ಬಿಜೆಪಿ ವಿಪಕ್ಷ ನಾಯಕ ಮತ್ತು ರಾಜ್ಯಾಧ್ಯಕ್ಷ ನೇಮಕ: ಇಂದು ಘೋಷಣೆಯಾಗುವ ಸಾಧ್ಯತೆ; ಬಿಎಸ್ ಯಡಿಯೂರಪ್ಪ

ಬಹು ನಿರೀಕ್ಷಿತ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಮತ್ತು ಕರ್ನಾಟಕ ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ಸ್ಥಾನಗಳ ಕುರಿತು ಬುಧವಾರದಂದು ಘೋಷಣೆಯಾಗುವ ಸಾಧ್ಯತೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬುಧವಾರ ಹೇಳಿದ್ದಾರೆ.
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ

ಬೆಂಗಳೂರು: ಬಹು ನಿರೀಕ್ಷಿತ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಮತ್ತು ಕರ್ನಾಟಕ ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ಸ್ಥಾನಗಳ ಕುರಿತು ಬುಧವಾರದಂದು ಘೋಷಣೆಯಾಗುವ ಸಾಧ್ಯತೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬುಧವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದ ನಾಯಕರು ವಿರೋಧ ಪಕ್ಷದ ನಾಯಕ ಮತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶಾಸಕರು ಮತ್ತು ನಾಯಕರ ಅಭಿಪ್ರಾಯವನ್ನು ತೆಗೆದುಕೊಂಡಿದ್ದಾರೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಮಾತುಕತೆ ನಡೆಸುವ ಸಾಧ್ಯತೆ ಇದೆ ಎಂದರು.

ಈ ಕುರಿತು ಇಂದು ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ ಮತ್ತು ನಾವು ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ ಎಂದರು.

ವೀಕ್ಷಕರಾಗಿ ರಾಜ್ಯಕ್ಕೆ ಬಂದಿರುವ ಬಿಜೆಪಿಯ ಹಿರಿಯ ನಾಯಕರಾದ ವಿನೋದ್ ತಾವ್ಡೆ ಮತ್ತು ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರು ಇಂದು ಪಕ್ಷದ ಹೈಕಮಾಂಡ್‌ಗೆ ತಮ್ಮ ವರದಿಯನ್ನು ಸಲ್ಲಿಸಲಿದ್ದಾರೆ ಎಂದು ಮೂಲಗಳು ವಿವರಿಸಿವೆ. ಮಂಗಳವಾರ ತಡರಾತ್ರಿಯವರೆಗೂ ವೀಕ್ಷಕರು ಪ್ರತಿ ಶಾಸಕರು ಮತ್ತು ಪಕ್ಷದ ಮುಖಂಡರ ಅಭಿಪ್ರಾಯವನ್ನು ಪಡೆದರು.

ವಿರೋಧ ಪಕ್ಷದ ನಾಯಕನ ಘೋಷಣೆ ವಿಳಂಬವಾಗಿರುವುದರಿಂದ ಆಡಳಿತಾರೂಢ ಕಾಂಗ್ರೆಸ್ ಪಕ್ಷವು ಈ ಬಗ್ಗೆ ಬಿಜೆಪಿಯನ್ನು ತರಾಟೆಗೆ ತೆಗೆದುಕೊಳ್ಳುತ್ತಿದೆ. ಹೀಗಾಗಿ, ದಿನದ ಅಂತ್ಯದ ವೇಳೆಗೆ ಹೈಕಮಾಂಡ್ ವಿಪಕ್ಷ ನಾಯಕನ ಘೋಷಣೆ ಮಾಡುವ ಸಾಧ್ಯತೆಯಿದೆ.

ಎಲ್‌ಒಪಿ ರೇಸ್‌ನಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂಚೂಣಿಯಲ್ಲಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರ ಹೆಸರನ್ನು ಪರಿಗಣಿಸಲಾಗುತ್ತಿದೆ. ಈ ಇಬ್ಬರೂ ಅಭ್ಯರ್ಥಿಗಳನ್ನು ಯಡಿಯೂರಪ್ಪ ಬೆಂಬಲಿಸಿದ್ದಾರೆ.

ಎಲ್‌ಒಪಿ ಸ್ಥಾನಕ್ಕೆ ಮಾಜಿ ಸಚಿವ ಹಾಗೂ ಆರ್‌ಎಸ್‌ಎಸ್‌ನ ವಿ. ಸುನೀಲ್ ಕುಮಾರ್, ಮಾಜಿ ಸಚಿವ ಎಸ್. ಸುರೇಶ್ ಕುಮಾರ್, ಬಿಜೆಪಿ ಶಾಸಕರಾದ ಅರವಿಂದ್ ಬೆಲ್ಲದ್, ಬಸನಗೌಡ ಪಾಟೀಲ್ ಯತ್ನಾಳ್, ಆರ್. ಅಶೋಕ ಅವರನ್ನು ಪಕ್ಷ ಪರಿಗಣಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com