224 ಶಾಸಕರಲ್ಲಿ ಶೇಕಡ 10 ರಷ್ಟು ಮಂದಿ ಮಾತ್ರ ಸರ್ಕಾರಿ ಶಾಲೆಗಳ ದತ್ತು ಪಡೆದುಕೊಂಡಿದ್ದಾರೆ: ದೊರೆಸ್ವಾಮಿ
ರಾಜ್ಯದ ಸರಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳುವಲ್ಲಿ ಚುನಾಯಿತ ಪ್ರತಿನಿಧಿಗಳ ವೈಫಲ್ಯದ ಬಗ್ಗೆ ರಾಜ್ಯ ಸರಕಾರದ ಶಿಕ್ಷಣ ಸುಧಾರಣಾ ಸಲಹೆಗಾರ ಪ್ರೊ.ಎಂ.ಆರ್.ದೊರೆಸ್ವಾಮಿ ಅವರು ಶುಕ್ರವಾರ ಅಸಮಾಧಾನ ವ್ಯಕ್ತಪಡಿಸಿದರು.
Published: 28th January 2023 08:37 AM | Last Updated: 28th January 2023 07:22 PM | A+A A-

ರಾಜ್ಯ ಸರಕಾರದ ಶಿಕ್ಷಣ ಸುಧಾರಣಾ ಸಲಹೆಗಾರ ಪ್ರೊ.ಎಂ.ಆರ್.ದೊರೆಸ್ವಾಮಿ
ಮಂಗಳೂರು: ರಾಜ್ಯದ ಸರಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳುವಲ್ಲಿ ಚುನಾಯಿತ ಪ್ರತಿನಿಧಿಗಳ ವೈಫಲ್ಯದ ಬಗ್ಗೆ ರಾಜ್ಯ ಸರಕಾರದ ಶಿಕ್ಷಣ ಸುಧಾರಣಾ ಸಲಹೆಗಾರ ಪ್ರೊ.ಎಂ.ಆರ್.ದೊರೆಸ್ವಾಮಿ ಅವರು ಶುಕ್ರವಾರ ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂಬಂಧ ಮಾತನಾಡಿರುವ ಅವರು, ರಾಜ್ಯದಲ್ಲಿ 224 ಶಾಸಕರಿದ್ದು, ಶೇ.10ರಷ್ಟು ಮಂದಿ ಮಾತ್ರ ಕೆಲವು ಸರ್ಕಾರಿ ಶಾಲೆಗಳನ್ನು ದತ್ತು ಪಡೆದಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಕ್ಷೇತ್ರದಲ್ಲಿ ಶಾಲೆಯೊಂದನ್ನು ದತ್ತು ಪಡೆದಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಮ್ಮ ಕ್ಷೇತ್ರದಲ್ಲಿ ಹಲವು ಶಾಲೆಗಳನ್ನು ಅಭಿವೃದ್ಧಿಪಡಿಸಿದ್ದಾರೆಂದು ಹೇಳಿದ್ದಾರೆ.
ನನ್ನ ಶಿಫಾರಸುಗಳ ಆಧಾರದ ಮೇಲೆ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ರಾಜ್ಯ ನೀತಿಗೆ ಹೊಸ ಆಯಾಮಗಳನ್ನು ಸೇರಿಸಲಾಗಿದೆ. 2020-21 ರ ಬಜೆಟ್ನಲ್ಲಿ ಶಾಸಕರು, ಎಂಎಲ್ಸಿಗಳು ಮತ್ತು ಸಂಸದರು ಮೂರರಿಂದ ಐದು ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳಬೇಕು ಎಂದು ಶಿಫಾರಸ್ಸಿನಲ್ಲಿ ತಿಳಿಸಲಾಗಿದೆ. ಶಾಲೆಗಳನ್ನು ದತ್ತು ತೆಗೆದುಕೊಳ್ಳುವಲ್ಲಿ ವಿಫಲರಾಗಿರುವ ತಮ್ಮ ಚುನಾಯಿತ ಪ್ರತಿನಿಧಿಗಳನ್ನು ಮತದಾರರು ಪ್ರಶ್ನಿಸಬೇಕು ಎಂದು ತಿಳಿಸಿದ್ದಾರೆ.