ರೂ.42.63 ಕೋಟಿ ತೆರಿಗೆ ಬಾಕಿ: ಮಂತ್ರಿ ಮಾಲ್ ಆಸ್ತಿ ಜಪ್ತಿಗೆ ಕೋರ್ಟ್ ತಡೆಯಾಜ್ಞೆ, ವಶಕ್ಕೆ ಪಡೆದಿದ್ದ ಚರಾಸ್ತಿ ವಾಪಸ್ ನೀಡಿದ ಬಿಬಿಎಂಪಿ

ಆಸ್ತಿ ತೆರಿಗೆ ಪಾವತಿಸದ ಮಂತ್ರಿ ಮಾಲ್'ಗೆ ಶಾಕ್ ನೀಡಲು ಮುಂದಾಗಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಂದಾಯ ವಿಭಾಗದ ಅಧಿಕಾರಿಗಳು, ಬರಿಗೈಯಲ್ಲಿ ವಾಪಸ್ಸಾಗಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಆಸ್ತಿ ತೆರಿಗೆ ಪಾವತಿಸದ ಮಂತ್ರಿ ಮಾಲ್'ಗೆ ಶಾಕ್ ನೀಡಲು ಮುಂದಾಗಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಂದಾಯ ವಿಭಾಗದ ಅಧಿಕಾರಿಗಳು, ಬರಿಗೈಯಲ್ಲಿ ವಾಪಸ್ಸಾಗಿದ್ದಾರೆ.

ಬೆಂಗಳೂರಿನ ಮಂತ್ರಿ ಮಾಲ್ ಆಸ್ತಿ ಜಪ್ತಿ ಪ್ರಕ್ರಿಯೆಯನ್ನು ನ್ಯಾಯಾಲಯದ ಆದೇಶದ ಮೇರೆಗೆ ಬಿಬಿಎಂಪಿ ಕೈಬಿಟ್ಟಿದೆ.

ಮಂತ್ರಿ ಮಾಲ್'ಗೆ ಶಾಕ್ ನೀಡಲು ಮುಂದಾಗಿದ್ದ ಬಿಬಿಎಂಪಿಗೆ ಕೋರ್ಟ್ ಆದೇಶದ ಬಗ್ಗೆ ಮಾಹಿತಿ ಇರಲಿಲ್ಲ. ಹೀಗಾಗಿ ದಾಳಿ ವೇಳೆ ವಶಕ್ಕೆ ಪಡೆದಿದ್ದ ಚರಾಸ್ತಿಗಳನ್ನು ಹಿಂದಕ್ಕೆ ನೀಡಿದೆ ಎಂದು ತಿಳಿದುಬಂದಿದೆ.

ಬಿಬಿಎಂಪಿ ಪಶ್ಚಿಮ ವಿಭಾಗದ ಜಂಟಿ ಆಯುಕ್ತ ಸಿ.ಯೋಗೇಶ್ ಮಾತನಾಡಿ, ಪಶ್ಚಿಮ ವಲಯದಲ್ಲಿ ನಂಬರ್ ಒನ್ ತೆರಿಗೆ ಸುಸ್ತಿದಾರರೆಂದರೆ ಮಂತ್ರಿ ಮಾಲ್ ಆಗಿದೆ, ಸುಮಾರು 40 ಕೋಟಿ ರೂ. ತೆರಿಗೆ ಕಟ್ಟದೆ ಬಾಕಿ ಉಳಿಸಿಕೊಂಡಿದೆ ಎಂದು ಹೇಳಿದ್ದಾರೆ.

"2018 ರಿಂದ ಇಲ್ಲಿಯವರೆಗೆ ಆಸ್ತಿ ತೆರಿಗೆ ಬಾಕಿ 42.63 ಕೋಟಿ ರೂ.ಗೆ ಏರಿಕೆಯಾಗಿದೆ. ಶನಿವಾರ ಬೆಳಗ್ಗೆ ಅಧಿಕಾರಿಗಳು ತೆರಳಿ ಮಂತ್ರಿ ಮಾಲ್‌ನಿಂದ ಚರ ಆಸ್ತಿಗಳನ್ನು ತೆಗೆದುಕೊಳ್ಳಲು ಪ್ರಾರಂಭಿಸಿದರು. ಆರಂಭದಲ್ಲಿ ನ್ಯಾಯಾಲಯದ ಆದೇಶದ ಬಗ್ಗೆ ಮಾಲ್ ಅಧಿಕಾರಿಗಳು ನಮಗೆ ತಿಳಿಸಲಿಲ್ಲ. ನಂತರ ನ್ಯಾಯಾಲಯದ ಆದೇಶವನ್ನು ತೋರಿಸಿದರು. ನಂತರ ನಾವು ದಾಳಿಯನ್ನು ಕೈಬಿಟ್ಟು, ವಶಕ್ಕೆ ಪಡೆದಿದ್ದ ಚರಾಸ್ತಿಗಳನ್ನು ವಾಪಸ್ ನೀಡಬೇಕಾಯಿತು ಎಂದು ತಿಳಿಸಿದ್ದಾರೆ.

ಬಿಬಿಎಂಪಿ ಕಾಯ್ದೆಯ ಸೆಕ್ಷನ್ 148(1)ರ ಅಡಿಯಲ್ಲಿ ಅಟ್ಯಾಚ್ ಮೆಂಟ್ ವಾರೆಂಟ್ ಜಾರಿ ಮಾಡಲಾಗಿತ್ತು ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

‘‘202ರಲ್ಲಿ ಮಾಲ್ ಅಧಿಕಾರಿಗಳು 10.4 ಕೋಟಿ ರೂ. ಚೆಕ್ ನೀಡಿದ್ದರು, ಆದರೆ, ಆ ಚೆಕ್ ಬೌನ್ಸ್ ಆಗಿದೆ’’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com