social_icon

ಗ್ಯಾರಂಟಿ ವಿಚಾರದಲ್ಲಿ ಮಾತು ತಪ್ಪಿದರೆ ವಚನಭ್ರಷ್ಟ ಪೋಸ್ಟರ್ ರಿಲೀಸ್: ಎನ್.ರವಿಕುಮಾರ್

ಕಾಂಗ್ರೆಸ್ ಪಕ್ಷದವರು ಗ್ಯಾರಂಟಿ ವಿಚಾರದಲ್ಲಿ ನುಡಿದಂತೆ ನಡೆಯದೆ ಇದ್ದರೆ ವಚನ ಭ್ರಷ್ಟ ಪಟ್ಟ ಕಟ್ಟುತ್ತೇವೆ. ವಚನಭ್ರಷ್ಟ ಪೋಸ್ಟರ್ ರಿಲೀಸ್ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಎಚ್ಚರಿಸಿದ್ದಾರೆ.

Published: 01st June 2023 03:36 PM  |   Last Updated: 01st June 2023 03:38 PM   |  A+A-


Ravikumar1

ರವಿಕುಮಾರ್

Posted By : Nagaraja AB
Source : Online Desk

ಬೆಂಗಳೂರು: ಕಾಂಗ್ರೆಸ್ ಪಕ್ಷದವರು ಗ್ಯಾರಂಟಿ ವಿಚಾರದಲ್ಲಿ ನುಡಿದಂತೆ ನಡೆಯದೆ ಇದ್ದರೆ ವಚನ ಭ್ರಷ್ಟ ಪಟ್ಟ ಕಟ್ಟುತ್ತೇವೆ. ವಚನಭ್ರಷ್ಟ ಪೋಸ್ಟರ್ ರಿಲೀಸ್ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಎಚ್ಚರಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಸರಕಾರದ ಕ್ಯಾಬಿನೆಟ್ ನಾಳೆ ನಡೆಯಲಿದೆ. ಈಗಾಗಲೇ ಸರಕಾರ ರಚನೆ ಆಗುವ ಮೊದಲು, ಅಧಿಕಾರಕ್ಕೆ ಬರುವ ಮೊದಲು ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರು ಕರ್ನಾಟಕದ ಜನತೆಗೆ ಏನು ಮಾತು ಕೊಟ್ಟಿದ್ದಾರೋ, ವಚನ ನೀಡಿದ್ದಾರೋ ಆ ಪ್ರಕಾರ ನಡೆಯಬೇಕೆಂದು ಬಿಜೆಪಿ ಆಗ್ರಹಿಸುತ್ತದೆ ಎಂದರು.

ಎಲ್ಲ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಎಂದಿದ್ದರು. ಈಗ ಏನೇನೋ ಕಂಡಿಷನ್ ಹಾಕುತ್ತಿದ್ದಾರೆ. ಅಂದರೆ ಅದು ವಚನಭ್ರಷ್ಟತೆ. ಎಲ್ಲ ನಿರುದ್ಯೋಗಿ ಪದವೀಧರರಿಗೆ 3 ಸಾವಿರ, ಎಲ್ಲ ನಿರುದ್ಯೋಗಿ ಡಿಪ್ಲೊಮ ಪಡೆದವರಿಗೆ 1,500 ರೂಪಾಯಿ ಕೊಡುವುದಾಗಿ ತಿಳಿಸಿದ್ದರು. ಈಗ ಕಂಡಿಷನ್ ಹಾಕುತ್ತಿದ್ದು, ವಚನಭ್ರಷ್ಟತೆ ಕಾಣುತ್ತಿದೆ. 200 ಯೂನಿಟ್ ಕರೆಂಟ್ ಫ್ರೀ. ಮಹದೇವಪ್ಪ ನಿನ್ಗೂ ಫ್ರೀ. ನನಗೂ ಫ್ರೀ ಎಂದಿದ್ದರು. ಅದರಂತೆ ನಡೆಯದಿದ್ದರೆ ವಚನ ಭ್ರಷ್ಟತೆ ಎಂದು ಆರೋಪಿಸಿದರು.

