ಕಾವೇರಿ ವಿವಾದ: ದೆಹಲಿಯಲ್ಲಿ ಕಾನೂನು ತಜ್ಞರು, ಅಧಿಕಾರಿಗಳೊಂದಿಗೆ ಡಿಸಿಎಂ ಡಿಕೆ ಶಿವಕುಮಾರ್ ಸಮಾಲೋಚನೆ

ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೆಹಲಿಯ ಕರ್ನಾಟಕ ಭವನದಲ್ಲಿ ಕಾನೂನು ತಜ್ಞರು ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಡಿಸಿಎಂ ಡಿಕೆ ಶಿವಕುಮಾರ್
ಡಿಸಿಎಂ ಡಿಕೆ ಶಿವಕುಮಾರ್
Updated on

ನವದೆಹಲಿ: ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೆಹಲಿಯ ಕರ್ನಾಟಕ ಭವನದಲ್ಲಿ ಕಾನೂನು ತಜ್ಞರು ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಇಂದು ನಮ್ಮ ಎಲ್ಲಾ ಕಾನೂನು ತಜ್ಞರೊಂದಿಗೆ ಸಭೆ ನಡೆಸಿದ್ದೇವೆ. ಈಗ ಇಡೀ ತಂಡ ಕರ್ನಾಟಕವನ್ನು ಪ್ರತಿನಿಧಿಸುತ್ತಿರುವ ಹಿರಿಯ ವಕೀಲರನ್ನು ಭೇಟಿ ಮಾಡಲು ಹೊರಟ್ಟಿದೆ. ತಮಿಳುನಾಡಿಗೆ 5,000 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನಮಗೆ ಆದೇಶ ನೀಡಿದೆ. ನೀರು ಇಲ್ಲದಿರುವುದು ಕರ್ನಾಟಕಕ್ಕೆ ದೊಡ್ಡ ನೋವಾಗಿದೆ. ಕರ್ನಾಟಕದ ರೈತರು ಹಾಗೂ ಅವರ ಭಾವನೆಗಳನ್ನು  ಗೌರವಿಸುತ್ತಾರೆ ಎಂಬ ವಿಶ್ವಾಸವಿಸಿದೆ ಎಂದರು. 

ನಾವೂ ತಮಿಳುನಾಡಿನ ರೈತರನ್ನು ಗೌರವಿಸುತ್ತೇವೆ. ಆದರೆ ಕರ್ನಾಟಕದಲ್ಲಿ ಅತ್ಯಂತ ಸಂಕಷ್ಟದ ಪರಿಸ್ಥಿತಿಯಿದೆ. ಮೇಕೆದಾಟು ಯೋಜನೆಯೊಂದೇ ಇದಕ್ಕೆ ಪರಿಹಾರ ಎಂಬುದು ನಮ್ಮ ಮನವಿಯಾಗಿದೆ. ಇದರಿಂದ ಕರ್ನಾಟಕಕ್ಕೆ ಮಾತ್ರವಲ್ಲ, ತಮಿಳುನಾಡಿಗೂ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com