social_icon

ಬೇಸಿಗೆ ಸಮಯ: ಬೆಂಗಳೂರಿನಲ್ಲಿ ಹೆಚ್ಚು ಯುವಕರಿಗೆ ಚಿಕನ್ ಪಾಕ್ಸ್; ತಜ್ಞರ ಎಚ್ಚರಿಕೆ

ಚಳಿಗಾಲದಿಂದ ಬೇಸಿಗೆ ಕಾಲಕ್ಕೆ ಬೆಂಗಳೂರು ಪರಿವರ್ತನೆಯಾಗುತ್ತಿರುವ ಹೊತ್ತಿನಲ್ಲೇ ಸಿಲಿಕಾನ್ ಸಿಟಿಯಲ್ಲಿ ಕ್ರಮೇಣ ಚಿಕನ್ ಪಾಕ್ಸ್ ಪ್ರಕರಣಗಳು ಹೆಚ್ಚುತ್ತಿದ್ದು, ಹೆಚ್ಚು ಯುವಕರಿಗೆ ಚಿಕನ್ ಪಾಕ್ಸ್ ತಗಲುವ ಅವಕಾಶವಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

Published: 17th February 2023 08:41 PM  |   Last Updated: 18th February 2023 06:14 PM   |  A+A-


chickenpox-in-Bengaluru

ಚಿಕನ್ ಪಾಕ್ಸ್ (ಸಂಗ್ರಹ ಚಿತ್ರ)

Posted By : Srinivasamurthy VN
Source : The New Indian Express

ಬೆಂಗಳೂರು: ಚಳಿಗಾಲದಿಂದ ಬೇಸಿಗೆ ಕಾಲಕ್ಕೆ ಬೆಂಗಳೂರು ಪರಿವರ್ತನೆಯಾಗುತ್ತಿರುವ ಹೊತ್ತಿನಲ್ಲೇ ಸಿಲಿಕಾನ್ ಸಿಟಿಯಲ್ಲಿ ಕ್ರಮೇಣ ಚಿಕನ್ ಪಾಕ್ಸ್ ಪ್ರಕರಣಗಳು ಹೆಚ್ಚುತ್ತಿದ್ದು, ಹೆಚ್ಚು ಯುವಕರಿಗೆ ಚಿಕನ್ ಪಾಕ್ಸ್ ತಗಲುವ ಅವಕಾಶವಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಹೌದು.. ಚಿಕನ್ ಪಾಕ್ಸ್ ಸಾಮಾನ್ಯವಾಗಿ ಮಕ್ಕಳನ್ನು ಕಾಡುವ ಸೋಂಕಾದರೂ ಮಕ್ಕಳು ಈ ರೋಗಕ್ಕೆ ತುತ್ತಾಗುವ ಸಾಧ್ಯತೆ ಹೆಚ್ಚಿದ್ದರೂ, ಈ ವರ್ಷ ಹೆಚ್ಚಿನ ಯುವಕರು ಕೂಡ ಈ ಸೋಂಕಿಗೆ ಒಳಗಾಗುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ಸ್ಥಳೀಯವಾಗಿ ಹೃದ್ರೋಗ ಚಿಕಿತ್ಸೆ ನೀಡಲು ಜಯದೇವ ಸಂಸ್ಥೆಯೊಂದಿಗೆ 45 ತಾಲೂಕು ಆಸ್ಪತ್ರೆಗಳ ಮ್ಯಾಪಿಂಗ್

ಸಕ್ರಾ ವರ್ಲ್ಡ್ ಹಾಸ್ಪಿಟಲ್‌ನ ಪೀಡಿಯಾಟ್ರಿಕ್ಸ್ ಮತ್ತು ನಿಯೋನಾಟಾಲಜಿ ವಿಭಾಗದ ಮುಖ್ಯಸ್ಥ ಡಾ.ರಜತ್ ಆತ್ರೇಯ ಮಾತನಾಡಿ, ಸಾಮಾನ್ಯವಾಗಿ ಬೇಸಿಗೆಯಲ್ಲಿ ಚಿಕನ್‌ಪಾಕ್ಸ್ ಪ್ರಕರಣಗಳು ಹೆಚ್ಚಾಗುತ್ತವೆ ಮತ್ತು ಹವಾಮಾನ ಬದಲಾಗುತ್ತಿರುವುದರಿಂದ ಚಿಕನ್ ಪಾಕ್ಸ್ ರೋಗಿಗಳು ಹೆಚ್ಚಾಗುತ್ತಿದ್ದಾರೆ. ಕಳೆದ ಕೆಲವು ವಾರಗಳಿಂದ ಪ್ರತಿದಿನ ಒಂದೋ ಎರಡೋ ಪ್ರಕರಣಗಳು ನಮ್ಮ ಆಸ್ಪತ್ರೆಗೆ ಬರುತ್ತಿವೆ. ಈ ವರ್ಷ, ಯುವ ವಯಸ್ಕರಲ್ಲಿ (20-30 ವರ್ಷಗಳು) ಹೆಚ್ಚಿನ ಪ್ರಕರಣಗಳನ್ನು ನೋಡಿ ಆಶ್ಚರ್ಯಚಕಿತರಾದೆವು. ಮಕ್ಕಳಲ್ಲಿ ಸುಧಾರಿತ ಲಸಿಕೆ ವ್ಯಾಪ್ತಿ, ಸೋಂಕುಗಳು ಮತ್ತು ಅವರಲ್ಲಿ ರೋಗದ ತೀವ್ರತೆಯನ್ನು ಕಡಿಮೆ ಮಾಡುವುದು ಇದಕ್ಕೆ ಕಾರಣ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕಲುಷಿತ ನೀರು ಸೇವನೆ ಪ್ರಕರಣ: ಮೃತರ ಸಂಖ್ಯೆ 3ಕ್ಕೆ ಏರಿಕೆ, 66 ಮಂದಿ ಅಸ್ವಸ್ಥ, ಸರ್ಕಾರದಿಂದ ಪರಿಹಾರ ಭರವಸೆ

