ವಿವಾದ ಸೃಷ್ಟಿಸುವ ಬದಲು ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡಿ: ಶಾಸಕರು, ಸಚಿವರಿಗೆ ಸ್ಪೀಕರ್ ಖಾದರ್ ಸೂಚನೆ

ವಿವಾದ ಸೃಷ್ಟಿಸುವ ಬದಲು ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡಬೇಕ ಎಂದು ಸಚಿವರು ಹಾಗೂ ಶಾಸಕರಿಗೆ ವಿಧಾನಸಭಾಧ್ಯಕ್ಷ ಯುಟಿ ಖಾದರ್ ಅವರು ಶುಕ್ರವಾರ ಸೂಚನೆ ನೀಡಿದರು.
ಸ್ಪೀಕರ್ ಖಾದರ್ ಸೂಚನೆ
ಸ್ಪೀಕರ್ ಖಾದರ್ ಸೂಚನೆ
Updated on

ಬೆಳಗಾವಿ: ವಿವಾದ ಸೃಷ್ಟಿಸುವ ಬದಲು ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡಬೇಕ ಎಂದು ಸಚಿವರು ಹಾಗೂ ಶಾಸಕರಿಗೆ ವಿಧಾನಸಭಾಧ್ಯಕ್ಷ ಯುಟಿ ಖಾದರ್ ಅವರು ಶುಕ್ರವಾರ ಸೂಚನೆ ನೀಡಿದರು.

ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಇತರ ಕೆಲವು ಶಾಸಕರು ವಿಧಾನಸಭೆಯಲ್ಲಿ ಅಳವಡಿಸಿರುವ ವೀರ ಸಾವರ್ಕರ್ ಭಾವಚಿತ್ರವನ್ನು ತೆಗೆಯಬೇಕು ಎಂದು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಶಾಸಕರು ಮತ್ತು ಸಚಿವರು ಅಧಿವೇಶನಕ್ಕೆ ಸರಿಯಾದ ಸಮಯಕ್ಕೆ ಬರಬೇಕು. ಉತ್ತಮವಾಗಿ ಚರ್ಚೆ ನಡೆಸುವುದು, ಯೋಜನೆ ರೂಪಿಸುವುದು ಅವರ ಕೆಲಸ. ಅವರ ಕೆಲಸವನ್ನು ಅವರು ಚೆನ್ನಾಗಿ ಮಾಡಲಿ. ಯಾರು ಯಾವ ಕೆಲಸ ಮಾಡಬೇಕೋ ಅದೇ ಕೆಲಸವನ್ನು ಮಾಡಬೇಕು ಎಂದು ಹೇಳಿದರು.

ವಿಧಾನಸಭೆಯಲ್ಲಿ ಸಾವರ್ಕರ್ ಭಾವಚಿತ್ರ ತೆಗೆಸುವುದು ಸರಿಯಲ್ಲ, ಶಾಸಕರು, ಸಚಿವರು ವಿವಾದ ಸೃಷ್ಟಿಸುವ ಬದಲು ಜನರನ್ನು ಒಗ್ಗೂಡಿಸುವ ಕೆಲಸ ಮಾಡಬೇಕು. ಸಮಾಜದಲ್ಲಿ ಸೌಹಾರ್ದಯುತ ವಾತಾವರಣ ನಿರ್ಮಿಸಬೇಕು. ತಮ್ಮ ಕರ್ತವ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವತ್ತ ಗಮನ ಹರಿಸಬೇಕು ಎಂದು ತಿಳಿಸಿದರು.

‘ಹಿಂದೆ ಏನು ಆಗಿದೆಯೋ ಅದರ ಬಗ್ಗೆ ವಿಮರ್ಶೆ ಮಾಡುವುದಿಲ್ಲ. ರಾಜ್ಯದಲ್ಲಿ ಸೌಹಾರ್ದ ಮೂಡಿಸುವುದು ನನ್ನ ಕೆಲಸ. ಯಾವುದನ್ನೂ ಕಿತ್ತು ಎಸೆಯುವುದು ನನ್ನ ಕೆಲಸವಲ್ಲ. ಅದರ ಬದಲಿಗೆ ಬೆಸೆಯುವುದು ನನ್ನ ಕೆಲಸ. ಸೌಹಾರ್ದ ಮೂಡಿಸುವುದೇ ನನ್ನ ಆದ್ಯತೆ. ನಾನು ಸಾಂವಿಧಾನಿಕ ಚೌಕಟ್ಟಿನ ಅಡಿಯಲ್ಲಿ ಕೆಲಸ ಮಾಡುತ್ತೇನೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com