ಬೆಂಗಳೂರು: ವಿದ್ಯುತ್ ಸ್ಪರ್ಶ, ಕರ್ತವ್ಯ ನಿರತ ಲೈನ್ ಮ್ಯಾನ್ ಸಾವು

ವಿದ್ಯುತ್ ಸ್ಪರ್ಶದಿಂದ ಕರ್ತವ್ಯನಿರತ ಬೆಸ್ಕಾಂ ಲೈನ್ ಮ್ಯಾನ್ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ವಿದ್ಯುತ್ ಸ್ಪರ್ಶದಿಂದ ಕರ್ತವ್ಯನಿರತ ಬೆಸ್ಕಾಂ ಲೈನ್ ಮ್ಯಾನ್ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ. ಮಾಗಡಿ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಲಪುರ ಪೊಲೀಸ್ ಚೌಕಿ ಬಳಿ ಟ್ರಾನ್ಸ್ ಫಾರ್ಮರ್ ಗೆ ಸಂಬಂಧಿಸಿದ ಸಮಸ್ಯೆ ಪರಿಹರಿಸಲು ಹೋಗಿದ್ದಾಗ ಈ ಘಟನೆ ನಡೆದಿದೆ. ಮೃತರನ್ನು ಸುಂಕದ ಕಟ್ಟೆ ನಿವಾಸಿ ಗೌತಮ್ (26)  ಎಂದು ಗುರುತಿಸಲಾಗಿದೆ. 

ಟ್ರಾನ್ಸ್ ಫಾರ್ಮರ್ ನಲ್ಲಿ ಬೆಂಕಿ ಕಾಣಿಸಿಕೊಂಡು ವಿದ್ಯುತ್ ವ್ಯತ್ಯಯವಾಗಿರುವುದಾಗಿ ನಿವಾಸಿಗಳಿಂದ ದೂರು ಸ್ವೀಕರಿಸಿದ ನಂತರ ರಾತ್ರಿ ಪಾಳಿಯಲ್ಲಿದ್ದ ಗೌತಮ್ ಮತ್ತು ಸಹೋದೋಗ್ಯಿ ಸಿದ್ದರಾಮ ಸ್ಥಳಕ್ಕೆ ತೆರಳಿದ್ದು, ಗೌತಮ್ ಟ್ರಾನ್ಸ್ ಫಾರ್ಮರ್ ಮೇಲೆ ಹತ್ತಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶದಿಂದ ಕೆಳಗೆ ಬಿದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಬದುಕುಳಿಯಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳದಲ್ಲಿ ಎರಡು ಎಲೆಕ್ರ್ಟಾನಿಕ್ ವೈರ್ ಗಳಿದ್ದು, ಒಂದರಲ್ಲಿ ಮಾತ್ರ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು. ಸುರಕ್ಷತಾ ಕ್ರಮ ಕೈಗೊಳ್ಳದ ಕಾರಣ ಗೌತಮ್ ಅವರಿಗೆ ವಿದ್ಯುತ್ ಸ್ಪರ್ಶಿಸಿದೆ ಎಂದು ಬೆಸ್ಕಾಂ ಅಧಿಕಾರಿಗಳು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com