ಎಣ್ಣೆ ಪ್ರಿಯರ ಪ್ರತಿಭಟನೆ
ಎಣ್ಣೆ ಪ್ರಿಯರ ಪ್ರತಿಭಟನೆ

ಉಡುಪಿ: ಮದ್ಯದ ಬೆಲೆ ಏರಿಕೆ ಖಂಡಿಸಿ ಎಣ್ಣೆ ಪ್ರಿಯರ ಪ್ರತಿಭಟನೆ!

ಮದ್ಯದ ಬೆಲೆ ಏರಿಕೆಯನ್ನು ಖಂಡಿಸಿ ಮಂಗಳವಾರ ಉಡುಪಿ ನಗರದಲ್ಲಿ ಎಣ್ಣೆ ಪ್ರಿಯರ  ಗುಂಪೊಂದು  ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿತು.
Published on

ಉಡುಪಿ: ಮದ್ಯದ ಬೆಲೆ ಏರಿಕೆಯನ್ನು ಖಂಡಿಸಿ ಮಂಗಳವಾರ ಉಡುಪಿ ನಗರದಲ್ಲಿ ಎಣ್ಣೆ ಪ್ರಿಯರ  ಗುಂಪೊಂದು  ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿತು.

ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮದ್ಯದ ಬೆಲೆ ಇಳಿಕೆ ಮಾಡಿ. ಇಲ್ಲದಿದ್ದಲ್ಲಿ ಬೆಳಿಗ್ಗೆ ನೈಂಟಿ, ಸಂಜೆ ನೈಂಟಿ ಉಚಿತವಾಗಿ ನೀಡಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಮದ್ಯಪ್ರಿಯರಿಗೆ ಮಲ್ಲಿಗೆ ಹಾರ ಹಾಕಿ ಆರತಿ ಎತ್ತಿ ಗೌರವಿಸಲಾಯಿತು. ಪ್ರತಿಭಟನೆ ಸ್ಥಳದಲ್ಲಿ ದೊಡ್ಡ ಮದ್ಯದ ಬಾಟಲಿಯನ್ನು ಇಟ್ಟು ಅದಕ್ಕೆ ಪೂಜೆ ಮಾಡಲಾಗಿದ್ದು ಗಮನ ಸೆಳೆಯಿತು. 

ಸರ್ಕಾರ ಉಚಿತ ಭಾಗ್ಯಗಳನ್ನು ಜಾರಿಗೊಳಿಸಿದೆ. ಆದ್ದರಿಂದ ಮದ್ಯದ ಬೆಲೆ ಹೆಚ್ಚಳ ಮಾಡಿದೆ. ಮದ್ಯ ವ್ಯಸನಿಗಳಿಂದಲೇ ಸರ್ಕಾರದ ಬೊಕ್ಕಸ ತುಂಬುತ್ತಿದೆ. ಮದ್ಯದ ಬೆಲೆ ಏರಿಕೆಯಿಂದ ಕೂಲಿ ಕಾರ್ಮಿಕರು ಮದ್ಯ ಸೇವಿಸಲು ಅಸಹಾಯಕ ಪರಿಸ್ಥಿತಿ ಎದುರಿಸುವಂತಾಗಿದೆ. ಸರ್ಕಾರವು ಉಚಿತ ಭಾಗ್ಯಗಳನ್ನು ನೀಡಿದಂತೆ ಕಾರ್ಮಿಕ ವರ್ಗದವರಿಗೆ ಉಚಿತ ಮದ್ಯವನ್ನು ನೀಡುವ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ವಿದ್ಯುತ್ ಅಥವಾ ಅಡುಗೆ ಅನಿಲ ದರ ಹೆಚ್ಚಿಸಿದರೆ ಜನರು ಪ್ರತಿಭಟನೆ ನಡೆಸುತ್ತಾರೆ. ಆದರೆ, ಮದ್ಯದ ಬೆಲೆ ಹೆಚ್ಚಿಸಿದರೆ ಯಾರೂ ಪ್ರತಿಭಟನೆ ನಡೆಸಲ್ಲ, ಹೀಗಾಗಿ ಸರ್ಕಾರದ ಗಮನ ಸೆಳೆಯಲು ಈ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com