ಸಿಎಂ ಸಿದ್ದರಾಮಯ್ಯ ರಾಜಕೀಯ ಕಾರ್ಯದರ್ಶಿಯಾಗಿ ಕೆ ಗೋವಿಂದರಾಜ್, ನಜೀರ್‌ ಅಹ್ಮದ್ ನೇಮಕ!

ಸಿಎಂ ಸಿದ್ಧರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿಯಾಗಿ ವಿಧಾನಪರಿಷತ್ ಸದಸ್ಯರಾದ ಕೆ.‌ ಗೋವಿಂದರಾಜ್​ ಮತ್ತು ನಜೀರ್‌ ಅಹ್ಮದ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿಯಾಗಿ ವಿಧಾನಪರಿಷತ್ ಸದಸ್ಯರಾದ ಕೆ.‌ ಗೋವಿಂದರಾಜ್​ ಮತ್ತು ನಜೀರ್‌ ಅಹ್ಮದ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 

ಸಿಎಂ ಕಾನೂನು ಸಲಹೆಗಾರರಾಗಿ ಕೊಡಗು ಜಿಲ್ಲೆಯ ವಿರಾಜಪೇಟೆ ಶಾಸಕ ಪೊನ್ನಣ್ಣ ಅವರನ್ನು ನೇಮಕ ಮಾಡುವ ಮೂಲಕ ಸಂಪುಟ ದರ್ಜೆ ಸ್ಥಾನಮಾನ‌ಗಳನ್ನು ನೀಡಲಾಗಿದೆ.

ಇನ್ನು ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲು ಚುನಾವಣಾ ನೀತಿ ರೂಪಿಸಿದ್ದ ಸುನೀಲ್​​ ಕನುಗೋಳು ಅವರನ್ನು ಸಿಎಂ ಮುಖ್ಯ ಸಲಹೆಗಾರರನ್ನಾಗಿ ನೇಮಿಸಲಾಗಿದೆ. ಈ ನಾಲ್ವರಿಗೆ ಸಂಪುಟ ದರ್ಜೆಯ ಸ್ಥಾನಮಾನ‌ದೊಂದಿಗೆ, ಎಲ್ಲ ಸೌಲಭ್ಯಗಳನ್ನು ನೀಡುವಂತೆ ಆದೇಶಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com