ಬೆಂಗಳೂರು: ಇಬ್ಬರು ಸರಗಳ್ಳರ ಬಂಧನ, 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ

ಇಬ್ಬರು ಸರಗಳ್ಳರನ್ನು ಕೆಂಗೇರಿ ಪೊಲೀಸರು ಮೈಸೂರಿನಲ್ಲಿ ಸೋಮವಾರ ಬಂಧನಕ್ಕೊಳಪಡಿಸಿದ್ದು, ರೂ.6 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಇಬ್ಬರು ಸರಗಳ್ಳರನ್ನು ಕೆಂಗೇರಿ ಪೊಲೀಸರು ಮೈಸೂರಿನಲ್ಲಿ ಸೋಮವಾರ ಬಂಧನಕ್ಕೊಳಪಡಿಸಿದ್ದು, ರೂ.6 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತರನ್ನು ಕಬ್ಬಾಳು ಅಲಿಯಾಸ್ ಚಂದು (27) ಮತ್ತು ರಘು ಅಲಿಯಾಸ್ ಕುಳ್ಳ (37) ಎಂದು ಗುರ್ತಿಸಲಾಗಿದೆ. ಬಂಧಿತರಿಂದ 5 ಚಿನ್ನದ ಸರ ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ಚಾಮರಾಜನಗರ, ಮಂಡ್ಯ ಸೇರಿದಂತೆ ಅಕ್ಕಪಕ್ಕದ ಜಿಲ್ಲೆಯ ಪೊಲೀಸರಿಗೆ ವಾಂಟೆಡ್ ಕ್ರಿಮಿನಲ್ ಗಳಾಗಿದ್ದರು. ಫೆಬ್ರವರಿ 7 ರಂದು ಕೆಂಗೇರಿ ಸ್ಯಾಟಲೈಟ್ ಟೌನ್‌ನ ಬಂಡೆ ಮಠದಲ್ಲಿ 71 ವರ್ಷದ ವೈದ್ಯನನ್ನು ದರೋಡೆ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com