ಸದ್ದಿಲ್ಲದೆ ಜೀರೋ ಟ್ರಾಫಿಕ್ನಲ್ಲಿ ಓಡಾಡುತ್ತಿರುವ ಸಿಎಂ ಸಿದ್ದರಾಮಯ್ಯ: ಬಿಜೆಪಿ ಲೇವಡಿ
ಜೀರೋ ಟ್ರಾಫಿಕ್ ಬೇಡ ಎಂದು ಹೇಳಿದ್ದ ಸಿಎಂ ಸಿದ್ದರಾಮಯ್ಯ ಈಗ ಮತ್ತೆ ಸದ್ದಿಲ್ಲದೆ ಜೀರೋ ಟ್ರಾಫಿಕ್ ನಲ್ಲಿ ಓಡಾಡುತ್ತಿದ್ದಾರೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.
Published: 05th June 2023 01:10 AM | Last Updated: 05th June 2023 06:25 PM | A+A A-

ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಜೀರೋ ಟ್ರಾಫಿಕ್ ಬೇಡ ಎಂದು ಹೇಳಿದ್ದ ಸಿಎಂ ಸಿದ್ದರಾಮಯ್ಯ ಈಗ ಮತ್ತೆ ಸದ್ದಿಲ್ಲದೆ ಜೀರೋ ಟ್ರಾಫಿಕ್ ನಲ್ಲಿ ಓಡಾಡುತ್ತಿದ್ದಾರೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಇದು ರಿವರ್ಸ್ ಗೇರ್ ಕಾಂಗ್ರೆಸ್ ಎಂದು ಅಂದೇ ಹೇಳಿದ್ದೇವು. ಈಗ ಅದು ಪ್ರತ್ಯಕ್ಷವಾಗಿ ಸಾಬೀತಾಗುತ್ತಿದೆ ಎನ್ನುವುದು ರಾಜ್ಯದ ಪಾಲಿಗೆ ಖೇದಕರ ಎಂದು ಟೀಕಿಸಿದೆ. ಜೀರೋ ಟ್ರಾಫಿಕ್ ಬೇಡ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದು ಸುದ್ದಿಯಾಗೋದಕ್ಕೆ ಮಾತ್ರ. ಈಗ ಸದ್ದಿಲ್ಲದೇ ಮತ್ತೆ ಜೀರೋ ಟ್ರಾಫಿಕ್ ನಲ್ಲಿ ಓಡಾಡುತ್ತಿದ್ದಾರೆ ಎಂದು ಕಿಡಿಕಾರಿದೆ.
ಇದು #ReverseGearCongress ಎಂದು ನಾವು ಅಂದೇ ಹೇಳಿದ್ದೆವು. ಈಗದು ಪ್ರತ್ಯಕ್ಷವಾಗಿ ಸಾಬೀತಾಗುತ್ತಿದೆ ಅನ್ನೂವುದೂ ರಾಜ್ಯದ ಪಾಲಿಗೆ ಖೇದಕರ.
ಜೀರೋ ಟ್ರಾಫಿಕ್ ಬೇಡ ಎಂದು ಮುಖ್ಯಮಂತ್ರಿ @siddaramaiah ನವರು ಹೇಳಿದ್ದು ಸುದ್ದಿಯಾಗೋದಕ್ಕೆ ಮಾತ್ರ. ಈಗ ಸದ್ದಿಲ್ಲದೆ ಮತ್ತೆ ಜೀರೋ ಟ್ರಾಫಿಕ್ನಲ್ಲಿ ಓಡಾಡುತ್ತಿದ್ದಾರೆ.
200 ಯುನಿಟ್ ಉಚಿತ… pic.twitter.com/OrfXG4DChw— BJP Karnataka (@BJP4Karnataka) June 4, 2023
ಮೇ 20 ರಂದು ಮುಖ್ಯಮಂತ್ರಿ ಅಧಿಕಾರ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ, ತಮಗಿದ್ದ ಜೀರೋ ಟ್ರಾಫಿಕ್ ಸೌಲಭ್ಯ ತ್ಯಜಿಸಿರುವುದಾಗಿ ಟ್ವೀಟ್ ಮಾಡಿದ್ದರು. ಆದರೆ ಶನಿವಾರ ಬೆಂಗಳೂರಿನ ಸೌತ್ ಎಂಡ್ ಸರ್ಕಲ್ ನಿಂದ ಲಾಲ್ ಬಾಗ್ ವೆಸ್ಟ್ ಗೇಟ್ ಗೆ ಪ್ರಯಾಣಿಸುವ ವೇಳೆ ಸಿದ್ದರಾಮಯ್ಯ ಅವರಿಗೆ ಪೊಲೀಸರು ಜೀರೋ ಟ್ರಾಫಿಕ್ ಸೌಲಭ್ಯ ಕಲ್ಪಿಸಿದ್ದಾರೆ. ಇದು ಬಿಜೆಪಿ ಟೀಕೆಗೆ ಕಾರಣವಾಗಿದೆ.
ಇದನ್ನೂ ಓದಿ: ಸಾರ್ವಜನಿಕರಿಗೆ ತಮ್ಮಿಂದಾಗುವ ಕಿರಿಕಿರಿ ತಪ್ಪಿಸಲು ಜೀರೋ ಟ್ರಾಫಿಕ್ ಬೇಡ ಎಂದ ಸಿಎಂ ಸಿದ್ದರಾಮಯ್ಯ
200 ಯುನಿಟ್ ಉಚಿತ ವಿದ್ಯುತ್ ಯೋಜನೆ ಅದೆಂಥಾ ದೋಖಾ ಎಂದು ದಿನಹೋದಂತೆ ಸಾಬೀತಾಗುತ್ತಿದೆ. 200 ಯುನಿಟ್ ಫ್ರೀ ಅಂದಿಲ್ಲವೆಂದು ಇಂಧನ ಸಚಿವರೇ ರಿವರ್ಸ್ ಕನೆಕ್ಷನ್ ಕೊಡುತ್ತಿದ್ದಾರೆ. ಜನ, ಕೈಗಾರಿಕೆ ಮತ್ತು ಉದ್ಯೋಗ ಸೃಷ್ಟಿಗೆ ಶಾಕ್ ಮಾತ್ರವಲ್ಲ ಶಾರ್ಟ್ ಸರ್ಕ್ಯೂಟ್ನ ಅನುಭವ ಕೊಡಲು ಕೆಜೆ ಜಾರ್ಜ್ ಸನ್ನದ್ಧರಾಗಿದ್ದಾರೆ ಎಂದು ಬಿಜೆಪಿ ಹೇಳಿದೆ.