social_icon

ಶಾಲಾ ಭೂ ವಿವಾದ: ತರಗತಿಗಳಲ್ಲಿ ಕೂರಲು ಸಾಧ್ಯವಾಗದೆ ಬಯಲಿನಲ್ಲಿ ಕುಳಿತು ಮಕ್ಕಳ ವಿದ್ಯಾಭ್ಯಾಸ!

ತಮ್ಮದಲ್ಲದ ತಪ್ಪಿಗೆ 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಂಕಷ್ಟ ಎದುರಿಸುತ್ತಿದ್ದಾರೆ. ಮಹದೇವಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಸೋಮವಾರ ಸಂಕಷ್ಟ ಎದುರಿಸಿದರು.

Published: 25th January 2023 11:23 AM  |   Last Updated: 25th January 2023 06:32 PM   |  A+A-


Students of Government Higher Primary School at Mahadevapura attend a class in the open

ಮೈದಾನದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಹದೇವಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು.

Posted By : Manjula VN
Source : The New Indian Express

ಬೆಂಗಳೂರು: ತಮ್ಮದಲ್ಲದ ತಪ್ಪಿಗೆ 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಂಕಷ್ಟ ಎದುರಿಸುತ್ತಿದ್ದಾರೆ. ಮಹದೇವಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಸೋಮವಾರ ಸಂಕಷ್ಟ ಎದುರಿಸಿದರು.
    
ಶಾಲೆ ಇರುವ ಜಮೀನು ವ್ಯಾಜ್ಯದಲ್ಲಿದ್ದು, ಇದರ ಪರಿಣಾಮ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳು ಬಯಲಿನಲ್ಲಿ ಕುಳಿತುಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ.

ಕೆಲ ವ್ಯಕ್ತಿಗಳು ಇದ್ದಕ್ಕಿದ್ದಂತೆ ಶಾಲಾ ಆವರಣಕ್ಕೆ ನುಗ್ಗಿದ್ದು, ಭಾನುವಾರ ಶಾಲೆ ಮುಚ್ಚಿದ್ದರೂ ಕೂಡ ಶಾಲೆಗೆ ಬಂದು ಕೊಠಡಿಗಳಿಗೆ ಬೀಗ ಹಾಕಿ ಹೋಗಿದ್ದರು. ಬೆಂಗಳೂರಿನ ಐಟಿಪಿಎಲ್‌ ಬಳಿ ಇರುವ ಶಾಲೆಗೆ ಕೆಲ ವ್ಯಕ್ತಿಗಳು ಬೀಗ ಜಡಿದಿದ್ದಾರೆ. ಸೋಮವಾರ ಶಾಲೆಗೆ ಮತ್ತೆ ಬಂದು ಶಿಕ್ಷಕರಿಗೆ ಶಾಲೆಗೆ ಬರದಂತೆ ಬೆದರಿಕೆ ಹಾಕಿದ್ದಾರೆ.

ಇದನ್ನೂ ಓದಿ: ಮಧ್ಯ ಪ್ರದೇಶದ ಶಾಲೆಗಳಲ್ಲಿ ಭಗವದ್ಗೀತೆ, ರಾಮಾಯಣ, ಮಹಾಭಾರತ ಬೋಧನೆ

ಇದರ ಪರಿಣಾಮ ಮಕ್ಕಳು ಸೋಮವಾರ ತರಗತಿಯ ಹೊರಗೆ ತೆರೆದ ಮೈದಾನದಲ್ಲಿ ಕುಳಿತುಕೊಂಡಿದ್ದದ್ದು ಕಂಡು ಬಂದಿತ್ತು. ಈ ವೇಳೆ ಬಿಇಒ ಪೊಲೀಸರಿಗೆ ದೂರು ನೀಡಿದ್ದು, ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ವಿದ್ಯಾರ್ಥಿಗಳು ತರಗತಿಗಳ ಒಳಗೆ ಕುಳಿತುಕೊಳ್ಳಲು ಅನುಮತಿ ನೀಡಿದರು.

ವೈಟ್‌ಫೀಲ್ಡ್ ಮುಖ್ಯರಸ್ತೆಯ ಫೀನಿಕ್ಸ್ ಮಾಲ್‌ಗೆ ಸಮೀಪವಿರುವ ಜಮೀನು 89 X 74 ಅಡಿ ವಿಸ್ತೀರ್ಣ ಹೊಂದಿದ್ದು, ಇದರ ಮೌಲ್ಯ ಸುಮಾರು 15 ಕೋಟಿ ಎಂದು ಹೇಳಲಾಗುತ್ತಿದೆ.

ಈ ಭೂಮಿಯಲ್ಲಿ ಶಾಲೆಯಿದ್ದು, ಕಟ್ಟಡದಲ್ಲಿ ಏಳು ಕೊಠಡಿಗಳು, ಶೌಚಾಲಯಗಳು ಮತ್ತು ಇತರ ಸೌಲಭ್ಯಗಳಿವೆ. ಈ ಭೂಮಿಯಲ್ಲಿ ಕನ್ನಡ ಮಾಧ್ಯಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ 1964 ರಲ್ಲಿ ಪ್ರಾರಂಭಗೊಂಡಿತ್ತು. ಇಂದಿಗೂ ಕಟ್ಟಡದಲ್ಲಿ 4, 5 ಮತ್ತು 6ನೇ ತರಗತಿ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ವೇಳೆ ಮಕ್ಕಳು ಮೊಟ್ಟೆ ಕೇಳಿದರೆ ಕೊಡಬೇಕು: ಸರ್ಕಾರ ಆದೇಶ

2018 ರಲ್ಲಿ, ಹೋಪ್ ಫೌಂಡೇಶನ್ ಹೊಸ ಶಾಲಾ ಕಟ್ಟಡವನ್ನು ನಿರ್ಮಿಸಿದ್ದು, ಇಲ್ಲಿ ಇಂಗ್ಲೀಷ್ ಮಾಧ್ಯಮದ ಶಾಲೆಯನ್ನು ಆರಂಭಿಸಲಾಗಿದೆ. ಆದರೆ, ಕನ್ನಡ ಮಾಧ್ಯಮ ಶಾಲೆಯಲ್ಲಿ ಓದುತ್ತಿರುವ ಮಕ್ಕಳು ಹಳೆಯ ಕಟ್ಟಡದಲ್ಲಿಯೇ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಹೊಸ ಕಟ್ಟಡವಿದ್ದರೂ ಆಸ್ತಿ ಕಳೆದುಕೊಳ್ಳುವ ಭೀತಿಯಿಂದ ಮಕ್ಕಳನ್ನು ಸ್ಥಳಾಂತರಿಸಲು ಮುಂದಾಗುತ್ತಿಲ್ಲ ಎಂದು ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.

ನಾವು ಸಂಪೂರ್ಣವಾಗಿ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಂಡರೆ, ಕಳೆದ 50 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಶಾಲೆಯ ಭೂಮಿಯನ್ನು ಯಾರೋ ಸ್ವಾಧೀನಪಡಿಸಿಕೊಳ್ಳುತ್ತಾರೆಂಬ ಆತಂಕ ಶಿಕ್ಷಣ ಇಲಾಖೆಗೆ ಮೂಡಿದೆ ಎನ್ನಲಾಗಿದೆ.

60ರ ದಶಕದಲ್ಲಿ ಡಿ ಪುಟ್ಟಪ್ಪ ಎಂಬುವರು ಭೂಮಿಯನ್ನು ದಾನವಾಗಿ ನೀಡಿದ್ದರು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ನಂತರ, ಇದನ್ನು ಕೈಗಾರಿಕಾ ಇಲಾಖೆ ಸ್ವಾಧೀನಪಡಿಸಿಕೊಂಡಿತು. ಕೆಲವು ವ್ಯಕ್ತಿಗಳು ಜಮೀನು ತಮಗೆ ಸೇರಿದ್ದು ಎಂದು ಸಿವಿಲ್ ಕೋರ್ಟ್‌ಗೆ ಹೋದಾಗ ತೊಂದರೆ ಪ್ರಾರಂಭವಾಯಿತು. ಶಾಶ್ವತ ತಡೆಯಾಜ್ಞೆ ನೀಡುವಂತೆ ನ್ಯಾಯಾಲಯಕ್ಕೆ ಮನವಿಯನ್ನೂ ಸಲ್ಲಿಸಿದ್ದರು.

ಆದಾಗ್ಯೂ, ನ್ಯಾಯಾಲಯವು ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಎರಡೂ ಕಡೆಗಳಿಗೆ ತಿಳಿಸಿತು ಮತ್ತು ಮುಂದಿನ ವಿಚಾರಣೆಯನ್ನು ಫೆಬ್ರವರಿ 4 ರಂದು ನಡೆಸಲು ನಿರ್ಧರಿಸಿತು. TNIE ಯೊಂದಿಗೆ ಮಾತನಾಡಿದ ಬ್ಲಾಕ್ ಶಿಕ್ಷಣಾಧಿಕಾರಿ DR ರಾಮಮೂರ್ತಿ, ನ್ಯಾಯಾಲಯವು ಯಥಾಸ್ಥಿತಿಗೆ ಆದೇಶಿಸಿರುವುದರಿಂದ, ಅವರು (ನ್ಯಾಯಾಲಯಕ್ಕೆ ಹೋದವರು) ಶಾಲೆ ನಡೆಸಲು ಅವಕಾಶ ನೀಡಬೇಕಿತ್ತು ಎಂದರು.


Stay up to date on all the latest ರಾಜ್ಯ news
Poll
Khalistani militant Hardeep Singh Nijjar

ಸಿಖ್ ಪ್ರತ್ಯೇಕತಾವಾದಿ ನಿಜ್ಜರ್ ಹತ್ಯೆಯಲ್ಲಿ ಭಾರತದ ಪಾತ್ರವಿದೆ ಎಂಬ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಆರೋಪವನ್ನು ನೀವು ನಂಬುತ್ತೀರಾ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp