ಬೆಂಗಳೂರಿನಲ್ಲಿ ಉಗ್ರರ ಬಂಧನ ಪ್ರಕರಣ: ಶಸ್ತ್ರಾಸ್ತ್ರ ಕಳ್ಳಸಾಗಣೆದಾರನ ಬಂಧನಕ್ಕೆ ಜಾಲ ಬೀಸಿದ ಪೊಲೀಸರು!

ಬೆಂಗಳೂರಿನಲ್ಲಿ ಕಾರ್ಯಾಚರಿಸುತ್ತಿರುವ ಭಯೋತ್ಪಾದನಾ ಘಟಕವನ್ನು ಭೇದಿಸಿ ಐವರು ಶಂಕಿತರನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಇದೀಗ ಶಸ್ತ್ರಾಸ್ತ್ರ ಕಳ್ಳಸಾಗಣೆದಾರನ ಕುರಿತಂತೆ ಮಾಹಿತಿ ಕಲೆ ಹಾಕಿದ್ದು ಆತನ ಬಂಧನಕ್ಕೆ ಶೋಧ ಕಾರ್ಯ ನಡೆಸಿದ್ದಾರೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಬೆಂಗಳೂರಿನಲ್ಲಿ ಕಾರ್ಯಾಚರಿಸುತ್ತಿರುವ ಭಯೋತ್ಪಾದನಾ ಘಟಕವನ್ನು ಭೇದಿಸಿ ಐವರು ಶಂಕಿತರನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಇದೀಗ ಶಸ್ತ್ರಾಸ್ತ್ರ ಕಳ್ಳಸಾಗಣೆದಾರನ ಕುರಿತಂತೆ ಮಾಹಿತಿ ಕಲೆ ಹಾಕಿದ್ದು ಆತನ ಬಂಧನಕ್ಕೆ ಶೋಧ ಕಾರ್ಯ ನಡೆಸಿದ್ದಾರೆ. 

ಸಿಸಿಬಿ ಪೊಲೀಸರು ಸೈಯದ್ ಸುಹೇಲ್ ಖಾನ್, ಮೊಹಮ್ಮದ್ ಫೈಝಲ್ ರಬ್ಬಾನಿ, ಮೊಹಮ್ಮದ್ ಉಮರ್, ಮುದ್ದಸ್ಸಿರ್ ಪಾಷಾ ಮತ್ತು ಜಾಹಿದ್ ತಬ್ರೇಜ್ ಎಂಬುವರನ್ನು ಬಂಧಿಸಿದ್ದು ಅವರಿಂದ ಹ್ಯಾಂಡ್ ಗ್ರೆನೇಡ್‌ಗಳು ಸೇರಿದಂತೆ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕರ್ನಾಟಕ ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳಾದ ಮೊಹಮ್ಮದ್ ಫೈಝಲ್ ರಬ್ಬಾನಿ ಮತ್ತು ಮುದ್ದಸ್ಸಿರ್ ಪಾಷಾ ಅವರೊಂದಿಗೆ ಶಸ್ತ್ರಾಸ್ತ್ರ ಕಳ್ಳಸಾಗಣೆ ಮಾಡುತ್ತಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಶಂಕಿತ ಕಳ್ಳ ಸಾಗಣೆದಾರ ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದ ಬಳಿ ಆರೋಪಿಯನ್ನು ಭೇಟಿಯಾಗಿದ್ದ. ನಂತರ ಮೂವರೂ ಬೆಂಗಳೂರು ಹೊರವಲಯದ ನೆಲಮಂಗಲ ಬಳಿಯ ಟಿ.ಬೇಗೂರಿಗೆ ಹೋಗಿದ್ದರು. ಬ್ಯಾಗ್‌ನಲ್ಲಿ ಇರಿಸಲಾಗಿದ್ದ ಶಸ್ತ್ರಾಸ್ತ್ರಗಳನ್ನು ಬಂಧಿತ ವ್ಯಕ್ತಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹೆಬ್ಬಾಳದ ಸುತ್ತಮುತ್ತಲಿನ ಖಾಸಗಿ ಆಸ್ಪತ್ರೆಯೊಂದರ ಬಳಿ ಶಂಕಿತ ಕಳ್ಳಸಾಗಣೆದಾರ ಉಗ್ರನಾಗಿದ್ದಾನೆ. ಆರೋಪಿ ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿದ್ದು ಜೈಲು ಸೇರಿದ್ದು ತನಿಖೆಯಿಂದ ಬೆಳಕಿಗೆ ಬಂದಿದೆ. ಆತನ ಇರುವಿಕೆಯ ಜಾಡು ಹಿಡಿದಿದ್ದು, ಶೀಘ್ರವೇ ಬಂಧಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರಿನ ಸೆಂಟ್ರಲ್ ಜೈಲಿನಲ್ಲಿರುವ 2008ರ ಬೆಂಗಳೂರು ಸರಣಿ ಸ್ಫೋಟದ ಭಯೋತ್ಪಾದಕ ಶಂಕಿತ ಟಿ.ನಜೀರ್ ಬಂಧಿತ ಐವರು ಯುವಕರನ್ನು ಬ್ರೈನ್ ವಾಶ್ ಮಾಡಿದ್ದಾನೆ ಮತ್ತು ಅವರು ಲಷ್ಕರ್-ಎ-ತೊಯ್ಬಾದೊಂದಿಗೆ ಸಂಪರ್ಕ ಹೊಂದಿದ್ದಾರೆಂದು ಕರ್ನಾಟಕ ಪೊಲೀಸರು ತಿಳಿಸಿದ್ದಾರೆ.

