ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ವಿಚಾರಕ್ಕೆ ಜಗಳ; ಯುವಕನ ಕೊಲೆಯಲ್ಲಿ ಅಂತ್ಯ

ಟೋಲ್​ ಪಡೆಯುವ ವಿಚಾರಕ್ಕೆ ಸಿಬ್ಬಂದಿ ಹಾಗೂ ಯುವಕರ ನಡುವೆ ಗಲಾಟೆ ನಡೆದು ಟೋಲ್ ಸಿಬ್ಬಂದಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯ ರಾಮನಗರ ‌ತಾಲೂಕಿನ ಶೇಷಗಿರಿಹಳ್ಳಿ‌ ಟೋಲ್ ಪ್ಲಾಜಾ(Sheshagirihalli Toll Plaza) ಬಳಿ ಕಳೆದ ಮಧ್ಯರಾತ್ರಿ ನಡೆದಿದೆ.
ಜಗಳ ನಡೆದು ಹತ್ಯೆಗೊಂಡ ಯುವಕ
ಜಗಳ ನಡೆದು ಹತ್ಯೆಗೊಂಡ ಯುವಕ

ರಾಮನಗರ: ಟೋಲ್​ ಪಡೆಯುವ ವಿಚಾರಕ್ಕೆ ಸಿಬ್ಬಂದಿ ಹಾಗೂ ಯುವಕರ ನಡುವೆ ಗಲಾಟೆ ನಡೆದು ಟೋಲ್ ಸಿಬ್ಬಂದಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯ ರಾಮನಗರ ‌ತಾಲೂಕಿನ ಶೇಷಗಿರಿಹಳ್ಳಿ‌ ಟೋಲ್ ಪ್ಲಾಜಾ(Sheshagirihalli Toll Plaza) ಬಳಿ ಕಳೆದ ಮಧ್ಯರಾತ್ರಿ ನಡೆದಿದೆ.

ಟೋಲ್​ ಪಡೆಯುವ ವಿಚಾರಕ್ಕೆ ಸಿಬ್ಬಂದಿ ಹಾಗೂ ಕಾರಿನಲ್ಲಿ ಬಂದಿದ್ದ ಯುವಕರ ನಡುವೆ ಮಾರಾಮಾರಿಯಾಗಿತ್ತು. ಇದನ್ನೇ ಮನಸಿನಲ್ಲಿಟ್ಟುಕೊಂಡಿದ್ದ ಯುವಕರು ಟೋಲ್​ನಲ್ಲಿ ಕೆಲಸ ಮಾಡ್ತಿದ್ದ ಪವನ್​ಕುಮಾರ್​(26 ವರ್ಷ) ಹತ್ಯೆ ಮಾಡಿದ್ದಾರೆ.

ಬೆಂಗಳೂರು ದಕ್ಷಿಣ ತಾಲೂಕಿನ ಕರಿಕಲ್ ತಾಂಡ್ಯ ನಿವಾಸಿ ಪವನ್​​ಕುಮಾರ್ ಕೆಲಸ ಮುಗಿಸಿ ಊಟಕ್ಕೆ ಹೋಗಿದ್ದಾಗ ಪವನ್ ‌ಮೇಲೆ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಟೋಲ್​ನಿಂದ ಹಿಂಬಾಲಿಸಿಕೊಂಡು ಬಂದು ದುಷ್ಕರ್ಮಿಗಳು ಪವನ್​​ ಹತ್ಯೆಗೈದಿದ್ದಾರೆ. ನಿನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ಟೋಲ್ ಬಳಿ ಗಲಾಟೆ ನಡೆದಿತ್ತು. ಬಳಿಕ ರಾತ್ರಿ 12 ಗಂಟೆಗೆ ಕೆಲಸ ಮುಗಿಸಿಕೊಂಡು ಊಟಕ್ಕೆಂದು ಪವನ್ ಹೊರಟ್ಟಿದ್ದ. ಈ ವೇಳೆ ಪವನ್​ನನ್ನು ಹಿಂಬಾಲಿಸಿದ ಯುವಕರು ಆತನ ಮೇಲೆ ಹಾಕಿ ಸ್ಟಿಕ್​ನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಹತ್ಯೆ ಮಾಡಿದ ಆರೋಪಿಗಳಿಗಾಗಿ ಬಿಡದಿ ಪೊಲೀಸರಿಂದ ಹುಡುಕಾಟ ನಡೆಯುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com