social_icon

ಇದೇ ಮೊದಲ ಬಾರಿಗೆ 75 ಕ್ರೀಡಾಪಟುಗಳು ರಾಜ್ಯದಲ್ಲಿ ಅಂತಾರಾಷ್ಟ್ರೀಯ ಸ್ಪರ್ಧೆಗಳಿಗೆ ತರಬೇತಿ ಪಡೆದಿದ್ದಾರೆ: ಸಿಎಂ ಬೊಮ್ಮಾಯಿ

ಅಮೃತ್ ಕ್ರೀಡಾ ಯೋಜನೆಯಡಿ ಸುಮಾರು 75 ಕ್ರೀಡಾಪಟುಗಳಿಗೆ ಒಲಿಂಪಿಕ್ಸ್‌ನಂತಹ ಅಂತರರಾಷ್ಟ್ರೀಯ ಕ್ರೀಡಾಕೂಟಗಳಿಗೆ ತರಬೇತಿ ನೀಡಿದ ಮೊದಲ ರಾಜ್ಯ ಕರ್ನಾಟಕವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಹೇಳಿದರು.

Published: 17th January 2023 07:29 AM  |   Last Updated: 17th January 2023 11:52 AM   |  A+A-


Governor Thaawarchand Gehlot and Chief Minister Basavaraj Bommai hand over a cheque to participants during the valedictory of 26th National Youth Festival at in Dharwad on Monday.

ಧಾರವಾಡದಲ್ಲಿ ಸೋಮವಾರ ನಡೆದ 26ನೇ ರಾಷ್ಟ್ರೀಯ ಯುವಜನೋತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ್ದವರಿಗೆ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಿದರು.

The New Indian Express

ಧಾರವಾಡ: ಅಮೃತ್ ಕ್ರೀಡಾ ಯೋಜನೆಯಡಿ ಸುಮಾರು 75 ಕ್ರೀಡಾಪಟುಗಳಿಗೆ ಒಲಿಂಪಿಕ್ಸ್‌ನಂತಹ ಅಂತರರಾಷ್ಟ್ರೀಯ ಕ್ರೀಡಾಕೂಟಗಳಿಗೆ ತರಬೇತಿ ನೀಡಿದ ಮೊದಲ ರಾಜ್ಯ ಕರ್ನಾಟಕವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಹೇಳಿದರು.

26ನೇ ರಾಷ್ಟ್ರೀಯ ಯುವಜನೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಕ್ರೀಡೆಯಲ್ಲಿ ಯುವಕರನ್ನು ಪ್ರೋತ್ಸಾಹಿಸುವುದರ ಜೊತೆಗೆ ಆರ್ಥಿಕ ನೆರವು ನೀಡಲು ಹಾಗೂ ಮಾರುಕಟ್ಟೆ ನಡೆಸಲು ರಾಜ್ಯ ಸರ್ಕಾರ ಸ್ವಾಮಿ ವಿವೇಕಾನಂದ ಯುವಶಕ್ತಿ ಸಂಘವನ್ನು ರೂಪಿಸಿದ್ದು, ಇದರಿಂದ 5 ಲಕ್ಷ ಯುವಕರಿಗೆ ಸ್ವಯಂ ಉದ್ಯೋಗ ದೊರೆಯಲಿದೆ ಎಂದು ಹೇಳಿದರು.

ಇದೇ ವೇಳೆ ಸಾಧನೆಯಲ್ಲಿ ಎತ್ತರಕ್ಕೆ ಯಾವ ರೀತಿ ಹೋಗಬಹುದು ಎಂಬುದಕ್ಕೆ ಕೆಲವು ಕಥೆಗಳನ್ನು ಯುವಕರೊಂದಿಗೆ ಹಂಚಿಕೊಂಡರು.

ಇದನ್ನೂ ಓದಿ: ಯುವಜನತೆಗೆ ಸರ್ಕಾರ ಆದ್ಯತೆ; ಕನ್ನಡದಲ್ಲಿ ಶಬ್ದ ಕಲಿತು ಸಂದೇಶ ನೀಡಬೇಕು: ಯುವಜನೋತ್ಸವ ಸಮಾರೋಪದಲ್ಲಿ ಸಿಎಂ ಬೊಮ್ಮಾಯಿ ಸಲಹೆ

ರಾಷ್ಟ್ರೀಯ ಯುವ ಉತ್ಸವದಂತಹ ಕಾರ್ಯಕ್ರಮಗಳು ಒಗ್ಗಟ್ಟಿನ ಪರಿಕಲ್ಪನೆಯೊಂದಿಗೆ ದೊಡ್ಡದನ್ನು ಸಾಧಿಸುವ ಗುರಿಯನ್ನು ಹೊಂದಿವೆ. ಯುವಕರು ತಮ್ಮ ಅಭಿಪ್ರಾಯಗಳನ್ನು ಮತ್ತು ಆಲೋಚನೆಗಳನ್ನು ಹಂಚಿಕೊಳ್ಳಲು ಇಂತಹ ಬೃಹತ್ ವೇದಿಕೆಯನ್ನು ಒದಗಿಸುವ ಯಾವುದೇ ಕಾರ್ಯಕ್ರಮವಿಲ್ಲ ಎಂದು ತಿಳಿಸಿದರು.

ಕೇಂದ್ರ ಯುವ ವ್ಯವಹಾರಗಳು, ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರು ಮಾತನಾಡಿ, ಯುವಜನೋತ್ಸವವು ವಿವಿಧ ಭಾಗಗಳ ಜನರನ್ನು ಒಟ್ಟಿಗೆ ಸೇರಿಸುತ್ತದೆ. ಯುವಜನರನ್ನು ಪ್ರೇರೇಪಿಸುವ ಪ್ರಯತ್ನದಲ್ಲಿ, ಮುಂಬರುವ ಜಿ20 ಶೃಂಗಸಭೆಯಲ್ಲಿ, ಯುವಜನರ ಆಲೋಚನೆಗಳು ಮತ್ತು ಚಿಂತನೆಗಳನ್ನು ಅಂತರರಾಷ್ಟ್ರೀಯ ವೇದಿಕೆಯಲ್ಲಿ ಪ್ರಸ್ತುತಪಡಿಸುವ ಯೂತ್-20 ಕುರಿತು ಶೀಘ್ರದಲ್ಲಿಯೇ ಅಧಿವೇಶನ ನಡೆಸಲಾಗುತ್ತದೆ. ಬಹುಪಾಲು ಯುವಕರನ್ನು ಹೇಗೆ ತಲುಪಬೇಕು ಎಂಬುದರ ಕುರಿತು ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ಹೇಳಿದರು.

ಈ ಹಿಂದೆ ಯುವ ದಿವಸವನ್ನು ಒಂದು ದಿನದ ಮಟ್ಟಿಗೆ ಆಚರಿಸಲಾಗುತ್ತಿತ್ತು, ಆದರೆ ಪ್ರಧಾನಿ ಮೋದಿ ಇದನ್ನು ಐದು ದಿನಗಳವರೆಗೆ ವಿಸ್ತರಿಸಲು ನಿರ್ಧರಿಸಿದ್ದಾರೆ ಎಂದು ತಿಳಿಸಿದರು.


Stay up to date on all the latest ರಾಜ್ಯ news
Poll
Dk shivakumar

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 65 ಸ್ಥಾನಗಳ ಗಡಿ ದಾಟುವುದಿಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.


Result
ಒಪ್ಪುತ್ತೇನೆ
ಒಪ್ಪುವುದಿಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp