ಹುಲಿ ದಾಳಿಗೆ ಇಬ್ಬರು ಬಲಿ: ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ದಕ್ಷಿಣ ಕೊಡಗಿನಲ್ಲಿ ಹುಲಿ ದಾಳಿಗೆ ಇಬ್ಬರು ಸಾವನ್ನಪ್ಪಿದ ಬೆನ್ನಲ್ಲೇ ಹುಲಿ ಹಿಡಿಯಲು ವಿಫಲವಾಗಿರುವ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಶಾಸಕರು ಆಗ್ರಹಿಸಿದರು.
ಹುಲಿಯನ್ನು ಸೆರೆ ಹಿಡಿದ ಅರಣ್ಯಾಧಿಕಾರಿಗಳು.
ಹುಲಿಯನ್ನು ಸೆರೆ ಹಿಡಿದ ಅರಣ್ಯಾಧಿಕಾರಿಗಳು.

ಬೆಂಗಳೂರು: ದಕ್ಷಿಣ ಕೊಡಗಿನಲ್ಲಿ ಹುಲಿ ದಾಳಿಗೆ ಇಬ್ಬರು ಸಾವನ್ನಪ್ಪಿದ ಬೆನ್ನಲ್ಲೇ ಹುಲಿ ಹಿಡಿಯಲು ವಿಫಲವಾಗಿರುವ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಶಾಸಕರು ಆಗ್ರಹಿಸಿದರು.

ಸೋಮವಾರ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಅವರು, ‘ಒಂದು ಬಾರಿ ಈ ಹುಲಿಗಳು ಮನುಷ್ಯರ ಮಾಂಸ ತಿನ್ನಲು ಅಭ್ಯಾಸ ಮಾಡಿಕೊಂಡರೆ ಅವು ಹೆಚ್ಚಾಗಿ ಮನುಷ್ಯರ ಆವಾಸಸ್ಥಾನಗಳಿಗೆ ನುಗ್ಗುತ್ತವೆ’ ಎಂದು ಹೇಳಿದರು.

ಅರಣ್ಯ ಇಲಾಖೆ ಅಧಿಕಾರಿಗಳು ಎಷ್ಟು ಬೇಜವಾಬ್ದಾರಿ ಹೊಂದಿದ್ದಾರೆ ಎಂಬುದನ್ನು ಈ ಘಟನೆ ತೋರಿಸುತ್ತದೆ. ಕೂಡಲೇ ಸಂಬಂಧಪಟ್ಟಂತಹ ಅರಣ್ಯಾಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದರು.

ಹುಣಸೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಚ್.ಪಿ.ಮಂಜುನಾಥ್ ಮಾತನಾಡಿ, ಈ ಹುಲಿ ಸಮಸ್ಯೆ ನಮ್ಮ ಕ್ಷೇತ್ರದಲ್ಲಿ ಹೆಚ್ಚಾಗಿದೆ. ಅಂತಹ ಘಟನೆಗಳ ನಂತರ, ನಾವು ಪರಿಹಾರವನ್ನು ನೀಡುತ್ತೇವೆ, ಆದರೆ ಕುಟುಂಬಗಳಿಗೆ ಸ್ಥಿತಿ ಏನಾಗುತ್ತದೆ ಎಂಬುದನ್ನು ಯೋಜಿಸುವುದಿಲ್ಲ. ಈ ಎರಡು ಸಾವಿನ ಸುದ್ದಿ ಕೇಳಿ ಆಘಾತದಿಂದ ಕುಟುಂಬದಲ್ಲಿ ಮತ್ತೊಂದು ಸಾವು ಸಂಭವಿಸಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com