ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ಸ್ ನೀರು ಬಿಡಲು CWRC ಆದೇಶ: ಸಿಎಂ ಮತ್ತು ಡಿಸಿಎಂ ಹೇಳಿದ್ದೇನು?

ಕಾವೇರಿ ನದಿ ನೀರು ನಿರ್ವಹಣಾ ಸಮಿತಿಯಿದಿಂದ ಸೂಚನೆ ಬರುತ್ತಿದ್ದಂತೆ ನಿನ್ನೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಸಭೆ ನಡೆಸಿ ಮುಂದಿನ 15 ದಿನಗಳವರೆಗೆ 5,000 ಕ್ಯೂಸೆಕ್ ನೀರು ಹರಿಸುವಂತೆ ಹೇಳಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕಾವೇರಿ ನದಿ ನೀರು ನಿರ್ವಹಣಾ ಸಮಿತಿಯಿದಿಂದ ಸೂಚನೆ ಬರುತ್ತಿದ್ದಂತೆ ನಿನ್ನೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಸಭೆ ನಡೆಸಿ ಮುಂದಿನ 15 ದಿನಗಳವರೆಗೆ 5,000 ಕ್ಯೂಸೆಕ್ ನೀರು ಹರಿಸುವಂತೆ ಹೇಳಿದೆ. ಪ್ರತಿದಿನ 24 ಸಾವಿರ ಕ್ಯೂಸೆಕ್ ಹರಿಸುವಂತೆ ಅವರು ವಾದಿಸಿದ್ದರು. ನಾವು ಅಷ್ಟು ನೀರು ಹರಿಸಲು ಆಗುವುದಿಲ್ಲವೆಂದು ವಾದ ಮಂಡಿಸಿದ್ದು, ಹಾಗಾಗಿ ಪ್ರತಿದಿನ 5 ಸಾವಿರ ಕ್ಯೂಸೆಕ್ ಹರಿಸಲು ಸೂಚಿಸಲಾಗಿದೆ ಎಂದರು.

ಸಂಕಷ್ಟ ಸೂತ್ರದಂತೆ ಅಷ್ಟು ನೀರು ಹರಿಸಲು ಆಗಲ್ಲವೆಂದು ಮನವರಿಕೆ ಮಾಡುತ್ತೇವೆ. ನಮ್ಮ ಕಾನೂನು ಘಟಕದ ಜೊತೆ ಮಾತನಾಡುತ್ತೇನೆ. ಜಲಸಂಪನ್ಮೂಲ ಇಲಾಖೆ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದರು. 

ಸಿಡಬ್ಲ್ಯುಆರ್‌ಸಿ ನಿರ್ದೇಶನವು ರಾಜ್ಯಕ್ಕೆ ಅನುಕೂಲಕರವಾಗಿದೆಯೇ ಅಥವಾ ಅನನುಕೂಲವಾಗಿದೆಯೇ, ನಮ್ಮ ಜಲಾಶಯಗಳಲ್ಲಿ ನೀರಿರಲಿ ಅಥವಾ ಇಲ್ಲದಿರಲಿ ಇವೆಲ್ಲವನ್ನೂ ನಾವು ಪರಿಶೀಲಿಸಬೇಕು. ಕರ್ನಾಟಕಕ್ಕೆ ನೀರಿಲ್ಲ, ನಾವು ನಮ್ಮ ಬೆಳೆಗಳನ್ನು ಉಳಿಸಬೇಕು, ರೈತರ ಹಿತವನ್ನು ಕಾಪಾಡಬೇಕು ಮತ್ತು ಜನರ ಕುಡಿಯುವ ನೀರಿನ ಅಗತ್ಯತೆಗಳನ್ನು ಕಾಪಾಡಬೇಕು. ಈ ಎಲ್ಲಾ ಅಂಶಗಳನ್ನು ಪರಿಶೀಲಿಸಿದ ನಂತರ ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ, ನಾನು ತಕ್ಷಣ ಕಾನೂನು ತಂಡವನ್ನು ಸಂಪರ್ಕಿಸುತ್ತೇನೆ ಎಂದರು.

