social_icon

ಚಿಕ್ಕಬಳ್ಳಾಪುರ ಜಿಲ್ಲೆಗೆ ‘ಫಲ ಪುಷ್ಪ ಗಿರಿಧಾಮ ನಾಡು’ ಹೆಸರು ಅಧಿಕೃತ: ಸಿಎಂ ಬೊಮ್ಮಾಯಿ, ಚಿಕ್ಕಬಳ್ಳಾಪುರ ಉತ್ಸವಕ್ಕೆ ಚಾಲನೆ

ಚಿಕ್ಕಬಳ್ಳಾಪುರದ ಪುಣ್ಯಭೂಮಿಯು ಜನರ ಬದುಕಿನ ಭವಿಷ್ಯವನ್ನು ಬರೆಯಲು ʼಚಿಕ್ಕಬಳ್ಳಾಪುರ ಉತ್ಸವʼವು ಮುನ್ನುಡಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

Published: 08th January 2023 09:26 AM  |   Last Updated: 08th January 2023 09:26 AM   |  A+A-


CM Bommai, film actor Sudeep and others in Chikkaballapur Utsav

ಸಿಎಂ ಬಸವರಾಜ ಬೊಮ್ಮಾಯಿ, ನಟ ಸುದೀಪ್, ಆರೋಗ್ಯ ಸಚಿವ ಡಾ ಕೆ ಸುಧಾಕರ್, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜ್ ಮೊದಲಾದವರು ಚಿಕ್ಕಬಳ್ಳಾಪುರ ಉತ್ಸವ ಉದ್ಘಾಟನಾ ಸಮಾರಂಭದಲ್ಲಿ

Posted By : Sumana Upadhyaya
Source : Online Desk

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಪುಣ್ಯಭೂಮಿಯು ಜನರ ಬದುಕಿನ ಭವಿಷ್ಯವನ್ನು ಬರೆಯಲು ʼಚಿಕ್ಕಬಳ್ಳಾಪುರ ಉತ್ಸವʼವು ಮುನ್ನುಡಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಬಯಲುಸೀಮೆ, ಐತಿಹಾಸಿಕ ತಾಣಗಳ ಕೇಂದ್ರವಾದ ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಪ್ರಥಮ ಚಿಕ್ಕಬಳ್ಳಾಪುರ ಉತ್ಸವಕ್ಕೆ ನಿನ್ನೆ ಶನಿವಾರ ಅದ್ದೂರಿಯ ಚಾಲನೆ ದೊರೆಯಿತು.

ಕಲೆ, ಕ್ರೀಡೆ, ಆಹಾರ, ಉದ್ಯೋಗಾವಕಾಶ, ಆರೋಗ್ಯ ಮೇಳ ಮೊದಲಾದವುಗಳನ್ನೊಳಗೊಂಡ ಉತ್ಸವಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ನಿನ್ನೆ ಆರಂಭವಾಗಿ ಜನವರಿ 14 ವರೆಗೆ ಚಿಕ್ಕಬಳ್ಳಾಪುರ ಉತ್ಸವ ನಡೆಯಲಿದೆ. 
ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಸಿಎಂ ಬೊಮ್ಮಾಯಿ, ಪ್ರಖ್ಯಾತ ಎಂಜಿನಿಯರ್‌ ಸರ್‌.ಎಂ.ವಿಶ್ವೇಶ್ವರಯ್ಯ, ವಿಜ್ಞಾನದಲ್ಲಿ ಸಾಧನೆ ಮಾಡಿದ ಸಿಎನ್‌ಆರ್‌ ರಾವ್‌ ಇಲ್ಲಿಯವರೇ ಆಗಿದ್ದಾರೆ. ಹೀಗೆ ಇಬ್ಬರು ಭಾರತರತ್ನಗಳನ್ನು ಈ ಜಿಲ್ಲೆ ನೀಡಿದೆ. ಇತಿಹಾಸ ಪ್ರಸಿದ್ಧ ಭೋಗನಂದೀಶ್ವರ ದೇವಸ್ಥಾನ ಇಲ್ಲೇ ಇದೆ. ಇಂತಹ ವಿಶಿಷ್ಟ ಜಿಲ್ಲೆಯನ್ನು ಈಗ ಫಲ ಪುಷ್ಪ ಗಿರಿಧಾಮ ನಾಡು ಎಂದು ಕರೆಯಲಾಗಿದೆ. ಈ ಹೆಸರನ್ನು ಪ್ರವಾಸೋದ್ಯಮ ಇಲಾಖೆಯಿಂದ ಅಧಿಕೃತಗೊಳಿಸಲಾಗುವುದು ಎಂದು ತಿಳಿಸಿದರು.

