ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ಮುರ್ಮು; ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರಿಂದ ಸ್ವಾಗತ

ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮ ಅವರು ಸೋಮವಾರ ಬೆಂಗಳೂರಿಗೆ ಆಗಮಿಸಿದ್ದು, ಎಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್...
ರಾಷ್ಟ್ರಪತಿ ದ್ರೌಪದಿ ಮುರ್ಮ ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ
ರಾಷ್ಟ್ರಪತಿ ದ್ರೌಪದಿ ಮುರ್ಮ ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮ ಅವರು ಸೋಮವಾರ ಬೆಂಗಳೂರಿಗೆ ಆಗಮಿಸಿದ್ದು, ಎಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಆತ್ಮೀಯವಾಗಿ ಸ್ವಾಗತಿಸಿದರು.

ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ ನೇರವಾಗಿ ಚಿಕ್ಕಬಳ್ಳಾಪುರಕ್ಕೆ ತೆರಳಿರುವ ರಾಷ್ಟ್ರಪತಿ ಮುರ್ಮು ಅವರು, ಮುದ್ದೇನಹಳ್ಳಿಯಲ್ಲಿ ಶ್ರೀ ಸತ್ಯಸಾಯಿ ವಿಶ್ವವಿದ್ಯಾಲಯದ 2ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

ಬಳಿಕ ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿರುವ ಬುಡಕಟ್ಟು ಸಮುದಾಯದ ಜನತೆಯೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳು ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com