social_icon

ಕೋವಿಡೋತ್ತರ: ನಿಮ್ಹಾನ್ಸ್ ಸಂಸ್ಥೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಳ 

ಕೋವಿಡ್ ಸಾಂಕ್ರಾಮಿಕ ನಂತರದಲ್ಲಿ ಮಾನಸಿಕ ಅನಾರೋಗ್ಯ, ಅಸ್ವಸ್ಥತೆ ಹೆಚ್ಚಾಗಿದೆ. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (NIMHANS) ಒಂದು ದಶಕದಲ್ಲಿ 6.22 ಲಕ್ಷ ರೋಗಿಗಳg ದಾಖಲಾಗಿದ್ದಾರೆ. 

Published: 05th July 2023 02:17 PM  |   Last Updated: 05th July 2023 02:17 PM   |  A+A-


Nimhans

ನಿಮ್ಹಾನ್ಸ್

Posted By : Sumana Upadhyaya
Source : The New Indian Express

ಬೆಂಗಳೂರು: ಕೋವಿಡ್ ಸಾಂಕ್ರಾಮಿಕ ನಂತರದಲ್ಲಿ ಮಾನಸಿಕ ಅನಾರೋಗ್ಯ, ಅಸ್ವಸ್ಥತೆ ಹೆಚ್ಚಾಗಿದೆ. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (NIMHANS) ಒಂದು ದಶಕದಲ್ಲಿ 6.22 ಲಕ್ಷ ರೋಗಿಗಳು ದಾಖಲಾಗಿದ್ದಾರೆ. 

ನಿಮ್ಹಾನ್ಸ್‌ನ ರೆಸಿಡೆಂಟ್ ಮೆಡಿಕಲ್ ಆಫೀಸರ್ ಡಾ ಶಶಿಧರ ಎಚ್‌ಎನ್ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರತಿನಿಧಿ ಜೊತೆ ಮಾತನಾಡುತ್ತಾ, ನಿಮ್ಹಾನ್ಸ್‌ನ ಕೋವಿಡ್ ಸಾಂಕ್ರಾಮಿಕ ಮತ್ತು ಬಹು ಮಾನಸಿಕ ಆರೋಗ್ಯ ಉಪಕ್ರಮದಲ್ಲಿ ಈ ವರ್ಷ ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದೆ. ಸಾಂಕ್ರಾಮಿಕ(Covid-19) ಸಮಯದಲ್ಲಿ ಸಹಾಯ ಪಡೆಯಲು ಸಾಧ್ಯವಾಗದ ಅನೇಕ ರೋಗಿಗಳು ವೃತ್ತಿಪರ ಆರೈಕೆಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಟೆಲಿ-ಮಾನಸ್, ವ್ಯಸನಕ್ಕಾಗಿ ಬಹು ಸಹಾಯವಾಣಿಗಳು, ಮಾನಸಿಕ ಆರೋಗ್ಯ ಸಮಸ್ಯೆಗಳು ಮತ್ತು ಕೋವಿಡ್‌ನಂತಹ ಉಪಕ್ರಮಗಳು ಭಾರತದಾದ್ಯಂತ ಜಾಗೃತಿ ಮೂಡಿಸಿದವು ಇದರಿಂದ ಮಾನಸಿಕ ಆರೋಗ್ಯ ಹೆಚ್ಚಿಸಿಕೊಳ್ಳಲು ಹೆಚ್ಚಿನ ರೋಗಿಗಳು ದಾಖಲಾದರು. 

ನಿಮ್ಹಾನ್ಸ್ ತೃತೀಯ-ಆರೈಕೆ ಕೇಂದ್ರವಾಗಿದ್ದು, ಕರ್ನಾಟಕದಿಂದ ಮಾತ್ರವಲ್ಲದೆ ಇತರ ರಾಜ್ಯಗಳಿಗೂ ಸಹ ಸೇವೆ ಸಲ್ಲಿಸುತ್ತಿದೆ. ನಿಮ್ಹಾನ್ಸ್ ಮಾತ್ರವಲ್ಲದೆ ಇತರ ವೈದ್ಯಕೀಯ ಸಂಸ್ಥೆಗಳಲ್ಲೂ ಮಾನಸಿಕ ಆರೋಗ್ಯ ರೋಗಿಗಳ ಸಂಖ್ಯೆ ಹೆಚ್ಚಿದೆ. ಪ್ರತಿ ರೋಗಿಗೆ ಹೆಚ್ಚಿನ ಸಮಯ ಮತ್ತು ವಿಶೇಷ ಆರೈಕೆಯ ಅಗತ್ಯವಿರುವುದರಿಂದ ಮಾನಸಿಕ ಅಸ್ವಸ್ಥತೆ ಹೊಂದಿರುವ ರೋಗಿಗೆ ಚಿಕಿತ್ಸೆ ನೀಡುವುದು ಇತರ ಕಾಯಿಲೆಗಳಂತೆಯೇ ಅಲ್ಲ ಎಂದು ವೈದ್ಯರು ಹೇಳಿದ್ದಾರೆ.

