ಬೆಂಗಳೂರು: ಕನ್ನಡ ಭಾಷೆ ಅತ್ಯಂತ ಸುಂದರ ಭಾಷೆ, ಕನ್ನಡ ವರ್ಣಮಾಲೆಯನ್ನು ಮಕ್ಕಳು ಸುಲಭವಾಗಿ, ವಿನೋದವಾಗಿ ಹೇಗೆ ಕಲಿಯಬಹುದು ಎಂದು ಕಲೆಗಾರ ಬಾದಲ್ ನಂಜುಂಡಸ್ವಾಮಿ (Baadal Nanjunadaswamy) ಪ್ರತಿ ಅಕ್ಷರಕ್ಕೆ ಚಿತ್ರಗಳನ್ನು ಜೋಡಿಸಿ ತೋರಿಸಿಕೊಟ್ಟಿದ್ದರು. ಇದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.
ಅದಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಪ್ರತಿಕ್ರಿಯಿಸಿದ್ದಾರೆ. ಕಿರಣ್ ಕುಮಾರ್ ಎಸ್ ಎಂಬವರು ಹಂಚಿಕೊಂಡಿದ್ದ ಟ್ವೀಟ್ಗೆ ರೀಟ್ವೀಟ್ ಮಾಡಿದ ಪ್ರಧಾನಿ ಮೋದಿ “ಭಾಷೆ ಕಲಿಯುವುದನ್ನು ಮೋಜಿನ ಚಟುವಟಿಕೆಯನ್ನಾಗಿ ಮಾಡಲು ಒಂದು ಸೃಜನಶೀಲ ಮಾರ್ಗ, ಸುಂದರವಾದ ಕನ್ನಡ ಭಾಷೆ” ಎಂದು ಬಣ್ಣಿಸಿದ್ದಾರೆ.
ತಮ್ಮ ಕಲೆಯನ್ನು ಭಾರತದ ಪ್ರಧಾನಿ ಗುರುತಿಸಿದ ಬಗ್ಗೆ ನಂಜುಂಡಸ್ವಾಮಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
Advertisement