ಬೆಂಗಳೂರು: ಇಬ್ಬರು ಸರಗಳ್ಳರ ಬಂಧನ, 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ

ಇಬ್ಬರು ಸರಗಳ್ಳರನ್ನು ಕೆಂಗೇರಿ ಪೊಲೀಸರು ಮೈಸೂರಿನಲ್ಲಿ ಸೋಮವಾರ ಬಂಧನಕ್ಕೊಳಪಡಿಸಿದ್ದು, ರೂ.6 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಇಬ್ಬರು ಸರಗಳ್ಳರನ್ನು ಕೆಂಗೇರಿ ಪೊಲೀಸರು ಮೈಸೂರಿನಲ್ಲಿ ಸೋಮವಾರ ಬಂಧನಕ್ಕೊಳಪಡಿಸಿದ್ದು, ರೂ.6 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತರನ್ನು ಕಬ್ಬಾಳು ಅಲಿಯಾಸ್ ಚಂದು (27) ಮತ್ತು ರಘು ಅಲಿಯಾಸ್ ಕುಳ್ಳ (37) ಎಂದು ಗುರ್ತಿಸಲಾಗಿದೆ. ಬಂಧಿತರಿಂದ 5 ಚಿನ್ನದ ಸರ ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ಚಾಮರಾಜನಗರ, ಮಂಡ್ಯ ಸೇರಿದಂತೆ ಅಕ್ಕಪಕ್ಕದ ಜಿಲ್ಲೆಯ ಪೊಲೀಸರಿಗೆ ವಾಂಟೆಡ್ ಕ್ರಿಮಿನಲ್ ಗಳಾಗಿದ್ದರು. ಫೆಬ್ರವರಿ 7 ರಂದು ಕೆಂಗೇರಿ ಸ್ಯಾಟಲೈಟ್ ಟೌನ್‌ನ ಬಂಡೆ ಮಠದಲ್ಲಿ 71 ವರ್ಷದ ವೈದ್ಯನನ್ನು ದರೋಡೆ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com