ನನ್ನ ನಾಟಕವನ್ನು ತಿರುಚಿದವರ ವಿರುದ್ಧ ಕ್ರಮ ಕೈಗೊಳ್ಳಿ: ಡಾ.ಚಂದ್ರಶೇಖರ ಕಂಬಾರ ಆಗ್ರಹ

ಮೈಸೂರಿನ ರಂಗಾಯಣದಲ್ಲಿ ನನ್ನ ನಾಟಕ ''ಸಾಂಬಶಿವ ಪ್ರಹಸನ''ವನ್ನು ನನ್ನ ಅನುಮತಿ ಇಲ್ಲದೆ ಪ್ರದರ್ಶಿಸಿದ್ದಲ್ಲದೆ ಅಸಹ್ಯಕರವಾಗಿ ಪ್ರದರ್ಶ ಮಾಡಲಾಗಿದ್ದು, ಇದಕ್ಕೆ ಕಾರಣರಾದ ಎಲ್ಲರ ಮೇಲೂ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಚಂದ್ರಶೇಖರ ಕಂಬಾರ ಅವರು ಆಗ್ರಹಿಸಿದ್ದಾರೆ.
ಡಾ.ಚಂದ್ರಶೇಖರ ಕಂಬಾರ.
ಡಾ.ಚಂದ್ರಶೇಖರ ಕಂಬಾರ.

ಮೈಸೂರು: ಮೈಸೂರಿನ ರಂಗಾಯಣದಲ್ಲಿ ನನ್ನ ನಾಟಕ ''ಸಾಂಬಶಿವ ಪ್ರಹಸನ''ವನ್ನು ನನ್ನ ಅನುಮತಿ ಇಲ್ಲದೆ ಪ್ರದರ್ಶಿಸಿದ್ದಲ್ಲದೆ ಅಸಹ್ಯಕರವಾಗಿ ಪ್ರದರ್ಶ ಮಾಡಲಾಗಿದ್ದು, ಇದಕ್ಕೆ ಕಾರಣರಾದ ಎಲ್ಲರ ಮೇಲೂ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಚಂದ್ರಶೇಖರ ಕಂಬಾರ ಅವರು ಆಗ್ರಹಿಸಿದ್ದಾರೆ.

ಈ ಸಂಬಂಧ ಮೈಸೂರು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದು ದೂರು ನೀಡಿರುವ ಅವರು, ಮೈಸೂರಿನ  ರಂಗಾಯಣದಲ್ಲಿ ನನ್ನ ನಾಟಕ ಸಾಂಬಶಿವ ಪ್ರಹಸನವನ್ನು ಅಸಹ್ಯವಾಗಿ ತಿರುಚಿ ಪ್ರದರ್ಶಿಸಿರುವ ಬಗ್ಗೆ ನನಗೆ ತುಂಬ ವಿಷಾದವಾಗಿದೆ. ಮೊದಲನೆಯದಾಗಿ ನನ್ನ ನಾಟಕ ಪ್ರದರ್ಶಿಸುವುದಕ್ಕೆ ನನ್ನ ಅನುಮತಿ ಕೇಳಲೇಬೇಕಾಗಿತ್ತು. ಆದರೆ ಇವರು ಕೇಳಿಲ್ಲ. ರಂಗಾಯಣವಾದರೂ ನನ್ನ ಅನುಮತಿ ಇಲ್ಲದ ನಾಟಕ ಪ್ರದರ್ಶನಕ್ಕೆ ಅವಕಾಶ ಕೊಟ್ಟಿರುವುದು ವಿಷಾದಕರ ಎಂದು ಹೇಳಿದ್ದಾರೆ.

ಎರಡನೆಯದಾಗಿ ನನ್ನ ಯಾವುದೇ ನಾಟಕಗಳಲ್ಲಿ ವ್ಯಕ್ತಿಗತ ನಿಂದನೆ ಇರುವುದು ಸಾಧ್ಯವಿಲ್ಲ. ಅನುಮತಿ ಇಲ್ಲದೆ ನಾಟಕವನ್ನು ಪ್ರದರ್ಶಿಸಿದ್ದಕ್ಕೆ ಪ್ರದರ್ಶಿಸಲು ಅವಕಾಶ ಮಾಡಿಕೊಟ್ಟವರಿಗೂ ಮತ್ತು ಇಲ್ಲದ ಸಾಹಿತ್ಯವನ್ನು ಸೇರಿಸಿದ್ದಕ್ಕೆ ನಿರ್ದೇಶಕರ ಮೇಲೂ ಹಾಗೂ ಈ ಅಹಿತಕರ ವಾತಾವರಣಕ್ಕೆ ಕಾರಣರಾದ ಸಂಬಂಧಪಟ್ಟ ಎಲ್ಲರ ಮೇಲೂ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ,

ಶನಿವಾರ ಪ್ರದರ್ಶನಗೊಂಡ ನಾಟಕದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರನ್ನು ಅವಹೇಳನ ಮಾಡಲಾಗಿದೆ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com