ಬೆಂಗಳೂರು: ಇಬ್ಬರು ಸರಗಳ್ಳರನ್ನು ಕೆಂಗೇರಿ ಪೊಲೀಸರು ಮೈಸೂರಿನಲ್ಲಿ ಸೋಮವಾರ ಬಂಧನಕ್ಕೊಳಪಡಿಸಿದ್ದು, ರೂ.6 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತರನ್ನು ಕಬ್ಬಾಳು ಅಲಿಯಾಸ್ ಚಂದು (27) ಮತ್ತು ರಘು ಅಲಿಯಾಸ್ ಕುಳ್ಳ (37) ಎಂದು ಗುರ್ತಿಸಲಾಗಿದೆ. ಬಂಧಿತರಿಂದ 5 ಚಿನ್ನದ ಸರ ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ಕ್ಯಾಂಟರ್ ಹರಿದು ಮಹಿಳೆ ದುರ್ಮರಣ
ಆರೋಪಿಗಳು ಚಾಮರಾಜನಗರ, ಮಂಡ್ಯ ಸೇರಿದಂತೆ ಅಕ್ಕಪಕ್ಕದ ಜಿಲ್ಲೆಯ ಪೊಲೀಸರಿಗೆ ವಾಂಟೆಡ್ ಕ್ರಿಮಿನಲ್ ಗಳಾಗಿದ್ದರು. ಫೆಬ್ರವರಿ 7 ರಂದು ಕೆಂಗೇರಿ ಸ್ಯಾಟಲೈಟ್ ಟೌನ್ನ ಬಂಡೆ ಮಠದಲ್ಲಿ 71 ವರ್ಷದ ವೈದ್ಯನನ್ನು ದರೋಡೆ ಮಾಡಿದ್ದರು.
Advertisement