ಕೇಂದ್ರ ಸರ್ಕಾರದ ಸ್ವದೇಶ್ ದರ್ಶನ್ ಯೋಜನೆ: ಕರ್ನಾಟಕದ ಹಂಪಿ, ಮೈಸೂರು ಆಯ್ಕೆ

ದೇಶದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕೇಂದ್ರ ಪ್ರವಾಸೋದ್ಯಮ ಸಚಿವಾಲಯ ಸ್ವದೇಶ್ ದರ್ಶನ್ ಯೋಜನೆ ಆರಂಭಿಸಿದ್ದು, ಈ ಸ್ವದೇಶ್ ದರ್ಶನ್ 2.0 ಯೋಜನೆಗೆ ಹಂಪಿ ಹಾಗೂ ಮೈಸೂರು ಆಯ್ಕೆಯಾಗಿವೆ. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.
ಸ್ವದೇಶ್ ದರ್ಶನ್ ಯೋಜನೆ
ಸ್ವದೇಶ್ ದರ್ಶನ್ ಯೋಜನೆ

ಬೆಂಗಳೂರು: ದೇಶದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕೇಂದ್ರ ಪ್ರವಾಸೋದ್ಯಮ ಸಚಿವಾಲಯ ಸ್ವದೇಶ್ ದರ್ಶನ್ ಯೋಜನೆ ಆರಂಭಿಸಿದ್ದು, ಈ ಸ್ವದೇಶ್ ದರ್ಶನ್ 2.0 ಯೋಜನೆಗೆ ಹಂಪಿ ಹಾಗೂ ಮೈಸೂರು ಆಯ್ಕೆಯಾಗಿವೆ. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.

ಸ್ವದೇಶ್ ದರ್ಶನ್ 2.0 ಯೋಜನೆಗೆ ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ್, ಚಂಡೀಗಢ, ಗೋವಾ, ಗುಜರಾತ್, ಕೇರಳ ರಾಜ್ಯಗಳ ತಲಾ ಎರಡು ಸ್ಥಳಗಳನ್ನು ಆಯ್ಕೆ ಮಾಡಲಾಗಿದೆ. ಈ ಪೈಕಿ ಕರ್ನಾಟಕದ ಹಂಪಿ ಹಾಗೂ ಮೈಸೂರು ಆಯ್ಕೆಯಾಗಿದೆ. ಇದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದು, ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವಾಲಯವು 2014-15 ರಲ್ಲಿ ಪ್ರಾರಂಭಿಸಿದ ಸ್ವದೇಶ್ ದರ್ಶನ್ 2.0 ಯೋಜನೆಯಲ್ಲಿ ಹಂಪಿ ಮತ್ತು ಮೈಸೂರು ಇರುವುದು ಕರ್ನಾಟಕಕ್ಕೆ ಹೆಮ್ಮೆಯ ಕ್ಷಣವಾಗಿದೆ ಸಂತಸ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕೇಂದ್ರ ಪ್ರವಾಸೋದ್ಯಮ ಸಚಿವಾಲಯದ ಸ್ವದೇಶ್ ದರ್ಶನ್ ಯೋಜನೆ ಮಹತ್ವದ ಯೋಜನೆಗಳಲ್ಲಿ ಒಂದೆನಿಸಿದೆ. ವಿಭಿನ್ನ ವಿಷಯದ ಪ್ರವಾಸಿ ಸರ್ಕ್ಯೂಟ್‌ಗಳನ್ನು ಸಂಯೋಜಿಸುವ ಮೂಲಕ ಒಟ್ಟಾರೆ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಯೋಜನೆಯನ್ನು ಪ್ರಾರಂಭಿಸಲಾಗಿದೆ. ಕೇಂದ್ರ ಸರ್ಕಾರವು ಈ ಯೋಜನೆಯನ್ನು 2015 ರಲ್ಲಿ ಆರಂಭಿಸಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com