ವಿಜಯಪುರ: ಕೌಟುಂಬಿಕ ಕಲಹ ಹಿನ್ನೆಲೆ ಮೂವರು ಮಕ್ಕಳ ಜೊತೆಗೆ ನೀರಿನ ಸಂಪಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.
ತಾಯಿ ಗೀತಾ ತನ್ನ ಮೂವರು ಮಕ್ಕಳೊಂದಿಗೆ ಮಧ್ಯರಾತ್ರಿ ವೇಳೆ ಮನೆಯ ಎದುರು ನೀರಿನ ಸಂಪಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ರಾತ್ರಿ ಗೀತಾ ಮತ್ತು ಆಕೆಯ ಪತಿ ರಾಮು ಮಧ್ಯೆ ತೀವ್ರ ಜಗಳವಾಗಿತ್ತು. ಜಗಳ ವಿಕೋಪಕ್ಕೆ ತಿರುಗಿ ತೀವ್ರ ನೊಂದಿದ್ದ ಗೀತಾ ಮಧ್ಯರಾತ್ರಿ ವೇಳೆ ಮಕ್ಕಳನ್ನು ನೀರಿನ ಸಂಪಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ವಿಜಯಪುರ ತಿಕೋಟಾ ತಾಲ್ಲೂಕಿನ ವಿಠಲವಾಡಿ ತಾಂಡಾದಲ್ಲಿ ಈ ದುರ್ಘಟನೆ ನಡೆದಿದೆ. ಮೃತರನ್ನು ತಾಯಿ ಗೀತಾ ರಾಮು ಚೌವ್ಹಾಣ್ (32), ಮಕ್ಕಳಾದ ಸೃಷ್ಟಿ (6), ಕಿಶನ್ (3), ಸಮರ್ಥ (4) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ತಿಕೋಟಾ ಠಾಣೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
Advertisement