ನಜೀರ್ ಆರೋಪಿಗಳಿಗೆ ಆದೇಶಗಳನ್ನು ನೀಡುತ್ತಿದ್ದು ಆತ ಅಫ್ಘಾನಿಸ್ತಾನದ ಗಡಿ ಪ್ರದೇಶಗಳಿಂದ ಕಾರ್ಯಾಚರಣೆ ನಡೆಸುತ್ತಿರುವ ಶಂಕಿತ ಪ್ರಧಾನ ಕಿಂಗ್‌ಪಿನ್ ಮೊಹಮ್ಮದ್ ಜುನೈದ್ ಮೂಲಕ ಭಯೋತ್ಪಾದಕರ ಗ್ಯಾಂಗ್ ಅನ್ನು ನಿಯಂತ್ರಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಬಂಧಿತ ಆರೋಪಿಗಳು ಜೈಲಿನಲ್ಲಿದ್ದಾಗ ಜುನೈದ್ ಮೂಲಕ ನಜೀರ್ ಸಂಪರ್ಕಕ್ಕೆ ಬಂದಿದ್ದರು ಎಂದು ಮೂಲಗಳು ತಿಳಿಸಿವೆ. ನಜೀರ್ ಅವರನ್ನು ಬ್ರೈನ್ ವಾಶ್ ಮಾಡಿದ್ದನು. ಜುನೈದ್ ನಂತರ ಐಟಿ ಸಿಟಿ ಬೆಂಗಳೂರಿನಲ್ಲಿ ದೊಡ್ಡ ಭಯೋತ್ಪಾದಕ ದಾಳಿ ನಡೆಸಲು ಅವರನ್ನು ಸಿದ್ಧಪಡಿಸಿದನು.

ಜುನೈದ್‌ಗೆ ಭಾರತದ ಗಡಿ ದಾಟಲು ನಜೀರ್‌ ಸಹಾಯ ಮಾಡಿದ್ದ ಎಂಬುದು ತನಿಖೆಯಿಂದ ಬೆಳಕಿಗೆ ಬಂದಿದೆ. ನಜೀರ್ ನನ್ನು ವಶಕ್ಕೆ ಪಡೆಯಲಾಗುವುದು ಎಂದು ಸಿಸಿಬಿ ವಿಶೇಷ ವಿಭಾಗದ ಮೂಲಗಳು ವಿವರಿಸಿವೆ. ಬಂಧಿತ ಆರೋಪಿಗಳೆಲ್ಲರೂ ತಮಗೆ ಕೇಂದ್ರ ಕಾರಾಗೃಹದಲ್ಲಿ ಭಯೋತ್ಪಾದಕ ದಾಳಿ ನಡೆಸಲು ನಜೀರ್ ಎಂಬಾತ ಬೋಧನೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ.

ಅಜರ್‌ಬೈಜಾನ್‌ನ ರಾಜಧಾನಿ ಬಾಕು ನಗರದಲ್ಲಿ ಜುನೈದ್‌ಗೆ ಸಂಪರ್ಕವಿದೆ ಎಂದು ತನಿಖೆಯಿಂದ ತಿಳಿದುಬಂದಿದೆ. ಆತ 2021ರಲ್ಲಿ ಮೂಲ ಪಾಸ್‌ಪೋರ್ಟ್‌ನಲ್ಲಿ ಮಧ್ಯಪ್ರಾಚ್ಯಕ್ಕೆ ಹೋಗಿದ್ದನು. ಜುನೈದ್ ನನ್ನು ಪತ್ತೆಹಚ್ಚಲು ಕರ್ನಾಟಕ ಪೊಲೀಸರು ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com