ಡಿಸಿಎಂ ಡಿಕೆಶಿ ಪ್ರತಿಕ್ರಿಯೆ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಪ್ರತಿಕ್ರಿಯಿಸಿದ್ದು, ಇದೇ ಅಂತಿಮವಲ್ಲ, ನಾಳೆ ಸುಪ್ರೀಂಕೋರ್ಟ್‌ನಲ್ಲಿ ಮನವಿ ಸಲ್ಲಿಸುತ್ತೇವೆ. ಸುಪ್ರೀಂಕೋರ್ಟ್‌ ನೀಡುವ ಆದೇಶದಂತೆ ಕ್ರಮ ಕೈಗೊಳ್ಳುತ್ತೇವೆ. ನಮ್ಮ ರೈತರ ಹಿತ ಮುಖ್ಯ, ವಿವಾದ ಬಗೆಹರಿಯುವುದು ಅಷ್ಟೇ ಮುಖ್ಯ. ನಾವು ಬಿಟ್ಟ ನೀರು ಬಿಳಿಗುಂಡ್ಲು ಮಾಪನ ಕೇಂದ್ರ ತಲುಪಲು 5 ದಿನ ಬೇಕು. ಬೀಗ ಅವರ ಕೈಯಲ್ಲಿದೆ, ಎಷ್ಟು ನೀರು ಬಿಡುತ್ತಾರೆ ಎಂಬುದರಲ್ಲಿ ಗೊಂದಲವಿಲ್ಲ ಎಂದು ಹೇಳಿದ್ದಾರೆ.

ಮಂಡ್ಯ ಕೆಆರ್​ಎಸ್​​​ ಬಳಿ ಪ್ರತಿಭಟನೆ: ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 5 ಸಾವಿರ ಕ್ಯೂಸೆಸ್ ‌ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶವನ್ನು ಖಂಡಿಸಿ  ಕೆ ಆರ್ ಎಸ್ ಜಲಾಶಯದ ಬಳಿ ಭೂಮಿ ತಾಯಿ ಹೋರಾಟ ಸಮಿತಿ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ಜ್ಞಾನ ಇಲ್ಲದವರು ನ್ಯಾಯಾಧೀಕರಣದಲ್ಲಿ ಇದ್ದಾರೆ. ರಾಜ್ಯ ಸರ್ಕಾರ ತಮಿಳುನಾಡಿನ ಸ್ನೇಹ ಬೆಳೆಸಿಕೊಳ್ಳಲು ನೀರು ಬಿಟ್ಟಿದೆ. ರಾಜ್ಯದ ರೈತರ ಜೊತೆ ಚೆಲ್ಲಾಟ ಆಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶ್ರೀರಂಗಪಟ್ಟಣದಲ್ಲಿ ರೈತರು ಪ್ರತಿಭಟನೆ ನಡೆಸಿದರು. 

ಮಂಡ್ಯ ಜಿಲ್ಲೆಯ ಬಹುತೇಕ ಭಾಗದ ರೈತರು ಇಂದು ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಈ ಬಾರಿ ಮುಂಗಾರು ಮಳೆ ಕೈಕೊಟ್ಟು ನಮಗೇ ಕುಡಿಯಲು, ಕೃಷಿಗೆ ನೀರು ಇಲ್ಲದಿರುವಾಗ ತಮಿಳು ನಾಡಿಗೆ ನೀರು ಬಿಟ್ಟರೆ ನಮ್ಮ ಗತಿ ಏನು ಎಂದು ರೈತರು ರೊಚ್ಚಿಗೆದ್ದಿದ್ದಾರೆ.

ಕಳೆದ ಆಗಸ್ಟ್ 11 ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWMA)ನಿರ್ದೇಶನದ ನಂತರ ಕರ್ನಾಟಕ 10,000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಿತು. ಆದರೆ ತಮಿಳು ನಾಡು CWMA ನಿರ್ದೇಶನವನ್ನು ಪ್ರಶ್ನಿಸಿ 24,000 ಕ್ಯೂಸೆಕ್ಸ್ಗೆ ಬೇಡಿಕೆಯಿಟ್ಟು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿಯನ್ನು ಸಲ್ಲಿಸಿತು.

