ಹಾವೇರಿ: 86ನೇ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಲು ಹೆಮ್ಮೆಯಾಗುತ್ತಿದೆ. ಪರ್ಯಾಯ ಸಮ್ಮೇಳನವನ್ನು ಕ್ರೀಡಾತ್ಮಕವಾಗಿ ಗಂಭೀರವಾಗಿ ತೆಗೆದುಕೊಳ್ಳುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇಂದು ಹಾವೇರಿಯಲ್ಲಿ ಆರಂಭಗೊಂಡಿರುವ 86ನೇ ಅಖಿತ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಮಹಾರಾಷ್ಟ್ರ ಜೊತೆಗೆ ನಡೆಯುತ್ತಿರುವ ಗಡಿ ವಿವಾದಕ್ಕೆ ಸಂಬಂಧಪಟ್ಟಂತೆ ಸಮ್ಮೇಳನದ ಕೊನೆಯ ದಿನ ಅಚ್ಚರಿಯೊಂದು ಇರುತ್ತದೆ ಎಂದರು.
ಕಳೆದ ಸೋಮವಾರ ಲಿಂಗೈಕ್ಯರಾದ ವಿಜಯಪುರದ ಸಿದ್ದೇಶ್ವರ ಸ್ವಾಮೀಜಿಯವರ ಕೊನೆಯ ಆಸೆಯನ್ನು ಸರ್ಕಾರ ಗೌರವಿಸುತ್ತದೆ. ಅದರಂತೆ ಅವರ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಅವರ ಸ್ಮಾರಕ ನಿರ್ಮಾಣ ಮಾಡಬೇಕೆಂದು ಸಾಕಷ್ಟು ಒತ್ತಾಯ ಕೇಳಿಬರುತ್ತಿದೆ ಎಂದರು.
Advertisement