ಡಾ.ಕೆ.ಸುಧಾಕರ್‌ ಅವರು ಆರೋಗ್ಯ ಸಚಿವರಾಗಿ ಕೋವಿಡ್‌ ನಿರ್ವಹಣೆಯನ್ನು ದೇಶಕ್ಕೇ ಮಾದರಿ ಎಂಬಂತೆ ಮಾಡಿದ್ದಾರೆ. ಇದರ ಸಂಪೂರ್ಣ ಶ್ರೇಯಸ್ಸು ಸಚಿವರಿಗೆ, ಆರೋಗ್ಯ ಸಿಬ್ಬಂದಿಗೆ ಸಲ್ಲಬೇಕು. ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಭಗವಂತ ಆಶೀರ್ವಾದ ಮಾಡುತ್ತಾನೆ. ಅದರಂತೆ ಸುಧಾಕರ್‌ ಅವರು ರಾಜ್ಯದ ಸೇವೆ ಮಾಡಿದ ಬಳಿಕ ಬರಡು ಭೂಮಿಯಾಗಿದ್ದ ಚಿಕ್ಕಬಳ್ಳಾಪುರದಲ್ಲಿ ಉತ್ತಮ ಮಳೆಯಾಗಿದೆ. ಇಲ್ಲಿ ಬೆಳೆಯುವ ತರಕಾರಿ, ರೇಷ್ಮೆ, ಹಾಲು ಉತ್ಕೃಷ್ಟವಾಗಿದೆ. ನಮ್ಮ ಮನೆಯಲ್ಲೂ ಚಿಕ್ಕಬಳ್ಳಾಪುರದ ತರಕಾರಿ ಬಳಸುತ್ತೇವೆ ಎಂದರು.

ಭಗೀರಥ ಬೊಮ್ಮಾಯಿ
ಸಚಿವ ಡಾ ಕೆ ಸುಧಾಕರ್ ಮಾತನಾಡಿ, ನೀರಾವರಿ ಸಚಿವರಾಗಿದ್ದಾಗ ಎತ್ತಿನಹೊಳೆ ಯೋಜನೆ ರೂಪಿಸಿದ್ದ ಸಿಎಂ ಬಸವರಾಜ ಬೊಮ್ಮಾಯಿಯವರು ಈ ಜಿಲ್ಲೆಯ ನಿಜವಾದ ಭಗೀರಥ. ಅಷ್ಟೇ ಅಲ್ಲ ಈ ಯೋಜನೆಯ ಮೂಲ ವೆಚ್ಚವನ್ನು 13,000 ಕೋಟಿ ರೂಪಾಯಿಗಳಿಂದ 23,000 ಕೋಟಿ ರೂಪಾಯಿಗೆ ಏರಿಸಿ ಜಿಲ್ಲೆಗೆ ವಿಶೇಷ ಕೊಡುಗೆಗಳನ್ನು ನೀಡಿದ್ದಾರೆ. ದಿ.ಶಂಕರ್‌ನಾಗ್‌ ಅವರ ಕನಸಾಗಿದ್ದ ನಂದಿಬೆಟ್ಟದ ರೋಪ್‌ ವೇ 80 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಈ ಎಲ್ಲವನ್ನೂ ಮುಂದಿನ 7 ದಿನಗಳಲ್ಲಿ ಹಬ್ಬವನ್ನಾಗಿ ಆಚರಿಸಿಕೊಂಡು, ಬೆಂಗಳೂರಿಗೆ ಸಹಕಾರವಾಗಿ ಚಿಕ್ಕಬಳ್ಳಾಪುರವನ್ನು ಬೆಳೆಸಲು ಪ್ರಯತ್ನ ಪಡುವುದಾಗಿ ಅವರು ಹೇಳಿದರು.

ಅದ್ಧೂರಿ ಮೆರವಣಿಗೆ
ವೇದಿಕೆ ಕಾರ್ಯಕ್ರಮ ಆರಂಭಕ್ಕೆ ಮುನ್ನ ಚಿಕ್ಕಬಳ್ಳಾಪುರ ನಗರದಲ್ಲಿ ಬೆಳಗ್ಗೆ ಸಾಂಸ್ಕೃತಿಕ ಕಲಾ ತಂಡಗಳನ್ನೊಳಗೊಂಡಂತೆ ವಿಜೃಂಭಣೆಯ ಮೆರವಣಿಗೆ ನಡೆಯಿತು. ಚಿಕ್ಕಬಳ್ಳಾಪುರದ ಇತಿಹಾಸ, ಕಲಾ ಶ್ರೀಮಂತಿಕೆಯನ್ನು ಪ್ರದರ್ಶನ ಮಾಡುವ ಮೆರವಣಿಗೆ ಜನಮನಸೂರೆಗೊಂಡಿತು.

ಫಲ ಪುಷ್ಪ ಗಿರಿಧಾಮ ನಾಡು
ಚಿಕ್ಕಬಳ್ಳಾಪುರ ಜಿಲ್ಲೆಗೆ ‘ಫಲ ಪುಷ್ಪ ಗಿರಿಧಾಮ ನಾಡು’ ಎಂಬ ಹೆಸರನ್ನು ನೀಡಲಾಗಿದ್ದು, ಕಾರ್ಯಕ್ರಮದಲ್ಲಿ ಈ ಹೆಸರನ್ನು ಅನಾವರಣ ಮಾಡಲಾಯಿತು.

ಕಿಚ್ಚ ಸುದೀಪ್‌ ಮೆರುಗು
ಕಾರ್ಯಕ್ರಮಕ್ಕೆ ಬಂದ ಜನಪ್ರಿಯ ಚಿತ್ರ ನಟ ಸುದೀಪ್‌ ಅವರು ಹೆಚ್ಚು ಮೆರುಗು ತಂದರು. ಕೋವಿಡ್‌ ಸಮಯದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ ಎಂದು ಅವರು ಶ್ಲಾಘಿಸಿದರು. ರಾಜ್ಯಸಭಾ ಸದಸ್ಯರು, ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಾ.ಡಿ.ವೀರೇಂದ್ರ ಹೆಗ್ಗೆಡೆ, ಸಚಿವರಾದ ವಿ.ಸುನಿಲ್‌ಕುಮಾರ್‌, ಭೈರತಿ ಬಸವರಾಜು, ಎಂಟಿಬಿ ನಾಗರಾಜ್‌, ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

7 ದಿನಗಳ ಉತ್ಸವದಲ್ಲಿ ಕನ್ನಡದ ಖ್ಯಾತ ನಟ-ನಟಿಯರು ಭಾಗವಹಿಸಿ ವಿಶೇಷ ಮೆರುಗನ್ನು ತರಲಿದ್ದಾರೆ.


Stay up to date on all the latest ರಾಜ್ಯ news
Poll
Railways Minister Ashwini Vaishnaw waves at a goods train as train services resume

ಒಡಿಶಾದಲ್ಲಿ ಭೀಕರ ರೈಲು ಅಪಘಾತದ ನೈತಿಕ ಹೊಣೆ ಹೊತ್ತು ರೈಲ್ವೆ ಸಚಿವರು ರಾಜೀನಾಮೆ ನೀಡಬೇಕೇ?


Result
ಹೌದು
ಬೇಡ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp