social_icon

ಫಲಾನುಭವಿಗಳಿಗೆ ಗೃಹಲಕ್ಷ್ಮೀ ಯೋಜನೆ ತಲುಪುವಂತೆ ಮಾಡಲು ವಿಶೇಷ ಗಮನ ನೀಡಿ: ಅಧಿಕಾರಿಗಳಿಗೆ ತುಷಾರ್ ಗಿರಿನಾಥ್ ಸೂಚನೆ

ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಅರ್ಹ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಯೋಜನೆ ತಲುವಂತೆ ಮಾಡಲು ಸ್ಥಳೀಯ ಅಧಿಕಾರಿಗಳು ವಿಶೇಷ ಗಮನ ನೀಡಬೇಕೆಂದು  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಬುಧವಾರ ಹೇಳಿದರು.

Published: 31st August 2023 10:50 AM  |   Last Updated: 31st August 2023 12:49 PM   |  A+A-


Tushar Girinath

ನಗರದಲ್ಲಿ ನಡೆದ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದ ರಾಕೇಶ್ ಸಿಂಗ್ ಹಾಗೂ ತುಷಾರ್ ಗಿರಿನಾಥ್.

Posted By : Manjula VN
Source : The New Indian Express

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಅರ್ಹ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಯೋಜನೆ ತಲುವಂತೆ ಮಾಡಲು ಸ್ಥಳೀಯ ಅಧಿಕಾರಿಗಳು ವಿಶೇಷ ಗಮನ ನೀಡಬೇಕೆಂದು  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಬುಧವಾರ ಹೇಳಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ವಿತರಣೆ ಕಾರ್ಯಕ್ರಮವನ್ನು ಪಾಲಿಕೆಯ ಸರ್. ಪುಟ್ಟಣ್ಣ ಚೆಟ್ಟಿ ಪುರಭವನ(ಟೌನ್ ಹಾಲ್)ನಲ್ಲಿ ಏರ್ಪಡಿಸಲಾಗಿತ್ತು.

ಈ ಕಾರ್ಯಕ್ರಮಕ್ಕೆ ಆಡಳಿತಗಾರರಾದ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಚಾಲನೆ ನೀಡಿದರು. ಜತೆಗೆ ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದ ಶೈಲಜಾ, ಲೀಲಾ, ಲಲಿತಾ, ರಾಧ, ಗೌರಿ ಹಾಗೂ ಯಲ್ಲಮ್ಮ ಎಂಬುವವರಿಗೆ ಬಹುಮಾನ ವಿತರಣೆ ಮಾಡಲಾಯಿತು.

ಇದನ್ನೂ ಓದಿ: ಗೃಹಲಕ್ಷ್ಮೀ ಯೋಜನೆಗೆ ಮೈಸೂರಿನಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಚಾಲನೆ; ಮನೆ ಯಜಮಾನಿಯ ಖಾತೆಗೆ ಬರಲಿದೆ 2 ಸಾವಿರ ರೂಪಾಯಿ!

ಈ ವೇಳೆ ಮಾತನಾಡಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ರಾಜ್ಯದಲ್ಲಿರುವ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲಾ ₹2000 ನೀಡುವ ಯೋಜನೆ ಇದಾಗಿದೆ. ಸದ್ಯ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ಗೃಹಲಕ್ಷ್ಮಿ ಫಲಾನುಭವಿ ಮಹಿಳೆಯರೊಂದಿಗೆ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಹೇಳಿದರು.

ಪೂರ್ವ, ಪಶ್ಚಿಮ, ದಕ್ಷಿಣ ವಲಯದಲ್ಲಿ ತಲಾ 44, ಬೊಮ್ಮನಹಳ್ಳಿಯಲ್ಲಿ 16, ಮಹದೇವಪುರದಲ್ಲಿ 17, ಯಲಹಂಕದಲ್ಲಿ 11, ದಾಸರಹಳ್ಳಿಯಲ್ಲಿ 8 ಹಾಗೂ ರಾಜರಾಜೇಶ್ವರಿ ನಗರ ವಲಯದಲ್ಲಿ 14 ಕಡೆಗಳಲ್ಲಿ ಕಾರ್ಯಕ್ರಮ ಪ್ರಸಾರ ಮಾಡಲಾಗಿದೆ. ಪ್ರತಿಯೊಂದು ವಾರ್ಡ್‌ಗೆ ನೋಡಲ್ ಅಧಿಕಾರಿ ನಿಯೋಜಿಸಲಾಗಿದೆ ಎಂದು ತಿಳಿಸಿದರು.


Stay up to date on all the latest ರಾಜ್ಯ news
Poll
Rahul Dravid

ಟೀಂ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತು ಅವರ ಸಹಾಯಕ ಸಿಬ್ಬಂದಿಯ ಕಾಂಟ್ರ್ಯಾಕ್ಟ್ ವಿಸ್ತರಿಸುವ ಬಿಸಿಸಿಐ ನಿರ್ಧಾರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp