social_icon

ಕೈಗಾ ಟೌನ್‌ಶಿಪ್ ಬಳಿ ಅಪರೂಪದ 'ಹಾರುವ ಅಳಿಲು' ಪತ್ತೆ, ರಕ್ಷಣೆ

ಕೈಗಾ ಟೌನ್‌ಶಿಪ್‌ನಲ್ಲಿ ಗಾಯಗೊಂಡು ಕೆಳಗೆ ಬಿದ್ದಿದ್ದ ಅಪರೂಪದ ಹಾರುವ ಅಳಿಲನ್ನು ಕಾರವಾರ ತಾಲೂಕಿನ ಕದ್ರಾ ಅರಣ್ಯ ವಲಯದ ವಿರ್ಜೆ ಬೀಟ್‌ನ ಅರಣ್ಯ ವೀಕ್ಷಕ ಬಿಲಾಲ್ ಶೇಖ್ ಅವರು ರಕ್ಷಣೆ ಮಾಡಿದ್ದಾರೆ.

Published: 13th January 2023 11:32 AM  |   Last Updated: 13th January 2023 07:29 PM   |  A+A-


Bilal Sheikh with the rescued flying squirrel (right).

ಹಾರುವ ಅಳಿಲನ್ನು ರಕ್ಷಣೆ ಮಾಡಿರುವ ಬಿಲಾಲ್ ಶೇಖ್.

Posted By : Manjula VN
Source : The New Indian Express

ಕದ್ರಾ (ಉತ್ತರ ಕನ್ನಡ): ಕೈಗಾ ಟೌನ್‌ಶಿಪ್‌ನಲ್ಲಿ ಗಾಯಗೊಂಡು ಕೆಳಗೆ ಬಿದ್ದಿದ್ದ ಅಪರೂಪದ ಹಾರುವ ಅಳಿಲನ್ನು ಕಾರವಾರ ತಾಲೂಕಿನ ಕದ್ರಾ ಅರಣ್ಯ ವಲಯದ ವಿರ್ಜೆ ಬೀಟ್‌ನ ಅರಣ್ಯ ವೀಕ್ಷಕ ಬಿಲಾಲ್ ಶೇಖ್ ಅವರು ರಕ್ಷಣೆ ಮಾಡಿದ್ದಾರೆ.

ಮರದಿಂದ ಮರಕ್ಕೆ ಹಾರುವ ವೇಳೆ ಅಳಿಲು ಆಕಸ್ಮಿಕವಾಗಿ ರೆಂಬೆಗಳಿಗೆ ತಾಗಿ ಗಾಯಗೊಂಡು ಮಲ್ಲಾಪುರ ಟೌನ್‌ಶಿಪ್‌ನ ಎನ್‌ಪಿಸಿಐಎಲ್ ಸಿಬ್ಬಂದಿಯೋರ್ವರ ಮನೆಯ ಮೇಲೆ ಬಿದ್ದಿತ್ತು. ಈ ಬಗ್ಗೆ ಸ್ಥಳೀಯರು ಅರಣ್ಯ ರಕ್ಷಕ ನಾಗರಾಜ್ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ನಾಗರಾಜ್ ಅವರು ಬಿಲಾಲ್ ಅವರಿಗೆ ಮಾಹಿತಿ ನೀಡಿದ್ದು, ಕೂಡಲೇ ಬಿಲಾಲ್ ಅವರು ಸ್ಥಳಕ್ಕೆ ಭೇಟಿ ನೀಡಿ ಅಳಿಲಿಗೆ ಅಗತ್ಯ ಚಿಕಿತ್ಸೆ ನೀಡಿ, ಪುನಃ ಕಾಡಿಗೆ ಬಿಟ್ಟಿದ್ದಾರೆ.

ಹಾರುವ ಅಳಿಲನ್ನು ನೋಡಿ ಆಶ್ಚರ್ಯಗೊಂಡೆ. ಅಳಿಲು ತೀವ್ರವಾಗಿ ಗಾಯಗೊಂಡು, ಪ್ರಜ್ಞಾಹೀನ ಸ್ಥಿತಿಗೆ ತಲುಪಿತ್ತು. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಅಳಿಲು ನಿತ್ರಾಣಗೊಂಡಿತ್ತು. ಸುತ್ತಲೂ ಜನರು ನಿಂತಿರುವುದನ್ನು ನೋಡಿ ಆತಂಕಕ್ಕೊಳಗಾಗಿತ್ತು. ಹ್ಯಾಂಡ್ ಗ್ಲೌಸ್ ಧರಿಸಿ ಅಳಿಲಿಗೆ ಚಿಕಿತ್ಸೆ ನೀಡುವ ಕೆಲಸ ಮಾಡಿದೆ. ಗಾಯಗೊಂಡಿದ್ದ ಜಾಗದಲ್ಲಿ ಇರುವೆಗಳು ಮುತ್ತಿಕೊಂಡು ಮತ್ತಷ್ಟು ಗಾಯಗೊಳ್ಳುವಂತೆ ಮಾಡಿತ್ತು. ಇದರಿಂದ ಸೋಂಕು ಕೂಡ ಕಂಡು ಬಂದಿತ್ತು. ಬಳಿಕ ಚಿಕಿತ್ಸೆ ನೀಡಿ, ಸಂಜೆ ವರೆಗೂ ನಿಗಾದಲ್ಲಿ ಇರಿಸಲಾಗಿತ್ತು.

ಇದನ್ನೂ ಓದಿ: ಹಂಪಿ ಬಳಿ ಕಳೆದ ತಿಂಗಳು ರಕ್ಷಿಸಲ್ಪಟ್ಟಿದ್ದ ಯುರೇಷಿಯನ್ ಗ್ರಿಫನ್ ವಲ್ಚರ್ ಮರಳಿ ಗೂಡಿಗೆ

ಇತ್ತೀಚಿನ ದಿನಗಳಲ್ಲಿ ಹಾರುವ ಅಳಿಲುಗಳು ಕಂಡು ಬರುತ್ತಿರುವುದು ಅತ್ಯಂತ ವಿರಳವಾಗಿದೆ ಹೋಗಿದೆ. ಆದ್ದರಿಂದ ಅದರ ಸ್ಥಿತಿ ಮತ್ತು ಇತರ ಅಂಶಗಳು ಹೆಚ್ಚು ತಿಳಿದಿಲ್ಲ. ವೃಕ್ಷವಾಸಿ ಜೀವಿಯು ತನ್ನ ಮೇಲಿನ ತೋಳುಗಳನ್ನು ಹರಡುವ ಮೂಲಕ ಒಂದು ಮರದಿಂದ ಇನ್ನೊಂದು ಮರಕ್ಕೆ ಜಿಗಿದು ಚಲಿಸುತ್ತವೆ, ಇದು ಪ್ಯಾಟಾಜಿಯಂ ಎಂದು ಕರೆಯಲ್ಪಡುವ ವಿಸ್ತೃತ ಚರ್ಮವನ್ನು ಹೊಂದಿದೆ, ಇದು ತೆಳ್ಳಗಿನ ಚರ್ಮವನ್ನು ಮುಂಭಾಗದ ಕಾಲು ಮತ್ತು ಅದರ ಹಿಂಭಾಗದಿಂದ ವಿಸ್ತರಿಸಿಕೊಂಡಿರುತ್ತದೆ. ಅದರ ಉದ್ದನೆಯ ಬಾಲಗಳು ಅವು ಜಾರುವಂತೆ ಸ್ಥಿರತೆಯನ್ನು ಒದಗಿಸುತ್ತವೆ. ಹಾರುವ ಅಳಿಲು ದಂಶಕಗಳ ಕುಟುಂಬಕ್ಕೆ ಸೇರಿದ್ದಾಗಿದ್ದು, ಸ್ಥಳೀಯರು ಇದನ್ನು ಹಾರುವ ಬೆಕ್ಕು ಎಂದು ಕರೆಯುತ್ತಾರೆ, ಇವುಗಳು ಬೆಳಿಗ್ಗೆಗಿಂತ ಸಂಜೆ ವೇಳೆ ಹೆಚ್ಚು ಸಕ್ರಿಯವಾಗಿರುತ್ತದೆ ಮತ್ತು ಕಾಡಿನ ಪ್ರದೇಶಗಳಲ್ಲಿ ಬೆಳೆಯುತ್ತದೆ ಎಂದು ಬಿಲಾಲ್ ಅವರು ಮಾಹಿತಿ ನೀಡಿದ್ದಾರೆ.

ಉತ್ತರ ಕನ್ನಡದ ಡಿಸಿಎಫ್ ಪ್ರಶಾಂತ್ ಕುಮಾರ್ ಕೆ ಎಸ್ ಅವರು ಮಾತನಾಡಿ, ಅರಣ್ಯ ಸಿಬ್ಬಂದಿಯ ಈ  ಪ್ರಯತ್ನವನ್ನು ಶ್ಲಾಘಿಸಿದರು.

“ಪ್ರಮುಖ ಪ್ರಾಣಿಗಳಷ್ಟೇ ಅಲ್ಲ, ಹಾರುವ ಅಳಿಲುಗಳಂತಹ ಸಣ್ಣ ಸಸ್ತನಿಗಳೂ ಕೂಡ ಸಂರಕ್ಷಣೆಗೆ ಅರ್ಹವಾಗಿವೆ. ಹಾರುವ ಅಳಿಲು ಅಪರೂಪದ ಮತ್ತು ವಿಶಿಷ್ಟವಾದ ಸಸ್ತನಿಯಾಗಿದ್ದು, ನಮ್ಮ ಅರಣ್ಯ ಸಿಬ್ಬಂದಿ ಅಂತಹ ಪ್ರಾಣಿಗಳನ್ನು ರಕ್ಷಿಸಲು ಸಮರ್ಥರಾಗಿದ್ದಾರೆ ಎಂಬುದು ಹೆಮ್ಮೆಯ ವಿಷಯ. ಇದೀಗ ಅಳಿಲನ್ನು ಕಾಡಿಗೆ ಬಿಡಲಾಗಿದೆ ಎಂದು ಹೇಳಿದ್ದಾರೆ.


Stay up to date on all the latest ರಾಜ್ಯ news
Poll
K Annamalai

ಎನ್‌ಡಿಎಯಿಂದ ಹೊರಬರುವ ಎಐಎಡಿಎಂಕೆ ನಿರ್ಧಾರವು 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಸಾಧನೆ ಮೇಲೆ ಪರಿಣಾಮ ಬೀರಲಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp