social_icon

ಇಂದಿರಾ ಕ್ಯಾಂಟೀನ್‌ ಆಹಾರದ ಗುಣಮಟ್ಟದ ಮೇಲೆ ಅಧಿಕಾರಿಗಳ ನಿಗಾ!

ನಗರದ ಇಂದಿರಾ ಕ್ಯಾಂಟೀನ್ ಗಳ ಅವ್ಯವಸ್ಥೆ ಸರಿಪಡಿಸುವ ಉದ್ದೇಶದಿಂದ ಒಂದೊಂದು ಕ್ಯಾಂಟೀನ್'ಗೆ ಒಬ್ಬೊಬ್ಬ ಅಧಿಕಾರಿ ನೇಕಮ ಮಾಡಲಾಗುವುದು ಎಂದು ಬಿಬಿಎಂಪಿ ಮುಖ್ಯ ತುಷಾರ್ ಗಿರಿನಾಥ್ ಅವರು ಹೇಳಿದ್ದಾರೆ.

Published: 11th July 2023 11:09 AM  |   Last Updated: 11th July 2023 02:01 PM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : The New Indian Express

ಬೆಂಗಳೂರು: ನಗರದ ಇಂದಿರಾ ಕ್ಯಾಂಟೀನ್ ಗಳ ಅವ್ಯವಸ್ಥೆ ಸರಿಪಡಿಸುವ ಉದ್ದೇಶದಿಂದ ಒಂದೊಂದು ಕ್ಯಾಂಟೀನ್'ಗೆ ಒಬ್ಬೊಬ್ಬ ಅಧಿಕಾರಿ ನೇಕಮ ಮಾಡಲಾಗುವುದು ಎಂದು ಬಿಬಿಎಂಪಿ ಮುಖ್ಯ ತುಷಾರ್ ಗಿರಿನಾಥ್ ಅವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಮುಖ್ಯಮಂತ್ರಿಗಳು ಭಾನುವಾರ ಇಂದಿರಾ ಕ್ಯಾಂಟೀನ್ ಗೆ ಭೇಟಿ ನೀಡಿ ಪರಿಶೀಲಿಸಿದ ಸಂದರ್ಭದಲ್ಲಿ ಕೆಲವು ಸೂಚನೆಗಳನ್ನು ನೀಡಿದ್ದಾರೆ. ಅದರಂತೆ ನಗರದ ಪ್ರತಿ ಇಂದಿರಾ ಕ್ಯಾಂಟೀನ್'ಗೆ ನಿರ್ದಿಷ್ಟವಾಗಿ ಒಬ್ಬೊಬ್ಬ ಅಧಿಕಾರಿಯನ್ನು ನಿಯೋಜನೆಗೊಳಿಸಲಾಗುವುದು ಎಂದು ಹೇಳಿದರು.

ಇಂದಿರಾ ಕ್ಯಾಂಟೀನ್ ಗಳಲ್ಲಿ ಬಿಬಿಎಂಪಿಯ ಹಳೆಯ ಸಹಾಯವಾಣಿ ಸಂಖ್ಯೆ ಇದೆ. ಇದೀಗ 1533 ಸಹಾಯವಾಣಿಯನ್ನು ಹೊಸದಾಗಿ ಆರಂಭಿಸಲಾಗಿದೆ. ಈ ಸಂಖ್ಯೆಯನ್ನು ಎಲ್ಲಾ ಇಂದಿರಾ ಕ್ಯಾಂಟೀನ್ ಗಳಲ್ಲಿ ಅಳವಡಿಕೆ ಮಾಡುವುದಕ್ಕೂ ಕ್ರಮ ಕೈಗೊಳ್ಳಲಾಗುವುದು. ಸರ್ಕಾರದ ನಡಾವಳಿಗಳ ಆಧಾರದ ಮೇಲೆ ದಾಖಲೆಗಳ ಸಿದ್ಧಪಡಿಸಿ ವಲಯವಾರು ಟೆಂಡರ್‌ಗಳನ್ನು ತರಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: ಡಿಸಿಎಂ ಡಿಕೆ ಶಿವಕುಮಾರ್​ ಸಿಟಿ ರೌಂಡ್ಸ್: ಇಂದಿರಾ ಕ್ಯಾಂಟೀನ್​ನಲ್ಲಿ ಉಪಹಾರ, ಘನತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಭೇಟಿ

ಈ ಪ್ರಕ್ರಿಯೆಯು 15 ರಿಂದ 20 ದಿನಗಳ ಕಾಲ ತೆಗೆದುಕೊಳ್ಳುತ್ತದೆ. ಪ್ರಸ್ತುತ ಹಿಂದಿನ ಗುತ್ತಿಗೆದಾರರು ಈ ಕ್ಯಾಂಟೀನ್ ನಿರ್ವಹಣೆ ಮಾಡುತ್ತಿದ್ದಾರೆ. ಶೀಘ್ರದಲ್ಲೇ ಹೊಸ ಗುತ್ತಿಗೆದಾರರು ಅಧಿಕಾರ ವಹಿಸಿಕೊಳ್ಳಲಿದ್ದು, ದರ ಹಾಗೂ ಮೆನು ಬದಲಾವಣೆ ಮಾಡಲಾಗುವುದು ಎಂದರು.

ಉಪ ಮುಖ್ಯಮಂತ್ರಿಗಳ ಸೂಚನೆಯಂತೆ ಕಸದ ಸಮಸ್ಯೆಗಳು, ಗುಂಡಿಗಳು ಮತ್ತು ಬೀದಿದೀಪಗಳ ಬಗ್ಗೆ ಗಮನಹರಿಸಲು ವಿಜಿಲೆನ್ಸ್ ಸ್ಕ್ವಾಡ್‌ಗಳನ್ನು ನಿಯೋಜಿಸಲಾಗುವುದು. ತ್ಯಾಜ್ಯದಿಂದ ಇಂಧನ ಸಂಸ್ಕರಣಾ ಘಟಕವು ಕಾರ್ಯನಿರ್ವಹಿಸುತ್ತಿಲ್ಲ. ಹೀಗಾಗಿ ಒಪ್ಪಂದಗಳನ್ನು ರದ್ದುಗೊಳಿಸಲಾಗುವುದು. ಈ ಕುರಿತ ಎಲ್ಲಾ ವಿವರಗಳನ್ನು ಟೆಂಡರ್ ದಾಖಲೆಗಳೊಂದಿಗೆ ಸರ್ಕಾರಕ್ಕೆ ಕಳುಹಿಸಲಾಗುವುದು. ಶೀಘ್ರದಲ್ಲೇ ಎಲ್ಲಾ ಸಂಸ್ಕರಣಾ ಘಟಕಗಳ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಆಲ್ಲದೆ, ಮಂಗಳವಾರದಿಂದ ಬೀದಿ ನಾಯಿ ಗಣತಿ ಆರಂಭವಾಗಲಿದೆ ಎಂದು ಮಾಹಿತಿ ನೀಡಿದರು.


Stay up to date on all the latest ರಾಜ್ಯ news
Poll
N R narayana Murty

ಯಾವುದನ್ನೂ ಫ್ರೀಯಾಗಿ ಕೊಡಬಾರದು ಎಂದು ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.


Result
ಸರಿ
ತಪ್ಪು

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp