ರಾಜ್ಯ ಬಜೆಟ್ ಸಿದ್ಧತೆ: ಇಲಾಖಾವಾರು ಚರ್ಚೆ ಆರಂಭಿಸಿದ ಸಿಎಂ ಬೊಮ್ಮಾಯಿ

ಮುಂದಿನ ತಿಂಗಳು ರಾಜ್ಯ ಬಜೆಟ್ ಮಂಡನೆಗೆ ಸಿದ್ಧತೆ ನಡೆಸುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶನಿವಾರ ಶನಿವಾರ ಇಲಾಖಾವಾರು ಚರ್ಚೆ ನಡೆಸಿದರು.
ಸಿಎಂ ಬಸವರಾಜ ಬೊಮ್ಮಾಯಿ ಸಭೆ
ಸಿಎಂ ಬಸವರಾಜ ಬೊಮ್ಮಾಯಿ ಸಭೆ
Updated on

ಬೆಂಗಳೂರು: ಮುಂದಿನ ತಿಂಗಳು ರಾಜ್ಯ ಬಜೆಟ್ ಮಂಡನೆಗೆ ಸಿದ್ಧತೆ ನಡೆಸುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶನಿವಾರ ಶನಿವಾರ ಇಲಾಖಾವಾರು ಚರ್ಚೆ ನಡೆಸಿದರು.

ಮೊದಲ ದಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಇಲಾಖೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಉನ್ನತ ಶಿಕ್ಷಣ, ಐಟಿ ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತ ಮತ್ತು ಮಹಿಳಾ, ಮಕ್ಕಳ ಕಲ್ಯಾಣ ಇಲಾಖೆಗಳ ಪೂರ್ವಭಾವಿ ನಡೆಸಿದ್ದಾರೆ. 

ಈ ಸಂದರ್ಭದಲ್ಲಿ ಇಲಾಖೆವಾರು ಬೇಡಿಕೆಗಳ ಪಟ್ಟಿಯನ್ನು ಸಚಿವರು, ಅಧಿಕಾರಿಗಳು ಸಲ್ಲಿಸಿದ್ದಾರೆ. ಕೆಲವು ಇಲಾಖೆಗಳಲ್ಲಿ ಹೊಸ ಯೋಜನೆಗಳ ಅನುಷ್ಟಾನಕ್ಕೆ ಬೇಡಿಕೆ ಸಲ್ಲಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಬಿಟ್ಟರೆ ಬೇರೆ ಸಚಿವರು ಸಭೆಯಲ್ಲಿ ಇರಲಿಲ್ಲ. ಉಳಿದ ಇಲಾಖೆಗಳ ಬೇಡಿಕೆಯನ್ನು ಅಧಿಕಾರಿಗಳೇ ಸಲ್ಲಿಸಿರುವುದಾಗಿ ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com