ಬೆಂಗಳೂರು: ಹಳೇ ಕಟ್ಟಡ ನೆಲಸಮ ವೇಳೆ ಗೋಡೆ ಕುಸಿತ; ಇಬ್ಬರು ಕಾರ್ಮಿಕರ ದುರ್ಮರಣ

ನಗರದ ಮಹಾಲಕ್ಷ್ಮೀ ಲೇಔಟ್​ನ 10ನೇ ಕ್ರಾಸ್​ನಲ್ಲಿ ಹಳೇ ಕಟ್ಟಡ ನೆಲಸಮ ಮಾಡುವ ವೇಳೆ ಗೋಡೆ ಕುಸಿದು ಇಬ್ಬರು ಕಾರ್ಮಿಕರು ದುರ್ಮರಣ ಹೊಂದಿರುವ ದಾರುಣ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ನಗರದ ಮಹಾಲಕ್ಷ್ಮೀ ಲೇಔಟ್​ನ 10ನೇ ಕ್ರಾಸ್​ನಲ್ಲಿ ಹಳೇ ಕಟ್ಟಡ ನೆಲಸಮ ಮಾಡುವ ವೇಳೆ ಗೋಡೆ ಕುಸಿದು ಇಬ್ಬರು ಕಾರ್ಮಿಕರು ದುರ್ಮರಣ ಹೊಂದಿರುವ ದಾರುಣ ಘಟನೆ ನಡೆದಿದೆ. 

ಪಶ್ಚಿಮ ಬಂಗಳಾದ ಇಬ್ಬರು ಕೂಲಿ ಕಾರ್ಮಿಕರು ಮೃತಪಟ್ಟಿದ್ದಾರೆ. ಮೃತರು ಇನಾಮ್ ಉಲ್ಲಾ, ಸಿರಾಜ್ ಉಲ್ಲಾ ಎಂದು ತಿಳಿದುಬಂದಿದೆ. ಹಳೇ ಕಟ್ಟಡದ ಪಿಲ್ಲರ್ ಕುಸಿದು ಅವಘಡ ಸಂಭವಿಸಿದೆ. ಒಂದು ವಾರದಿಂದ ಕಾರ್ಮಿಕರು ಕೆಲಸ ಮಾಡುತ್ತಿದ್ದರು.

ಸ್ಥಳಕ್ಕೆ ಮಹಾಲಕ್ಷ್ಮೀ ಲೇಔಟ್​ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com