ಮೃತ ಯುವತಿ ರಾಜೇಶ್ವರಿ.
ರಾಜ್ಯ
ನಗರದಲ್ಲಿ ಮತ್ತೊಂದು ಗ್ಯಾಸ್ ಗೀಸರ್ ದುರಂತ: ವಿಷಾನಿಲ ಸೋರಿಕೆಯಾಗಿ ಯುವತಿ ಸಾವು
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇತ್ತೀಚೆಗಷ್ಟೇ ಗೀಸರ್ ಗ್ಯಾಸ್ ಸೋರಿಕೆಯಾಗಿ ಮಹಿಳೆ ಸಾವನ್ನಪ್ಪಿದ್ದರು, ಈ ಘಟನೆಯ ಬೆನ್ನಲ್ಲೇ ಇಂತಹದ್ದೇ ಮತ್ತೊಂದು ಘಟನೆ ವರದಿಯಾಗಿದೆ.
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇತ್ತೀಚೆಗಷ್ಟೇ ಗೀಸರ್ ಗ್ಯಾಸ್ ಸೋರಿಕೆಯಾಗಿ ಮಹಿಳೆ ಸಾವನ್ನಪ್ಪಿದ್ದರು, ಈ ಘಟನೆಯ ಬೆನ್ನಲ್ಲೇ ಇಂತಹದ್ದೇ ಮತ್ತೊಂದು ಘಟನೆ ವರದಿಯಾಗಿದೆ.
ಗೀಸರ್ ಗ್ಯಾಸ್ ಸೋರಿಕೆಯಾಗಿ ಯುವತಿ ಸಾವನ್ನಪ್ಪಿದ ಘಟನೆ ಬಸವೇಶ್ವರ ನಗರದ ಕೃಷ್ಣ ಕಲ್ಯಾಣ ಮಂಟಪ ಬಳಿ ನಡೆದಿದೆ.
ರಾಜೇಶ್ವರಿ (23) ಮೃತ ಯುವತಿ. ಡಿಸೆಂಬರ್ 20 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಡಿಸೆಂಬರ್ 20 ಮಧ್ಯಾಹ್ನ 1.45 ರಿಂದ 2 ಗಂಟೆ ಸುಮಾರಿಗೆ ಸ್ನಾನಕ್ಕೆ ತೆರಳಿದ್ದ ರಾಜೇಶ್ವರಿ ಬಹಳ ಸಮಯವಾದರೂ ಹೊರಗಡೆ ಬಂದಿರಲಿಲ್ಲ. ನಂತರ ಮನೆಯವರು ಬಾಗಿಲು ತೆಗೆದು ನೋಡಿದಾಗ ರಾಜೇಶ್ವರಿ ತೀವ್ರ ಅಸ್ವಸ್ಥಳಾಗಿ ಕೆಳಗೆ ಬಿದ್ದಿುವುದು ಕಂಡು ಬಂದಿದೆ.
ಕೂಡಲೇ ಆಕೆಯನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟರಲ್ಲೇ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಧೃಡಪಡಿಸಿದ್ದಾರೆ. ಘಟನೆ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