ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕಾಂಗ್ರೆಸ್‌ನ 'ನಾ ನಾಯಕಿ' ಸಮಾವೇಶದ ಬಳಿಕ ಬಿಜೆಪಿಯಿಂದ ತುಮಕೂರಿನಲ್ಲಿ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಆಯೋಜನೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ‘ನಾ ನಾಯಕಿ’ ಸಮಾವೇಶದ ಬಳಿಕ ಶುಕ್ರವಾರ ತುಮಕೂರಿನಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಆರಂಭವಾಗಿದೆ.

ತುಮಕೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ‘ನಾ ನಾಯಕಿ’ ಸಮಾವೇಶದ ಬಳಿಕ ಶುಕ್ರವಾರ ತುಮಕೂರಿನಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಆರಂಭವಾಗಿದೆ.

2023ರಲ್ಲಿ ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣೆಗೂ ಮುನ್ನ ಮಹಿಳಾ ಮೋರ್ಚಾಗಳ ಪಾತ್ರವನ್ನು ಚರ್ಚಿಸುವ ಸಭೆಯಲ್ಲಿ ಸುಮಾರು 150 ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ.

ಸಭೆಯಲ್ಲಿ ಮಹಿಳೆಯರ ವಿವಿಧ ಸಮಸ್ಯೆಗಳು ಮತ್ತು ಆಕಾಂಕ್ಷೆಗಳು ಮತ್ತು ಕಾರ್ಯತಂತ್ರಗಳ ಬಗ್ಗೆಯೂ ಚರ್ಚಿಸಲಾಗುವುದು. ಶನಿವಾರ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿಎಲ್ ಸಂತೋಷ್ ಅವರು ಮುಖ್ಯಮಂತ್ರಿ ಮತ್ತು ಇತರ ಬಿಜೆಪಿ ನಾಯಕರ ಸಮ್ಮುಖದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಜನವರಿ 6 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ 'ನಾ ನಾಯಕಿ' (ನಾನು ನಾಯಕಿ) ಸಮಾವೇಶ ನಡೆಯಿತು. ಕಾರ್ಯಕ್ರಮಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಆಗಮಿಸಿದ್ದರು.

Related Stories

No stories found.

Advertisement

X
Kannada Prabha
www.kannadaprabha.com