ಕಾಲಾಂತರದಲ್ಲಿ ಮಾನಸಿಕ ಆರೋಗ್ಯ ರೋಗಿಗಳ ಸಂಖ್ಯೆ ಹೆಚ್ಚಿದೆ, ಆದರೆ ವೃತ್ತಿಪರರ ವೈದ್ಯರ ಸಂಖ್ಯೆ ಅದಕ್ಕೆ ತಕ್ಕಂತೆ ಹೆಚ್ಚಿಲ್ಲ ಎಂದು ನಿಮ್ಹಾನ್ಸ್‌ನ ಮನೋವೈದ್ಯಕೀಯ ವಿಭಾಗದ ಡಾ.ಶಿವರಾಮ ವಾರಂಬಳ್ಳಿ ಹೇಳುತ್ತಾರೆ. ಒಬ್ಬ ಸಾಮಾನ್ಯ ದೈಹಿಕ ಸಮಸ್ಯೆ ವೈದ್ಯರು ಪ್ರತಿದಿನ ಸುಮಾರು 50 ರೋಗಿಗಳನ್ನು ಸಂಪರ್ಕಿಸಿದರೆ, ಮಾನಸಿಕ ಆರೋಗ್ಯ ವೈದ್ಯರು ಕೇವಲ 10 ರೋಗಿಗಳನ್ನು ಮಾತ್ರ ನೋಡಬಹುದು. ಸರಾಸರಿಯಾಗಿ, ಮಾನಸಿಕ ಆರೋಗ್ಯ ರೋಗಿಯೊಂದಿಗೆ ಮೊದಲ ಸಮಾಲೋಚನೆಯ ಸಮಯದಲ್ಲಿ ವೈದ್ಯರು ಕನಿಷ್ಠ 25 ರಿಂದ 30 ನಿಮಿಷಗಳ ಕಾಲ ಅವರ ಮನಸ್ಸನ್ನು ಅರ್ಥಮಾಡಿಕೊಳ್ಳಬೇಕು. ಭಾರತೀಯ ವೈದ್ಯರು ಕೇವಲ 5 ರಿಂದ 10 ನಿಮಿಷಗಳನ್ನು ಕಳೆಯುತ್ತಾರೆ ಎಂದು ತಜ್ಞರು ಹೇಳುತ್ತಾರೆ. 

ಹೆಚ್ಚುತ್ತಿರುವ ರೋಗಿಗಳ ಸಂಖ್ಯೆಗಳಿಗೆ ಪೂರಕ ಆರೋಗ್ಯ ವ್ಯವಸ್ಥೆ ನೀಡಲು ನಿಮ್ಹಾನ್ಸ್ ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಪ್ರಸ್ತುತ ಹೊರರೋಗಿ ವಿಭಾಗವು 35 ವರ್ಷಕ್ಕಿಂತ ಹಳೆಯದಾಗಿದೆ ಎಂದು ಡಾ.ಶಶಿಧರ್ ಹೇಳಿದರು. 200 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಹೊಸ ಒಪಿಡಿ ಸಂಕೀರ್ಣವನ್ನು ಸ್ಥಾಪಿಸಲು ಅನುಮೋದನೆ ಪಡೆಯಲು ನಾವು ಯೋಜಿಸುತ್ತಿದ್ದೇವೆ ಎಂದು ಅವರು ಹೇಳಿದರು. ಒಳರೋಗಿಗಳಿಗಾಗಿ ಹೊಸ ನರವಿಜ್ಞಾನ ಮತ್ತು ನರಶಸ್ತ್ರಚಿಕಿತ್ಸಾ ಕಟ್ಟಡವನ್ನು ಪ್ರಾರಂಭಿಸಲಾಗಿದೆ. ದೂರದಿಂದ ಬರುವ ರೋಗಿಗಳಿಗೆ ಹೊಸ ವಿಶ್ರಾಂತಿ ಗೃಹವಿದೆ ಎಂದರು.


Stay up to date on all the latest ರಾಜ್ಯ news
Poll
N R narayana Murty

ಯಾವುದನ್ನೂ ಫ್ರೀಯಾಗಿ ಕೊಡಬಾರದು ಎಂದು ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.


Result
ಸರಿ
ತಪ್ಪು

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp