social_icon

'ಗುಂಡು ಪಾರ್ಟಿ' ವೇಳೆ ಕಾಂಗ್ರೆಸ್ ಪಕ್ಷವನ್ನು ಶ್ಲಾಘಿಸಿದ ವ್ಯಕ್ತಿಗೆ ಸ್ವೇಹಿತರಿಂದಲೇ ಥಳಿತ

ತಂದೆಯಾದ ಖುಷಿಯಲ್ಲಿ ಸ್ನೇಹಿತರಿಗೆ 'ಗುಂಡು ಪಾರ್ಟಿ' ನೀಡಿದ್ದ ವ್ಯಕ್ತಿಗೆ ಆತನ ಸ್ನೇಹಿತರೇ ಥಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Published: 02nd June 2023 10:25 PM  |   Last Updated: 03rd June 2023 04:56 PM   |  A+A-


Man attacked by roommates for praising Congress party

ಗುಂಡು ಪಾರ್ಟಿ ವೇಳೆ ಸ್ನೇಹಿತರ ಗಲಾಟೆ

Posted By : Srinivasamurthy VN
Source : The New Indian Express

ಬೆಂಗಳೂರು: ತಂದೆಯಾದ ಖುಷಿಯಲ್ಲಿ ಸ್ನೇಹಿತರಿಗೆ 'ಗುಂಡು ಪಾರ್ಟಿ' ನೀಡಿದ್ದ ವ್ಯಕ್ತಿಗೆ ಆತನ ಸ್ನೇಹಿತರೇ ಥಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಹಲ್ಲೆಗೊಳಗಾದ ವ್ಯಕ್ತಿ 33 ವರ್ಷದ ವಿಕೆ ರಂಗನಾಥ್ ಎಂದು ತಿಳಿದುಬಂದಿದೆ. ಪೊಲೀಸ್ ಮೂಲಗಳ ಪ್ರಕಾರ ರಂಗನಾಥ್ ಫುಡ್ ಡೆಲಿವರಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದ. ಅಮೃತ್ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತನ್ನ ಸ್ನೇಹಿತರೊಂದಿಗೆ ರೂಮಿನಲ್ಲಿ ವಾಸಿಸುತ್ತಿದ್ದ.

ಇದನ್ನೂ ಓದಿ: ಗಡಿಪಾರು ಭೀತಿಯಲ್ಲಿದ್ದ ಚೇತನ್​ ಅಹಿಂಸಾಗೆ ಮತ್ತೆ ಬಿಗ್ ರಿಲೀಫ್: ತಡೆಯಾಜ್ಞೆ ವಿಸ್ತರಿಸಿದ ಕರ್ನಾಟಕ ಹೈಕೋರ್ಟ್

ತಂದೆಯಾದ ಖುಷಿಯಲ್ಲಿ ತನ್ನ ಸ್ನೇಹಿತರಿಗೆ ರಂಗನಾಥ್ ಗುಂಡುಪಾರ್ಟಿ ಆಯೋಜಿಸಿದ್ದರು. ಸಮೀಪದ ಬಾರ್ ವೊಂದರಲ್ಲಿ ಸ್ನೇಹಿತರೊಂದಿಗೆ ಬಿಯರ್ ಕುಡಿಯುತ್ತಿದ್ದ ರಂಗನಾಥ್ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ವೇಳೆ ಕರ್ನಾಟಕ ರಾಜಕೀಯ ವಿಚಾರವೂ ಚರ್ಚೆಗೆ ಬಂದಿದ್ದು, ರಂಗನಾಥ್ ಕಾಂಗ್ರೆಸ್ ಪಕ್ಷದ ಜಯದ ಕುರಿತು ಹರ್ಷ ವ್ಯಕ್ತಪಡಿಸಿದ್ದಾರೆ. ಇದರಿಂದ ಕೋಪಗೊಂಡ ಸ್ನೇಹಿತರು ವಾಕ್ಸಮರ ನಡೆಸಿದ್ದಾರೆ. 

ರಂಗನಾಥ್ ಸ್ನೇಹಿತರು ಬಿಜೆಪಿ ಬೆಂಬಲಿಗರು ಎನ್ನಲಾಗಿದ್ದು, ಕಾಂಗ್ರೆಸ್ ಬೆಂಬಲಕ್ಕೆ ನಿಂತ ರಂಗನಾಥ್ ವಿರುದ್ಧ ವಾಕ್ಸಮರ ನಡೆಸಿದ್ದಾರೆ. ನೋಡ ನೋಡುತ್ತವೇ ಈ ವಾಕ್ಸಮರ ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದು ಈ ವೇಳೆ ರಂಗನಾಥ್ ಗೆ ಆತನ ಸ್ನೇಹಿತರು ಬಿಯರ್ ಬಾಟಲಿಯಿಂದ ತಲೆಗೆ ಹೊಡೆದಿದ್ದಾರೆ. ಮಧುಸೂಧನ್ ಎಂಬಾತ ಬಿಯರ್ ಬಾಟಲ್ ನಿಂದ ಹಲ್ಲೆ ಮಾಡುತ್ತಿದ್ದಂತೆಯೇ ಕುಮಾರ್ ಮತ್ತು ಪ್ರಸಾದ್ ಎಂಬುವವರು ಮಧುಸೂಧನ್ ನನ್ನು ತಡೆದರು. ಈ ವೇಳೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಬಾರ್ ಸಿಬ್ಬಂದಿ ಪೊಲೀಸರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಸೋಮೇಶ್ವರ ಬೀಚ್ ನಲ್ಲಿ ನೈತಿಕ ಪೊಲೀಸ್ ಗಿರಿ; ಅಪ್ರಾಪ್ತ ಸೇರಿದಂತೆ ಐದು ಮಂದಿ ಬಂಧನ

ಸ್ಥಳಕ್ಕೆ ದೌಡಾಯಿಸಿದ ಅಮೃತಹಳ್ಳಿ ಪೊಲೀಸರು ಮಧುಸೂಧನ್, ಮನೋಜ್ ಕುಮಾರ್ ಮತ್ತು ಬಿ ಪ್ರಸಾದ್ ಎಂಬುವವರನ್ನು ವಶಕ್ಕೆ ಪಡೆದು ಐಪಿಸಿ 324 ಮತ್ತು ಇತರ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಸ್ತುತ ಹಲ್ಲೆಗೊಳಗಾದ ರಂಗನಾಥ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸೋಮವಾರ ಈ ಸಂಬಂಧ ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ ಅಮೃತಹಳ್ಳಿಯ ಈಶ್ವರ ದೇವಸ್ಥಾನದ ಬಳಿ ಆರೋಪಿಗಳ ಜತೆ ವಾಸವಿದ್ದರು. ಬಿಯರ್ ಪಾರ್ಟಿ ವೇಳೆ ಈ ಗಲಾಟೆಯಾಗಿದ್ದು ಗಲಾಟೆ ವಿಕೋಪಕ್ಕೆ ತಿರುಗಿ ಹಲ್ಲೆ ಮಾಡಲಾಗಿದೆ. ರಂಗನಾಥ್ ಅವರ ಕುತ್ತಿಗೆಗೆ ಆರು ಹೊಲಿಗೆ ಹಾಕಲಾಗಿ, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, ಬಂಧಿತ ಇಬ್ಬರನ್ನು ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಸಂತ್ರಸ್ತ ಮತ್ತು ಆರೋಪಿಗಳು ಕಳೆದ ಆರರಿಂದ ಏಳು ತಿಂಗಳಿಂದ ಒಟ್ಟಿಗೆ ವಾಸಿಸುತ್ತಿದ್ದಾರೆ. ಮೂರನೇ ಆರೋಪಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಇದನ್ನೂ ಓದಿ: ಚಿಕ್ಕಮಗಳೂರು: ಯುವಕರಿಂದ ಅಸಭ್ಯ ವರ್ತನೆ, ನ್ಯಾಯಕ್ಕಾಗಿ ಮಗುವಿನೊಂದಿಗೆ ಅರ್ಧರಾತ್ರಿವರೆಗೂ ಠಾಣೆಯಲ್ಲಿ ಕುಳಿತ ಮಹಿಳೆ!

ಈ ಬಗ್ಗೆ ಮಾತನಾಡಿರುವ ರಂಗನಾಥ್, “ನಾನು ಈಗ ಪ್ರತ್ಯೇಕವಾಗಿಯೇ ಇದ್ದೇನೆ. ಇತರ ರೂಮ್‌ಮೇಟ್‌ಗಳು ಸಹ ಆಹಾರ ವಿತರಣಾ ಏಜೆಂಟ್‌ಗಳಾಗಿದ್ದಾರೆ. ರಕ್ತಸ್ರಾವದಿಂದ ಬಳಲುತ್ತಿದ್ದ ನನ್ನನ್ನು ಆಸ್ಪತ್ರೆಗೆ ತಲುಪಿಸಲು ಮತ್ತೊಬ್ಬ ಸ್ನೇಹಿತ ನೆರವಾದರು ಎಂದು ಹೇಳಿದ್ದಾರೆ.


Stay up to date on all the latest ರಾಜ್ಯ news
Poll
Khalistani militant Hardeep Singh Nijjar

ಸಿಖ್ ಪ್ರತ್ಯೇಕತಾವಾದಿ ನಿಜ್ಜರ್ ಹತ್ಯೆಯಲ್ಲಿ ಭಾರತದ ಪಾತ್ರವಿದೆ ಎಂಬ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಆರೋಪವನ್ನು ನೀವು ನಂಬುತ್ತೀರಾ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp