ಬೆಂಗಳೂರು: ಬಿಲ್ ಕಟ್ಟುವಂತೆ ಕೇಳಿದ್ದಕ್ಕೆ ಸಾಗರ್ ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ!

ಬಿಲ್ ಕಟ್ಟುವಂತೆ ಕೇಳಿದ್ದಕ್ಕೆ ಕೆಎಸ್ ಲೇಔಟ್‌ನಲ್ಲಿರುವ ಸಾಗರ್ ಆಸ್ಪತ್ರೆಯ ಬಿಲ್ಲಿಂಗ್ ವಿಭಾಗದ ಸಿಬ್ಬಂದಿ ಮೇಲೆ ರೋಗಿಯೊಬ್ಬರ ಪುತ್ರ ಹಲ್ಲೆ ನಡೆಸಿರುವ ಘಟನೆಯೊಂದು ನಗರದಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಬಿಲ್ ಕಟ್ಟುವಂತೆ ಕೇಳಿದ್ದಕ್ಕೆ ಕೆಎಸ್ ಲೇಔಟ್‌ನಲ್ಲಿರುವ ಸಾಗರ್ ಆಸ್ಪತ್ರೆಯ ಬಿಲ್ಲಿಂಗ್ ವಿಭಾಗದ ಸಿಬ್ಬಂದಿ ಮೇಲೆ ರೋಗಿಯೊಬ್ಬರ ಪುತ್ರ ಹಲ್ಲೆ ನಡೆಸಿರುವ ಘಟನೆಯೊಂದು ನಗರದಲ್ಲಿ ನಡೆದಿದೆ.

ಬಿಲ್ಲಿಂಗ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಕ್ರಮ್ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾರೆ. ಬುಧವಾರ ಸಂಜೆ ಘಟನೆ ನಡೆದಿದ್ದು, ವಿಕ್ರಮ್ ಅವರು ಕೆ.ಎಸ್.ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

43 ವರ್ಷದ ಮಹಿಳೆಯೊಬ್ಬರು ಡಿ.6ರಿಂದ ಬಹು ಅಂಗಾಂಗ ವೈಫಲ್ಯದಿಂದ ಕೆಎಸ್ ಲೇಔಟ್ 1ನೇ ಹಂತದಲ್ಲಿರುವ ಸಾಗರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ ಸಂಜೆ ವಿಕ್ರಮ್ ಅವರು ಮಹಿಳೆಯ ಪುತ್ರ ದೀಪಕ್ ಅವರ ಬಳಿ ಬಿಲ್ ಪಾವತಿ ಮಾಡುವಂತೆ ಕೇಳಿದ್ದು, ಇದರಿಂದ ಕೆಂಡಾಮಂಡಲಗೊಂಡಿರುವ ದೀಪತ್ ತನ್ನ ಸ್ನೇಹಿತನೊಂದಿಗೆ ಸೇರಿ ವಿಕ್ರಮ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಈ ವೇಳೆ ಆಸ್ಪತ್ರೆಯ ಭದ್ರತಾ ಸಿಬ್ಬಂದಿ ಹಾಗೂ ಇತರೆ ಸಿಬ್ಬಂದಿಗಳು ಮಧ್ಯಪ್ರವೇಶಿಸಿ ವಿಕ್ರಮ್ ಅವರನ್ನು ರಕ್ಷಣೆ ಮಾಡಿದ್ದಾರೆ. ಆಸ್ಪತ್ರೆಯಲ್ಲಿ ಮಹಿಳೆಗೆ ಚಿಕಿತ್ಸೆ ಮುಂದುವರೆದಿದ್ದು, ಮಹಿಳೆಯ ಜೊತೆ ಸಂಬಂಧಿಕರ ಉಪಸ್ಥಿತಿ ಅಗತ್ಯವಿರುವುದರಿಂದ ದೀಪಕ್ ಹಾಗೂ ಆತನ ಸ್ನೇಹಿತನನ್ನು ಇನ್ನೂ ಬಂಧನಕ್ಕೊಳಪಡಿಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com