ಆಯುರ್ವೇದದ ಸಿರಪ್ ಕುಡಿದು 5 ಸಾವು: ಮೂವರ ಬಂಧನ

ಗುಜರಾತ್ ನ ಖೇಡಾ ಜಿಲ್ಲೆಯಲ್ಲಿ ಆಯುರ್ವೇದದ ಸಿರಪ್ ಕುಡಿದು 5 ಮಂದಿ ಸಾವನ್ನಪ್ಪಿದ ಪ್ರಕರಣದ ಸಂಬಂಧ ಮೂವರನ್ನು ಬಂಧಿಸಲಾಗಿದೆ.
ಆರೋಪಿ ಬಂಧನ (ಸಾಂದರ್ಭಿಕ ಚಿತ್ರ)
ಆರೋಪಿ ಬಂಧನ (ಸಾಂದರ್ಭಿಕ ಚಿತ್ರ)
Updated on

ಅಹ್ಮದಾಬಾದ್: ಗುಜರಾತ್ ನ ಖೇಡಾ ಜಿಲ್ಲೆಯಲ್ಲಿ ಆಯುರ್ವೇದದ ಸಿರಪ್ ಕುಡಿದು 5 ಮಂದಿ ಸಾವನ್ನಪ್ಪಿದ ಪ್ರಕರಣದ ಸಂಬಂಧ ಮೂವರನ್ನು ಬಂಧಿಸಲಾಗಿದೆ.

ಬಂಧಿತರ ಪೈಕಿ ಇಬ್ಬರು ದಿನಸಿ ವ್ಯಾಪಾರಿಗಳಾಗಿದ್ದು, ತಮ್ಮ ಅಂಗಡಿಯಲ್ಲಿ ಮೆಥನಾಲ್ ಹೊಂದಿರುವ ಆಯುರ್ವೇದ ಸಿರಪ್ ನ್ನು ಮಾರಾಟ ಮಾಡುತ್ತಿದ್ದರು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
 
ಈ ಆಯುರ್ವೇದ ಸಿರಪ್ ಬಾಟಲ್ ಗಳನ್ನು ಪೂರೈಕೆ ಮಾಡುತ್ತಿದ್ದ ಇನ್ನಿಬ್ಬರನ್ನು ಇನ್ನಷ್ಟೇ ಬಂಧಿಸಬೇಕಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಅಂಗಡಿ ಸಿರಪ್‌ನ ಬಾಟಲಿಗಳನ್ನು ಕನಿಷ್ಠ 50 ಜನರಿಗೆ ಮಾರಾಟ ಮಾಡಿದೆ.

ಪ್ರಕರಣದ ತನಿಖೆಗಾಗಿ ಉಪ ಪೊಲೀಸ್ ವರಿಷ್ಠಾಧಿಕಾರಿ ನಾಡಿಯಾಡ್ ನೇತೃತ್ವದಲ್ಲಿ 5  ಸದಸ್ಯರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಲಾಗಿದೆ ಎಂದು ಖೇಡಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಗಧಿಯಾ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com