಮತ್ತು ಯಲಬುರ್ಗಾ, ಕವಡಿಮಟ್ಟಿ (ಯಾದಗಿರಿ), ಹೊಸಕೋಟೆ (ಬೆಂಗಳೂರು ಗ್ರಾಮಾಂತರ), ಶೃಂಗೇರಿ (ಚಿಕ್ಕಮಗಳೂರು), ಬೆಳ್ಳೂರು (ಮಂಡ್ಯ) ಮತ್ತು ದಾವಣಗೆರೆಯಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ.

ಕುಕನೂರು, ಮುನಿರಾಬಾದ್ (ಕೊಪ್ಪಳ), ರಾಯಚೂರು ಮತ್ತು ದೇವದುರ್ಗ (ರಾಯಚೂರು), ಶೋರಾಪುರ (ಯಾದಗಿರಿ), ಚನ್ನಗಿರಿ (ದಾವಣಗೆರೆ), ಶಿವಮೊಗ್ಗ, ಕಡೂರು ಮತ್ತು ಕೊಟ್ಟೂರಿನಲ್ಲಿ ತಲಾ 1 ಸೆಂ.ಮೀ ಮಳೆ ದಾಖಲಾಗಿದೆ.

ಮುಂದಿನ ಎರಡು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com