ಈ ಹಿಂದೆ ಸಿಡಬ್ಲ್ಯುಆರ್ ಸಿ ಆದೇಶದಂತೆ 15,000 ಕ್ಯೂಸೆಕ್‌ನಿಂದ 10,000 ಕ್ಯೂಸೆಕ್‌ಗೆ ಬಿಡುಗಡೆ ಮಾಡಬೇಕಾದ ನೀರಿನ ಪ್ರಮಾಣವನ್ನು 10,000 ಕ್ಯೂಸೆಕ್‌ಗೆ ಇಳಿಸುವ ಪ್ರಾಧಿಕಾರದ ನಿರ್ಧಾರವನ್ನು ವಿರೋಧಿಸಿ ಆಗಸ್ಟ್ 11 ರಂದು, CWMA ಸಭೆಯಲ್ಲಿ ತಮಿಳು ನಾಡು ತಂಡವು ಸಭೆಯಿಂದ ಹೊರನಡೆದಿತ್ತು.

ನಂತರ, ತಮಿಳುನಾಡು ಸರ್ಕಾರವು 24,000 ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಮೊರೆ ಹೋಗಿತ್ತು. ಸುಪ್ರೀಂ ಕೋರ್ಟ್ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 1 ಕ್ಕೆ ಮುಂದೂಡಿದೆ ಮತ್ತು ಬಿಡುಗಡೆಯಾದ ನೀರು, ಕರ್ನಾಟಕ ಜಲಾಶಯಗಳಲ್ಲಿನ ಸಂಗ್ರಹಣೆ ಮಟ್ಟ ಇತ್ಯಾದಿಗಳ ಬಗ್ಗೆ ವರದಿಯನ್ನು ಸಲ್ಲಿಸುವಂತೆ CWMA ಗೆ ನಿರ್ದೇಶಿಸಿದೆ.

ಆಗಸ್ಟ್ 24 ರಂದು 10 ದಿನಗಳವರೆಗೆ ದಿನಕ್ಕೆ 24,000 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್‌ಗೆ ತಮಿಳುನಾಡು ಸಲ್ಲಿಸಿದ ಅರ್ಜಿಯ ವಿರುದ್ಧ ಕರ್ನಾಟಕ ತನ್ನ ಅಫಿಡವಿಟ್ ನ್ನು ಸಲ್ಲಿಸಿದೆ, ಇದು ಈ ವರ್ಷ ಕರ್ನಾಟಕದಲ್ಲಿ ಸಾಮಾನ್ಯ ಮಳೆಯಾಗಿದೆ ಎಂಬ ಊಹೆಯ ಆಧಾರದ ಮೇಲೆ ಹೇಳಿದೆ.

ಆಗಸ್ಟ್ 25 ರಂದು, ಸುಪ್ರೀಂ ಕೋರ್ಟ್ ತನಗೆ ಪರಿಣತಿ ಇಲ್ಲ ಎಂದು ಹೇಳುವ ಆದೇಶವನ್ನು ರವಾನಿಸಲು ನಿರಾಕರಿಸಿತು. ಸೆಪ್ಟೆಂಬರ್ 1 ರ ಮೊದಲು ತಾಂತ್ರಿಕ ಪರಿಣತಿಯೊಂದಿಗೆ ಸಂಬಂಧಿಸಿದ ಅಧಿಕಾರಿಗಳಿಂದ ವರದಿಯನ್ನು ಕೇಳಿದೆ. ಈಗ, ಸಿಡಬ್ಲ್ಯುಆರ್ ಸಿಯ ನಿರ್ದೇಶನದೊಂದಿಗೆ ಕರ್ನಾಟಕಕ್ಕೆ 5,000 ಕ್ಯೂಸೆಕ್ ನೀರು ಮತ್ತು ಬಿಡುಗಡೆ ಮಂಗಳವಾರ ಸಿಡಬ್ಲ್ಯುಎಂಎಯ ಸಭೆ, ಸೆಪ್ಟೆಂಬರ್ 1 ರಂದು ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠ ನೀಡುವ ಆದೇಶದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com