ಮಾಜಿ ಸಿಎಂ ಯಡಿಯೂರಪ್ಪ.
ಮಾಜಿ ಸಿಎಂ ಯಡಿಯೂರಪ್ಪ.

ಮುಸಲ್ಮಾನರ ವಿಶ್ವಾಸ ಗೆಲ್ಲುವಂತೆ ಪ್ರಧಾನಿ ಮೋದಿ ಸೂಚಿಸಿದ್ದಾರೆ: ಬಿ.ಎಸ್.ಯಡಿಯೂರಪ್ಪ

ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಮುಸಲ್ಮಾನ ವಿಶ್ವಾಸ ಗಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಪಕ್ಷದ ಮುಖಂಡರಿಗೆ ಸೂಚಿಸಿದ್ದಾರೆಂದು ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ.
Published on

ಶಿವಮೊಗ್ಗ: ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಮುಸಲ್ಮಾನ ವಿಶ್ವಾಸ ಗಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಪಕ್ಷದ ಮುಖಂಡರಿಗೆ ಸೂಚಿಸಿದ್ದಾರೆಂದು ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರ ನಡೆದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ ಯಶಸ್ವಿಯಾಗಿದ್ದು, ಚುನಾವಣೆಯಲ್ಲಿ ಗೆಲ್ಲುವ ಕಾರ್ಯತಂತ್ರಗಳ ಕುರಿತು ಚರ್ಚಿಸಲಾಗಿದೆ ಎಂದು ಹೇಳಿದರು.

ಒಂದೂವರೆ ಗಂಟೆಗೂ ಹೆಚ್ಚು ಕಾಲ ಭಾಷಣ ಮಾಡಿ ನಮಗೆ ಮಾರ್ಗದರ್ಶನ ನೀಡಿದ ಮೋದಿಯವರು ನಮಗೆ ಮಾರ್ಗದರ್ಶನ ನೀಡಿದರು. ಇದೀಗ ಪಕ್ಷವನ್ನು ಬಲಪಡಿಸಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರುವುದು ನಮ್ಮ ಗುರಿಯಾಗಿದೆ. ಪ್ರಧಾನಿ ಮೋದಿ, ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನೀಡುವ ಸಮಯವನ್ನು ನಾವು ಸದುಪಯೋಗಪಡಿಸಿಕೊಳ್ಳುತ್ತೇವೆ. ರಾಜ್ಯದಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂಬ ಭರವಸೆ ನಾವು ಅವರಿಗೆ ನೀಡಿದ್ದೇವೆ. ಪ್ರತಿ ಮನೆಗೆ ಭೇಟಿ ನೀಡಿ ಮತದಾರರನ್ನು ಭೇಟಿಯಾಗುವಂತೆ ಮುಖಂಡರು ಮತ್ತು ಕಾರ್ಯಕರ್ತರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಮುಸ್ಲಿಮರ ವಿಶ್ವಾಸ ಗಳಿಸುವ ಅಗತ್ಯವನ್ನು ಮೋದಿಯವರು ಒತ್ತಿ ಹೇಳಿದರು. ನಾವು ಈಗಾಗಲೇ ಮುಸ್ಲಿಮರೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದೇವೆ ಮತ್ತು ನಾವು ಪರಸ್ಪರ ಗೌರವವನ್ನು ಹಂಚಿಕೊಳ್ಳುತ್ತೇವೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com