social_icon

ಭಾರತದತ್ತ ನೋಡುತ್ತಿವೆ ಜಾಗತಿಕ ಉದ್ಯಮ, ರನ್‌ವೇ ರೆಡಿ ನೀವು ಟೇಕಾಫ್‌ ಆಗುವುದೊಂದೇ ಬಾಕಿ: ಯುವಕರಿಗೆ ಪ್ರಧಾನಿ

"ಹಲವು ಜಾಗತಿಕ ಉದ್ಯಮಗಳು ಭಾರತದತ್ತ ನೋಡುತ್ತಿವೆ, ಕಳೆದ 8 ವರ್ಷಗಳಲ್ಲಿ ಯುವಕರಿಗಾಗಿ ಸಾಕಷ್ಟು ಯೋಜನೆ ಜಾರಿ ಮಾಡಿದ್ದೇವೆ. ಸಾಧನೆ ಮಾಡಲು ಯುವ ಸಮುದಾಯಕ್ಕೆ ಇದು ಸಕಾಲ.

Published: 12th January 2023 07:03 PM  |   Last Updated: 18th January 2023 04:17 PM   |  A+A-


PM Modi at yuvajanotsava

ಹುಬ್ಬಳ್ಳಿಯ ರೈಲ್ವೆ ರೈಲ್ವೆ ಮೈದಾನದಲ್ಲಿ 26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

Online Desk

ಹುಬ್ಬಳ್ಳಿ: "ಹಲವು ಜಾಗತಿಕ ಉದ್ಯಮಗಳು ಭಾರತದತ್ತ ನೋಡುತ್ತಿವೆ, ಕಳೆದ 8 ವರ್ಷಗಳಲ್ಲಿ ಯುವಕರಿಗಾಗಿ ಸಾಕಷ್ಟು ಯೋಜನೆ ಜಾರಿ ಮಾಡಿದ್ದೇವೆ. ಸಾಧನೆ ಮಾಡಲು ಯುವ ಸಮುದಾಯಕ್ಕೆ ಇದು ಸಕಾಲ. ರನ್‌ವೇ ರೆಡಿ ಇದೆ, ನೀವು ಟೇಕಾಫ್‌ ಆಗುವುದೊಂದೇ ಬಾಕಿ" ಎಂದು ಪ್ರಧಾನಿ ನರೇಂದ್ರ ಮೋದಿ ಯುವಜನತೆಗೆ ಕರೆ ನೀಡಿದ್ದಾರೆ. 

ಹುಬ್ಬಳ್ಳಿಯ ರೈಲ್ವೆ ರೈಲ್ವೆ ಮೈದಾನದಲ್ಲಿ 26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ,  ಭಾರತ ಒಂದು ಯುವ ದೇಶ. ಯುವಕರ ದೊಡ್ಡ ಪಡೆ, ಯುವ ಶಕ್ತಿ ನಮ್ಮ ದೇಶದಲ್ಲಿದೆ. ದೇಶದ ಬೆಳವಣಿಗೆಗೆ ಯುವ ಶಕ್ತಿ ಅಡಿಪಾಯವಾಗಲಿದೆ ಎಂದು ಹೇಳಿದರು.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ 26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ

ಯುವಕರಿಗಾಗಿ ಭವ್ಯ ಭವಿಷ್ಯವನ್ನು ನಾವು ರೂಪಿಸಿದ್ದೇವೆ. ಯುವ ಶಕ್ತಿಯಿಂದಾಗಿ ಎಲ್ಲಾ ಕ್ಷೇತ್ರಗಳಲ್ಲಿ ಭಾರತ ಯಶಸ್ವಿಯಾಗಿ ಸಾಗುತ್ತಿದೆ. ಭಾರತ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮುತ್ತಿದೆ. ಭಾರತದ ಸ್ಟಾರ್ಟ್‌ಅಪ್‌ಗಳಿಗೆ ಹಣ ಹರಿದು ಬರುತ್ತಿದೆ. ವಿದೇಶಿ ಬಂಡವಾಳ ಹೂಡಿಕೆಯಾಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಯುವಕರಿಗೆ ಸ್ವಾಮಿ ವಿವೇಕಾನಂದರವರು ಪ್ರೇರಣೆ ಆಗಿದ್ದಾರೆ. ಮೈಸೂರು ಮಹಾರಾಜರು ಚಿಕಾಗೋ ಯಾತ್ರೆಗೆ ಸಹಾಯ ಮಾಡಿದ್ದರು. ಸ್ವಾಮಿ ವಿವೇಕಾನಂದರು ಯುವಕರೇ ದೇಶದ ಭವಿಷ್ಯ ಎಂದಿದ್ದರು. ಚಿಕ್ಕ ವಯಸ್ಸಿನಲ್ಲೇ ಸ್ವಾಮಿ ವಿವೇಕಾನಂದರು ಸಾಧನೆ ಮಾಡಿದ್ದರು. ದೇಶದ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಮಹತ್ವದ್ದು. ದೇಶವನ್ನು ಮುನ್ನಡೆಸುವುದು ಯುವಕರ ಕರ್ತವ್ಯ. ದೇಶದ ಭವಿಷ್ಯ ಯುವಕರ ಮೇಲೆ ನಿಂತಿದೆ ಎಂದು ಮೋದಿ ಹೇಳಿದ್ದಾರೆ.

ಮಹಿಳಾ ಶಕ್ತಿ ರಾಷ್ಟ್ರಶಕ್ತಿಯನ್ನು ಜಾಗೃತವಾಗಿ ಇಟ್ಟಿದೆ ಎಂದೂ ಮೋದಿ ಹೇಳಿದ್ದು ಭಾರತದ ಮಹಿಳೆಯರು ಫೈಟರ್ ಜೆಟ್ ಹಾರಿಸುತ್ತಿದ್ದಾರೆ. ವಿಜ್ಞಾನ, ತಂತ್ರಜ್ಞಾನದಲ್ಲಿ ನಮ್ಮ ಹೆಣ್ಣುಮಕ್ಕಳು ಉನ್ನತ ಸಾಧನೆ ಮಾಡಿದ್ದಾರೆ. 21ನೇಯ ಶತಮಾನವನ್ನು ಭಾರತದ ಶತಮಾನ ಮಾಡಬೇಕಿದೆ ಎಂದು ಮೋದಿ ಕರೆ ನೀಡಿದ್ದಾರೆ.


Stay up to date on all the latest ರಾಜ್ಯ news
Poll
Dk shivakumar

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 65 ಸ್ಥಾನಗಳ ಗಡಿ ದಾಟುವುದಿಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.


Result
ಒಪ್ಪುತ್ತೇನೆ
ಒಪ್ಪುವುದಿಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp