social_icon

ಬೆಂಗಳೂರು ನಗರ ಮಹಿಳೆಯರು-ಮಕ್ಕಳಿಗೆ ಸುರಕ್ಷಿತವಲ್ಲವೇ?: ಆತಂಕ ತಂದಿದೆ ನಗರ ಪೊಲೀಸ್ ಆಯುಕ್ತರು ಬಿಡುಗಡೆ ಮಾಡಿರುವ ವರದಿ!

ಬೆಂಗಳೂರು ಪೊಲೀಸ್ ಆಯುಕ್ತರು ಬಿಡುಗಡೆ ಮಾಡಿರುವ  ಅಂಕಿಅಂಶ ಆತಂಕವನ್ನುಂಟುಮಾಡುತ್ತಿದೆ. 2022 ರಲ್ಲಿ ನಗರದಲ್ಲಿ ನಡೆದ ಇತರ ಅಪರಾಧ ಪ್ರಕರಣಗಳಿಗೆ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧ ಪ್ರಕರಣಗಳಲ್ಲಿ ಶೇಕಡಾ 30 ರಷ್ಟು ಹೆಚ್ಚಳವಾಗಿದೆ.

Published: 05th January 2023 10:31 AM  |   Last Updated: 05th January 2023 05:06 PM   |  A+A-


Representational image

ಸಾಂದರ್ಭಿಕ ಚಿತ್ರ

Posted By : Sumana Upadhyaya
Source : The New Indian Express

ಬೆಂಗಳೂರು: ಬೆಂಗಳೂರು ಪೊಲೀಸ್ ಆಯುಕ್ತರು ಬಿಡುಗಡೆ ಮಾಡಿರುವ ಅಂಕಿಅಂಶ ಆತಂಕವನ್ನುಂಟುಮಾಡುತ್ತಿದೆ. 2022 ರಲ್ಲಿ ನಗರದಲ್ಲಿ ನಡೆದ ಇತರ ಅಪರಾಧ ಪ್ರಕರಣಗಳಿಗೆ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧ ಪ್ರಕರಣಗಳಲ್ಲಿ ಶೇಕಡಾ 30 ರಷ್ಟು ಹೆಚ್ಚಳವಾಗಿದೆ. ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಅಪರಾಧಗಳು ಪೋಕ್ಸೋ ಕಾಯ್ದೆಯಡಿ ದಾಖಲಾದ ಅಪರಾಧಗಳು, ವರದಕ್ಷಿಣೆ ಕಿರುಕುಳ, ಕಿರುಕುಳ ಮತ್ತು ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿವೆ. 

ಕಳೆದ ವರ್ಷ 153 ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 149 ಪ್ರಕರಣಗಳು ಸಂತ್ರಸ್ತರಿಗೆ ತಿಳಿದಿರುವ ಸಂಬಂಧಿಕರು, ಸುಳ್ಳು ಮದುವೆ ಭರವಸೆ ಮತ್ತು ಲಿವ್ ಇನ್ ರಿಲೇಷನ್ ಷಿಪ್ ನಲ್ಲಿ ನಡೆದಿವೆ. ಕೇವಲ ನಾಲ್ಕು ಮಂದಿ ಅಪರಿಚಿತ ವ್ಯಕ್ತಿಗಳಿಂದ ಅಪರಾಧ ಕೃತ್ಯಗಳು ನಡೆದಿವೆ. 

2022 ರಲ್ಲಿ ಬೆಂಗಳೂರು ನಗರದಲ್ಲಿ ವರದಿಯಾದ ಅಪರಾಧ ಮತ್ತು ಟ್ರಾಫಿಕ್ ಪ್ರಕರಣಗಳ ಅಂಕಿಅಂಶಗಳನ್ನು ಬಿಡುಗಡೆ ಮಾಡುವಾಗ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮಾಧ್ಯಮಗಳ ಮುಂದೆ ಆರೋಪಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಹಲವರು ತಮ್ಮ ಸಮಸ್ಯೆ ಹೇಳಿಕೊಂಡು ಮುಂದೆ ಬರುತ್ತಿರುವುದರಿಂದ ದಾಖಲಾದ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಎಂದು ಹೇಳಿದರು.

