ಪ್ರತಾಪ್‌ ಸಿಂಹ ಸಹೋದರ ವಿಕ್ರಮ್ ಮರಗಳ್ಳತನದಲ್ಲಿ ತೊಡಗಿದ್ದಾನೆ: ಕಾಂಗ್ರೆಸ್‌ ಆರೋಪ

ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹ ಮರಗಳ್ಳತನದಲ್ಲಿ ತೊಡಗಿದ್ದಾನೆಂದು ಕಾಂಗ್ರೆಸ್ ಭಾನುವಾರ ಆರೋಪಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹ ಮರಗಳ್ಳತನದಲ್ಲಿ ತೊಡಗಿದ್ದಾನೆಂದು ಕಾಂಗ್ರೆಸ್ ಭಾನುವಾರ ಆರೋಪಿಸಿದೆ.

ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್)ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ಅಣ್ಣ ಪ್ರತಾಪ್ ಸಿಂಹ ಸಂಸತ್ ದಾಳಿಕೋರರಿಗೆ ಪಾಸ್ ನೀಡುವ ಕೆಲಸದಲ್ಲಿದ್ದರೆ, ತಮ್ಮ ವಿಕ್ರಮ್ ಸಿಂಹ ಸಿನಿಮೀಯ ಮಾದರಿಯಲ್ಲಿ ಮರಗಳ್ಳತನದಲ್ಲಿ ತೊಡಗಿದ್ದಾನೆಂದು ಹೇಳಿದೆ.

ಸಂಸದ ಪ್ರತಾಪ್ ಸಿಂಹನ ಸಹೋದರ ವಿಕ್ರಮ್ ಸಿಂಹ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಮರಗಳನ್ನು ಕಡಿದು ಸಾಗಾಟ ನಡೆಸಿರುವುದು ದಕ್ಷ ಅಧಿಕಾರಿಯಾದ ತಹಸೀಲ್ದಾರ್ ಮಮತಾ ಅವರ ಮೂಲಕ ಬೆಳಕಿಗೆ ಬಂದಿದೆ ಎಂದು ತಿಳಿಸಿದೆ.

ಇದರಲ್ಲಿ ಕೆಲವು ಅರಣ್ಯ ಇಲಾಖೆಯ ಅಧಿಕಾರಿಗಳೂ ಕೈಜೋಡಿಸಿದ್ದು ಈ ಬಗ್ಗೆ ಸಚಿವ ಈಶ್ವರ್ ಖಂಡ್ರೆ ಅವರು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಅದೇಶಿಸಲಿದ್ದಾರೆಂದು ಹೇಳಿದೆ.

ಅಲ್ಲದೆ, ನಿಮ್ಮ ಜನಪ್ರತಿನಿಧಿಗಳು ಹಾಗೂ ಅವರ ಕುಟುಂಬಸ್ಥರು ಕೊಳ್ಳೆ ಹೊಡೆಯುವುದರಲ್ಲೇ ಬ್ಯುಸಿಯಾಗಿರುವುದೇಕೆ? ಎಂದು ಬಿಜೆಪಿಯನ್ನು ಪ್ರಶ್ನಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com