ಅಂತೆಯೇ ಗರ್ಭಿಣಿಯರು ಹೆಚ್ಚು ಜಾಗರೂಕರಾಗಿರಬೇಕು ಮತ್ತು ಗರ್ಭಾವಸ್ಥೆಯಲ್ಲಿ ಯಾವುದೇ ತೊಂದರೆಗಳನ್ನು ತಪ್ಪಿಸಲು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ವೈದ್ಯರು ಎಚ್ಚರಿಸಿದ್ದಾರೆ. ಮಹಿಳೆಯರು ತಮ್ಮ ಕುಟುಂಬದಲ್ಲಿ ಸೋಂಕಿತರನ್ನು ಹೊಂದಿದ್ದರೆ, ಅವರು ಸಾಮಾಜಿಕ ಅಂತರವನ್ನು ಖಾತ್ರಿಪಡಿಸಿಕೊಳ್ಳಬೇಕು ಮತ್ತು ಸೋಂಕಿತ ವ್ಯಕ್ತಿಯೊಂದಿಗೆ ಅದೇ ಲಿನಿನ್ ಮತ್ತು ಟವೆಲ್ಗಳು ಮತ್ತು  ಬಟ್ಟೆಗಳನ್ನು ಹಂಚಿಕೊಳ್ಳುವುದನ್ನು ತಪ್ಪಿಸಬೇಕು. ಸೋಂಕಿತ ವ್ಯಕ್ತಿ ಬಳಸಿದ ಬಟ್ಟೆಗಳನ್ನು ಮತ್ತೊಬ್ಬರು ಬಳಸಬಾರದು. ಇದರಿಂದ ಸೋಂಕು ಪ್ರಸರಣ ತಕ್ಕ ಮಟ್ಟಿಗೆ ನಿಯಂತ್ರಿಸಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅವಧಿ ಮುಗಿಯುವ ಮೊದಲು ಲಸಿಕೆಗಳ ಬಳಕೆ ಮಾಡಿಕೊಂಡ ರಾಜ್ಯ ಸರ್ಕಾರ!

ಆಸ್ಟರ್ ಆರ್‌ವಿ ಆಸ್ಪತ್ರೆಯ ಆಂತರಿಕ ಔಷಧಿಗಳ (ಜನರಲ್ ಮೆಡಿಸಿನ್) ಸಲಹೆಗಾರ ಡಾ ಕೆಎಸ್ ಹರ್ಷಿತ್ ಮಾತನಾಡಿ, ಕಳೆದ 15 ದಿನಗಳಲ್ಲಿ ನಾವು ಆಸ್ಪತ್ರೆಯಲ್ಲಿ 3-4 ಹೊಸ ಪ್ರಕರಣಗಳನ್ನು ನೋಡಿದ್ದೇವೆ. ರೋಗಿಗಳು ಜ್ವರ, ಹಸಿವಿನ ಕೊರತೆ, ದಣಿವು ಮತ್ತು ಚರ್ಮದ ಕಿರಿಕಿರಿಯ ಲಕ್ಷಣಗಳೊಂದಿಗೆ ಬರುತ್ತಿದ್ದಾರೆ. ಅವರಿಗೆ ಆಂಟಿವೈರಲ್ ಔಷಧಗಳನ್ನು ಹಾಕಲಾಗುತ್ತದೆ ಮತ್ತು ಏಳು ದಿನಗಳವರೆಗೆ ತಮ್ಮನ್ನು ಪ್ರತ್ಯೇಕಿಸಲು ಹೇಳಲಾಗುತ್ತದೆ. ಮಕ್ಕಳಲ್ಲಿ ಅನೇಕ ಪ್ರಕರಣಗಳನ್ನು ನಾವು ಗಮನಿಸಿಲ್ಲ. ಸೋಂಕಿತರಲ್ಲಿ ಹೆಚ್ಚಿನವರು 18-25 ವಯಸ್ಸಿನವರಾಗಿದ್ದಾರೆ ಎಂದು ಹೇಳಿದ್ದಾರೆ.


Stay up to date on all the latest ರಾಜ್ಯ news
Poll
New parliament building

ಹೊಸ ಸಂಸತ್ ಕಟ್ಟಡದ ಉದ್ಘಾಟನೆಯನ್ನು ಬಹಿಷ್ಕರಿಸುವ ಹಲವಾರು ವಿರೋಧ ಪಕ್ಷಗಳ ನಿರ್ಧಾರವು ಸಮರ್ಥನೀಯವೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp