ತುಮಕೂರು: ಕೆರೆಯಲ್ಲಿ ಮುಳುಗುತ್ತಿದ್ದ ಇಬ್ಬರು ಸಹೋದರಿಯರನ್ನು ರಕ್ಷಿಸಿದ ಸರ್ಕಾರಿ ಬಸ್ ಚಾಲಕ

ಸರ್ಕಾರಿ ಬಸ್ ಚಾಲಕರೊಬ್ಬರು ಕೆರೆಯಲ್ಲಿ ಮುಳುಗುತ್ತಿದ್ದ ಇಬ್ಬರು ಬಾಲಕಿಯರನ್ನು ರಕ್ಷಿಸಿದ ಘಟನೆ ಜಿಲ್ಲೆಯ ಶಿರಾ ತಾಲೂಕಿನಲ್ಲಿ ನಡೆದಿದೆ. 
ತುಮಕೂರು: ಕೆರೆಯಲ್ಲಿ ಮುಳುಗುತ್ತಿದ್ದ ಇಬ್ಬರು ಸಹೋದರಿಯರನ್ನು ರಕ್ಷಿಸಿದ ಸರ್ಕಾರಿ ಬಸ್ ಚಾಲಕ

ತುಮಕೂರು: ಸರ್ಕಾರಿ ಬಸ್ ಚಾಲಕರೊಬ್ಬರು ಕೆರೆಯಲ್ಲಿ ಮುಳುಗುತ್ತಿದ್ದ ಇಬ್ಬರು ಬಾಲಕಿಯರನ್ನು ರಕ್ಷಿಸಿದ ಘಟನೆ ಜಿಲ್ಲೆಯ ಶಿರಾ ತಾಲೂಕಿನಲ್ಲಿ ನಡೆದಿದೆ. 

ಹಂದಿಕುಂಟೆ ಅಗ್ರಹಾರ ಕೆರೆಗೆ ತಾಯಿ ಜೊತೆ ಬಟ್ಟೆ ತೊಳೆಯಲು ಹೋಗಿದ್ದ 19 ವರ್ಷದ ಸುಷ್ಮಾ ಹಾಗೂ 9 ವರ್ಷದ ಮಂಜುಳ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬೀಳುತ್ತಾರೆ. 

ಇದನ್ನು ಕಂಡ ತಾಯಿ ಕೂಡಲೆ ಮಕ್ಕಳನ್ನು ರಕ್ಷಿಸುವಂತೆ ರಸ್ತೆಗೆ ಓಡಿ ಬಂದ ತಾಯಿ ಕೂಗಿಕೊಂಡಿದ್ದಾರೆ. ಈ ವೇಳೆ ಅದೇ ರಸ್ತೆಯಲ್ಲಿ ಬರುತ್ತಿದ್ದ ಸರ್ಕಾರಿ ಬಸ್ ಚಾಲಕ ಮಂಜುನಾಥ್ ಅವರು ಬಸ್ ನಿಲ್ಲಿಸಿದರು. 

ಹೆಣ್ಣುಮಕ್ಕಳು ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡ ಮಂಜುನಾತ್ ಕೆರೆಗೆ ಹಾರಿ ಇಬ್ಬರು ಸಹೋದರಿಯರ ಜೀವ ಉಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com