ಬೆಂಗಳೂರು: ತೆರಿಗೆ ವಂಚನೆ, ಚಿನ್ನಾಭರಣ ಅಂಗಡಿಗಳ ಮೇಲೆ ಐಟಿ ದಾಳಿ
ತೆರಿಗೆ ವಂಚಿಸಿ ವ್ಯಾಪಾರ ಮಾಡುತ್ತಿದ್ದ ಬೆಂಗಳೂರು ನಗರದ ಸುಮಾರು 25ಕ್ಕೂ ಹೆಚ್ಚು ಚಿನ್ನಾಭರಣ ಅಂಗಡಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
Published: 31st January 2023 06:56 PM | Last Updated: 31st January 2023 06:56 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ತೆರಿಗೆ ವಂಚಿಸಿ ವ್ಯಾಪಾರ ಮಾಡುತ್ತಿದ್ದ ಬೆಂಗಳೂರು ನಗರದ ಸುಮಾರು 25ಕ್ಕೂ ಹೆಚ್ಚು ಚಿನ್ನಾಭರಣ ಅಂಗಡಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಜಯನಗರ, ಯಶವಂತಪುರ, ಬಸವನಗುಡಿ, ಚಿಕ್ಕಪೇಟೆಯಲ್ಲಿನ ವ್ಯಾಪಾರಿಗಳ ಅಂಗಡಿಗಳ ಮೇಲೆ ದಾಳಿ ಮಾಡಿ, ದಾಖಲೆ ಪತ್ರಗಳ ಶೋಧ ಕಾರ್ಯ ನಡೆಸಿದ್ದಾರೆ. ಸುಮಾರು 300ಕ್ಕೂ ಅಧಿಕ ಅಧಿಕಾರಿಗಳ ತಂಡ ದಾಳಿಯಲ್ಲಿ ಪಾಲ್ಗೊಂಡಿದ್ದರು.
ತಂಡ, ತಂಡವಾಗಿ ಅಧಿಕಾರಿಗಳು ಚಿನ್ನಾಭರಣ ಅಂಗಡಿಗಳ ಮೇಲೆ ದಾಳಿ ಮಾಡಲಾಗಿದ್ದು, ಚಿನ್ನದ ವ್ಯಾಪಾರ, ತೆರಿಗೆ ಕಟ್ಟಿರುವ ರಶೀದಿ ಸೇರಿದಂತೆ ಇತರ ದಾಖಲೆಗಳನ್ನು ಪರಿಶೀಲಿಸಿದ್ದಾರೆ.