ಇದನ್ನೂ ಓದಿ: ಐದರಲ್ಲಿ ಮೂರು ಗ್ಯಾರಂಟಿ ಜಾರಿ ಸುಲಭ: ಸಿದ್ದರಾಮಯ್ಯ ಸರ್ಕಾರಕ್ಕೆ ತಲೆನೋವಾದ ಎರಡು ಗ್ಯಾರಂಟಿ ಭಾಗ್ಯಗಳು

10 ಕೆಜಿ ಅಕ್ಕಿ ವಿಚಾರದಲ್ಲೂ ಈಗ ಕೇಂದ್ರವನ್ನು ಕೇಳುವುದಾಗಿ ಹೇಳುತ್ತಿದ್ದಾರೆ. ಮುಂಚೆ ಇದನ್ನು ಹೇಳಿದ್ದರೇ ಎಂದು ಕೇಳಿದರು. ನಿಮ್ಮ ಪ್ರಣಾಳಿಕೆ, ಭಾಷಣ, ಘೋಷಣೆಯಂತೆ ನಡೆಯಬೇಕು ಎಂದು ಆಗ್ರಹಿಸಿದರು. ಅತ್ತೆಗೂ, ಸೊಸೆಗೂ ಉಚಿತ ಬಸ್ ಪ್ರಯಾಣ. ಹಾಸನಕ್ಕಾದ್ರೋ ಹೋಗಿ; ಧರ್ಮಸ್ಥಳಕ್ಕಾದ್ರೂ ಹೋಗಿ ಎಂದಿದ್ದರು. ಈಗ 60 ಕಿಮೀಗೆ ಮಿತಿ ಹೇರುವ ಮಾತನಾಡುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಗ್ಯಾರಂಟಿಗಳ ಅನುಷ್ಠಾನಕ್ಕೆ ಸುಮಾರು 85 ಸಾವಿರ ಕೋಟಿ ರೂಪಾಯಿ ವೆಚ್ಚ ಆಗಲಿದೆ. ಇದನ್ನು ಎಲ್ಲಿಂದ ತರುತ್ತೀರಾ? ಈ ಹಣ ಹೇಗೆ ಹೊಂದಿಸುತ್ತೀರಾ? ಕೆಎಸ್‍ಆರ್‍ಟಿಸಿ ಈಗಾಗಲೇ ನಷ್ಟದಲ್ಲಿದೆ. ವೇತನ, ಡೀಸೆಲ್, ಬಸ್ ಪಂಕ್ಚರ್‍ಗೂ ದುಡ್ಡಿಲ್ಲದ ಸ್ಥಿತಿ ಇದೆ. ಇಂಥ ಪರಿಸ್ಥಿತಿಯಲ್ಲಿ ಉಚಿತ ಬಸ್ ಪ್ರಯಾಣ ಎಂದಿದ್ದೀರಿ ಎಂದು ಪ್ರಶ್ನೆ ಮುಂದಿಟ್ಟರು.

ಧಿಕಾರಕ್ಕೆ ಬಂದ 24 ಗಂಟೆ ಎಂದು ಹೇಳಿದ್ದೀರಿ. ಈಗೇನಾಗಿದೆ? 24 ಗಂಟೆ ಅಲ್ಲ. 14 ದಿನಗಳೇ ಕಳೆದಿವೆ. ಹಾಗಾಗಿ ಬಿಜೆಪಿ ನಾಳೆ ಕ್ಯಾಬಿನೆಟ್ ನಿರ್ಧಾರವನ್ನು ಕಾಯಲಿದೆ. ನೀವು ನುಡಿದಂತೆ ನಡೆಯದೆ ಇದ್ದರೆ ನಾವು ನಿಮಗೆ ವಚನಭ್ರಷ್ಟ ಪಟ್ಟ ಕಟ್ಟುತ್ತೇವೆ. ವಚನಭ್ರಷ್ಟ ಪೋಸ್ಟರ್ ರಿಲೀಸ್ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.


Stay up to date on all the latest ರಾಜ್ಯ news
Poll
Khalistani militant Hardeep Singh Nijjar

ಸಿಖ್ ಪ್ರತ್ಯೇಕತಾವಾದಿ ನಿಜ್ಜರ್ ಹತ್ಯೆಯಲ್ಲಿ ಭಾರತದ ಪಾತ್ರವಿದೆ ಎಂಬ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಆರೋಪವನ್ನು ನೀವು ನಂಬುತ್ತೀರಾ?


Result
ಹೌದು
ಇಲ್ಲ

Comments(1)

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

  • shri

    re ..first ask Modiji about 15 lacks ..can we release poster ?
    3 months ago reply
flipboard facebook twitter whatsapp