ಆಯುರ್ವೇದದ ಸಿರಪ್ ಕುಡಿದು 5 ಸಾವು: ಮೂವರ ಬಂಧನ

ಗುಜರಾತ್ ನ ಖೇಡಾ ಜಿಲ್ಲೆಯಲ್ಲಿ ಆಯುರ್ವೇದದ ಸಿರಪ್ ಕುಡಿದು 5 ಮಂದಿ ಸಾವನ್ನಪ್ಪಿದ ಪ್ರಕರಣದ ಸಂಬಂಧ ಮೂವರನ್ನು ಬಂಧಿಸಲಾಗಿದೆ.
ಆರೋಪಿ ಬಂಧನ (ಸಾಂದರ್ಭಿಕ ಚಿತ್ರ)
ಆರೋಪಿ ಬಂಧನ (ಸಾಂದರ್ಭಿಕ ಚಿತ್ರ)

ಅಹ್ಮದಾಬಾದ್: ಗುಜರಾತ್ ನ ಖೇಡಾ ಜಿಲ್ಲೆಯಲ್ಲಿ ಆಯುರ್ವೇದದ ಸಿರಪ್ ಕುಡಿದು 5 ಮಂದಿ ಸಾವನ್ನಪ್ಪಿದ ಪ್ರಕರಣದ ಸಂಬಂಧ ಮೂವರನ್ನು ಬಂಧಿಸಲಾಗಿದೆ.

ಬಂಧಿತರ ಪೈಕಿ ಇಬ್ಬರು ದಿನಸಿ ವ್ಯಾಪಾರಿಗಳಾಗಿದ್ದು, ತಮ್ಮ ಅಂಗಡಿಯಲ್ಲಿ ಮೆಥನಾಲ್ ಹೊಂದಿರುವ ಆಯುರ್ವೇದ ಸಿರಪ್ ನ್ನು ಮಾರಾಟ ಮಾಡುತ್ತಿದ್ದರು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
 
ಈ ಆಯುರ್ವೇದ ಸಿರಪ್ ಬಾಟಲ್ ಗಳನ್ನು ಪೂರೈಕೆ ಮಾಡುತ್ತಿದ್ದ ಇನ್ನಿಬ್ಬರನ್ನು ಇನ್ನಷ್ಟೇ ಬಂಧಿಸಬೇಕಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಅಂಗಡಿ ಸಿರಪ್‌ನ ಬಾಟಲಿಗಳನ್ನು ಕನಿಷ್ಠ 50 ಜನರಿಗೆ ಮಾರಾಟ ಮಾಡಿದೆ.

ಪ್ರಕರಣದ ತನಿಖೆಗಾಗಿ ಉಪ ಪೊಲೀಸ್ ವರಿಷ್ಠಾಧಿಕಾರಿ ನಾಡಿಯಾಡ್ ನೇತೃತ್ವದಲ್ಲಿ 5  ಸದಸ್ಯರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಲಾಗಿದೆ ಎಂದು ಖೇಡಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಗಧಿಯಾ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com