2020 ಮತ್ತು 2021ರಲ್ಲಿ 112 ಮತ್ತು 116 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. 2022 ರಲ್ಲಿ ಪೋಕ್ಸೋ ಕಾಯ್ದೆಯಡಿ 444 ಪ್ರಕರಣಗಳನ್ನು ದಾಖಲಿಸಲಾಗಿದೆ. 2020 ಮತ್ತು 2021 ರಲ್ಲಿ 286 ಮತ್ತು 399 ಪೋಕ್ಸೋ ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: 2022ರಲ್ಲಿ ಮಹಿಳೆಯರ ವಿರುದ್ದ 31,000 ಅಪರಾಧ ಪ್ರಕರಣಗಳು ದಾಖಲು: ರಾಷ್ಟ್ರೀಯ ಮಹಿಳಾ ಆಯೋಗ

2022ರಲ್ಲಿ ನಗರ ಪೊಲೀಸರು ದಾಖಲಿಸಿರುವ ಒಟ್ಟು ಪ್ರಕರಣಗಳಲ್ಲಿ ವಾಹನ ಕಳ್ಳತನವೇ ಅಗ್ರಸ್ಥಾನದಲ್ಲಿದೆ. ಭಾರತೀಯ ದಂಡ ಸಂಹಿತೆಯ (IPC) ವಿವಿಧ ಸೆಕ್ಷನ್‌ಗಳಡಿ ದಾಖಲಾಗಿರುವ ಒಟ್ಟು 28,518 ಪ್ರಕರಣಗಳಲ್ಲಿ 5,066 ವಾಹನಗಳು ಕಳ್ಳತನವಾಗಿದ್ದು, 1,189 ವಶಪಡಿಸಿಕೊಳ್ಳಲಾಗಿದೆ.

ಸುಮಾರು 478 ದರೋಡೆ ಪ್ರಕರಣಗಳು ದಾಖಲಾಗಿದ್ದು, 351 ಪ್ರಕರಣಗಳು ಪತ್ತೆಯಾಗಿವೆ. ಕೋವಿಡ್-ಸಂಬಂಧಿತ ನಿರ್ಬಂಧಗಳಿಂದಾಗಿ ಕಳೆದ ಮೂರು ವರ್ಷಗಳಿಗೆ ಹೋಲಿಸಿದರೆ ಅಪರಾಧ ಪ್ರಕರಣಗಳಲ್ಲಿ ಗಮನಾರ್ಹ ಏರಿಕೆ ಕಂಡುಬಂದಿಲ್ಲ. 172 ಕೊಲೆ ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ ಹೆಚ್ಚಿನವು ವೈಯಕ್ತಿಕ ಕಾರಣಗಳು, ಕೌಟುಂಬಿಕ ಕಲಹಗಳು ಮತ್ತು ಅಕ್ರಮ ಸಂಬಂಧಗಳಿಂದಾಗಿವೆ. ಸಂಚಾರ ಪೊಲೀಸರು 1.04 ಕೋಟಿ ಪ್ರಕರಣಗಳಿಗೆ ದಂಡವಾಗಿ 179 ಕೋಟಿ ರೂಪಾಯಿ ಸಂಗ್ರಹಿಸಿದ್ದಾರೆ. ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ 600 ವಿದೇಶಿಗರ ಪೈಕಿ 34 ಮಂದಿಯನ್ನು ಗಡಿಪಾರು ಮಾಡಲಾಗಿದ್ದು, 50 ಮಂದಿಯನ್ನು ನೆಲಮಂಗಲದ ಬಂಧನ ಕೇಂದ್ರಕ್ಕೆ ಕಳುಹಿಸಲಾಗಿದೆ.

ಮೋಟಾರು ವಾಹನ ಕಾಯ್ದೆಯಡಿ 44 ಲಕ್ಷ ಸವಾರರು ಹೆಲ್ಮೆಟ್ ಧರಿಸದಿದ್ದಕ್ಕಾಗಿ ಮತ್ತು ನೋ ಪಾರ್ಕಿಂಗ್ ವಲಯದಲ್ಲಿ ವಾಹನ ನಿಲುಗಡೆ ಮಾಡಿದ್ದಕ್ಕಾಗಿ 12 ಲಕ್ಷ ಪ್ರಕರಣಗಳನ್ನು ದಾಖಲಿಸಲಾಗಿದೆ.


Stay up to date on all the latest ರಾಜ್ಯ news
Poll
K Annamalai

ಎನ್‌ಡಿಎಯಿಂದ ಹೊರಬರುವ ಎಐಎಡಿಎಂಕೆ ನಿರ್ಧಾರವು 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಸಾಧನೆ ಮೇಲೆ ಪರಿಣಾಮ ಬೀರಲಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp